<p><strong>ನವದೆಹಲಿ</strong>: ‘ವಿದೇಶಕ್ಕೆ ಪರಾರಿಯಾಗಿರುವ ಅಪರಾಧಿಗಳನ್ನು ಹಸ್ತಾಂತರಿಸುವ ಪ್ರಯತ್ನಗಳನ್ನು ಬಲಪಡಿಸಲು ದೇಶದ ತನಿಖಾ ಸಂಸ್ಥೆಗಳ ನಡುವೆ ಸಮನ್ವಯ ಇನ್ನಷ್ಟು ಉತ್ತಮವಾಗುವುದರ ಜೊತೆಗೆ ದತ್ತಾಂಶ ಹಂಚಿಕೆ ಸುಗಮವಾಗಿ ಆಗಬೇಕಿದೆ’ ಎಂದು ಸಿಬಿಐ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. </p>.<p>‘ದೇಶಭ್ರಷ್ಟರ ಹಸ್ತಾಂತರ–ಸವಾಲುಗಳು ಹಾಗೂ ಕಾರ್ಯತಂತ್ರ’ ಕುರಿತಾಗಿ ನವದೆಹಲಿಯಲ್ಲಿ ಎರಡು ದಿನಗಳ ಕಾಲ ಕೇಂದ್ರಿಯ ತನಿಖಾ ಸಂಸ್ಥೆಯು (ಸಿಬಿಐ) ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಹಿರಿಯ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.</p>.<p class="bodytext">‘ದೇಶಕ್ಕೆ ಬೇಕಾದ ಅಪರಾಧಿಗಳ ಕುರಿತು ದತ್ತಾಂಶಗಳ ಸುಗಮ ಹಂಚಿಕೆಯ ಜೊತೆಗೆ ಸಮನ್ವಯದಿಂದ ಕೆಲಸ ಮಾಡಬೇಕೆಂದು ಸೂದ್ ಪ್ರತಿಪಾದಿಸಿದರು’ ಎಂದು ಸಂಸ್ಥೆಯ ವಕ್ತಾರರು ಹೇಳಿದ್ದಾರೆ.</p>.<p class="bodytext">‘ಎರಡು ದಿನದ ಸಮ್ಮೇಳನದಲ್ಲಿ ನಡೆದ ಚರ್ಚೆಗಳಿಂದ ಹೊಮ್ಮಿದ ವಿಷಯಗಳನ್ನು ಆಧರಿಸಿ ಭವಿಷ್ಯದ ಕಾರ್ಯಸೂಚಿ ಸಿದ್ಧಪಡಿಸಲು ಮಾರ್ಗದರ್ಶಿ ಸೂತ್ರ ಸಿದ್ಧಪಡಿಸಲಾಗಿದೆ’ ಎಂದು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಗೋವಿಂದ್ ಮೋಹನ್ ತಿಳಿಸಿದ್ದಾರೆ.</p>.<p class="bodytext">ವಿದೇಶಕ್ಕೆ ಪರಾರಿಯಾದ ಅಪರಾಧಿಗಳನ್ನು ದೇಶಕ್ಕೆ ಮರಳಿ ಕರೆತರಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ವಿಸ್ತೃತವಾಗಿ ಮಾಹಿತಿ ಹಂಚಿಕೊಂಡರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p class="bodytext">ದೇಶದ ವಿವಿಧ ರಾಜ್ಯ, ಸಿಬಿಐ, ಗೃಹ ಸಚಿವಾಲಯ, ವಿದೇಶಾಂಗ ಸಚಿವಾಲಯಕ್ಕೆ ಸೇರಿದ 200ಕ್ಕೂ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವಿದೇಶಕ್ಕೆ ಪರಾರಿಯಾಗಿರುವ ಅಪರಾಧಿಗಳನ್ನು ಹಸ್ತಾಂತರಿಸುವ ಪ್ರಯತ್ನಗಳನ್ನು ಬಲಪಡಿಸಲು ದೇಶದ ತನಿಖಾ ಸಂಸ್ಥೆಗಳ ನಡುವೆ ಸಮನ್ವಯ ಇನ್ನಷ್ಟು ಉತ್ತಮವಾಗುವುದರ ಜೊತೆಗೆ ದತ್ತಾಂಶ ಹಂಚಿಕೆ ಸುಗಮವಾಗಿ ಆಗಬೇಕಿದೆ’ ಎಂದು ಸಿಬಿಐ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. </p>.<p>‘ದೇಶಭ್ರಷ್ಟರ ಹಸ್ತಾಂತರ–ಸವಾಲುಗಳು ಹಾಗೂ ಕಾರ್ಯತಂತ್ರ’ ಕುರಿತಾಗಿ ನವದೆಹಲಿಯಲ್ಲಿ ಎರಡು ದಿನಗಳ ಕಾಲ ಕೇಂದ್ರಿಯ ತನಿಖಾ ಸಂಸ್ಥೆಯು (ಸಿಬಿಐ) ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಹಿರಿಯ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.</p>.<p class="bodytext">‘ದೇಶಕ್ಕೆ ಬೇಕಾದ ಅಪರಾಧಿಗಳ ಕುರಿತು ದತ್ತಾಂಶಗಳ ಸುಗಮ ಹಂಚಿಕೆಯ ಜೊತೆಗೆ ಸಮನ್ವಯದಿಂದ ಕೆಲಸ ಮಾಡಬೇಕೆಂದು ಸೂದ್ ಪ್ರತಿಪಾದಿಸಿದರು’ ಎಂದು ಸಂಸ್ಥೆಯ ವಕ್ತಾರರು ಹೇಳಿದ್ದಾರೆ.</p>.<p class="bodytext">‘ಎರಡು ದಿನದ ಸಮ್ಮೇಳನದಲ್ಲಿ ನಡೆದ ಚರ್ಚೆಗಳಿಂದ ಹೊಮ್ಮಿದ ವಿಷಯಗಳನ್ನು ಆಧರಿಸಿ ಭವಿಷ್ಯದ ಕಾರ್ಯಸೂಚಿ ಸಿದ್ಧಪಡಿಸಲು ಮಾರ್ಗದರ್ಶಿ ಸೂತ್ರ ಸಿದ್ಧಪಡಿಸಲಾಗಿದೆ’ ಎಂದು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಗೋವಿಂದ್ ಮೋಹನ್ ತಿಳಿಸಿದ್ದಾರೆ.</p>.<p class="bodytext">ವಿದೇಶಕ್ಕೆ ಪರಾರಿಯಾದ ಅಪರಾಧಿಗಳನ್ನು ದೇಶಕ್ಕೆ ಮರಳಿ ಕರೆತರಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ವಿಸ್ತೃತವಾಗಿ ಮಾಹಿತಿ ಹಂಚಿಕೊಂಡರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p class="bodytext">ದೇಶದ ವಿವಿಧ ರಾಜ್ಯ, ಸಿಬಿಐ, ಗೃಹ ಸಚಿವಾಲಯ, ವಿದೇಶಾಂಗ ಸಚಿವಾಲಯಕ್ಕೆ ಸೇರಿದ 200ಕ್ಕೂ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>