<p><strong>ನವದೆಹಲಿ</strong>: ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ, ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್ಐಎ) ವಶದಲ್ಲಿದ್ದಾನೆ.</p><p>ರಾಣಾನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್ಐಎ, ಆತನನ್ನು 20 ದಿನ ಕಸ್ಟಡಿಗೆ ನೀಡುವಂತೆ ಕೋರಿತು. ವಾದ–ಪ್ರತಿವಾದ ಆಲಿಸಿದ ನ್ಯಾಯಾಲಯ, ಈ ಕುರಿತ ಆದೇಶವನ್ನು ಕಾಯ್ದಿರಿಸಿತು.</p><p>ಗುರುವಾರ ಸಂಜೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಶೇಷ ವಿಮಾನದಿಂದ ಆರೋಪಿ ಹೊರಬರುತ್ತಿದ್ದಂತೆಯೇ ಎನ್ಐಎ ಅಧಿಕಾರಿಗಳು ಬಂಧಿಸಿದರು. ‘ಅಮೆರಿಕದಿಂದ ರಾಣಾನ ಹಸ್ತಾಂತರ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು, ನವದೆಹಲಿಗೆ ಬಂದಿಳಿದ ಕೂಡಲೇ ಬಂಧಿಸಲಾಯಿತು’ ಎಂದು ಎನ್ಐಎ ತಿಳಿಸಿದೆ.</p><p>ಮುಂಬೈ ದಾಳಿ ಘಟನೆ ನಡೆದ 16 ವರ್ಷಗಳ ನಂತರ ನಡೆದಿರುವ ಹಸ್ತಾಂತರ ಪ್ರಕ್ರಿಯೆಯು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಿಕ್ಕ ಬಲು ದೊಡ್ಡ ಜಯ ಎಂದು ವಿಶ್ಲೇಷಿಸಲಾಗಿದೆ. ಈ ದಾಳಿಯಲ್ಲಿ ಪಾಕಿಸ್ತಾನ ಸರ್ಕಾರದ ಪಾತ್ರವನ್ನು ಹೊರಗೆಳೆಯಲು ರಾಣಾ ಹಸ್ತಾಂತರವು ತನಿಖಾ ಸಂಸ್ಥೆಗಳಿಗೆ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಎನ್ಐಎ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಆರೋಪಿಯ ವೈದ್ಯಕೀಯ ಪರೀಕ್ಷೆ ಒಳಗೊಂಡಂತೆ ಹಸ್ತಾಂತರಕ್ಕೆ ಸಂಬಂಧಿಸಿದ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಬಂಧಿಸಿದರು. </p><p>ಆ ಬಳಿಕ ಬಿಗಿ ಭದ್ರತೆಯಲ್ಲಿ ವಿಶೇಷ ಎನ್ಐಎ ನ್ಯಾಯಾಧೀಶ ಚಂದರ್ಜೀತ್ ಸಿಂಗ್ ಮುಂದೆ ಹಾಜರುಪಡಿಸಲಾಯಿತು. ದೆಹಲಿ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲ ಪೀಯೂಷ್ ಸಚ್ದೇವ್ ಅವರು ಆರೋಪಿ ರಾಣಾ ಪರ ಹಾಜರಾದರು.</p>.<div><blockquote>ಹಸ್ತಾಂತರ ಪ್ರಕ್ರಿಯೆ ಯುಪಿಎ ಅವಧಿಯಲ್ಲೇ ಆರಂಭವಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ಅದರ ಶ್ರೇಯವನ್ನು ತನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದೆ</blockquote><span class="attribution">ಪಿ.ಚಿದಂಬರಂ, ಕಾಂಗ್ರೆಸ್ ನಾಯಕ</span></div>.<div><blockquote>ರಾಣಾ ಹಸ್ತಾಂತರವು ಮೋದಿ ಸರ್ಕಾರ ಮತ್ತು ದೇಶದ ಭದ್ರತಾ ಏಜೆನ್ಸಿಗಳ ‘ದೊಡ್ಡ ಸಾಧನೆ’. ಯುಪಿಎ ಸರ್ಕಾರ ಭಯೋತ್ಪಾದನೆ ಬಗ್ಗೆ ಮೃದು ಧೋರಣೆ ಹೊಂದಿತ್ತು</blockquote><span class="attribution">ಶೆಹಜಾದ್ ಪೂನಾವಾಲಾ, ಬಿಜೆಪಿ ರಾಷ್ಟ್ರೀಯ ವಕ್ತಾರ</span></div>.<p><strong>ದಯಾನ್ ಕೃಷ್ಣನ್ ನೇತೃತ್ವದಲ್ಲಿ ವಾದ</strong></p><p>ರಾಣಾನನ್ನು ಹಸ್ತಾಂತರಿಸುವ ಪ್ರಕ್ರಿಯೆಯಲ್ಲಿ ಅಮೆರಿಕದ ನ್ಯಾಯಾಲಯದಲ್ಲಿ ಭಾರತದ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ದಯಾನ್ ಕೃಷ್ಣನ್ ಅವರು ಎನ್ಐಎ ಪರ ವಕೀಲರ ತಂಡದ ನೇತೃತ್ವ ವಹಿಸಲಿದ್ದಾರೆ.</p><p>ಹಸ್ತಾಂತರ ಪ್ರಕ್ರಿಯೆಗೆ 2010ರಿಂದಲೂ ನೆರವು ನೀಡಿರುವ ಕೃಷ್ಣನ್ ಅವರಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನರೇಂದರ್ ಮಾನ್ ವಾದದಲ್ಲಿ ಸಹಾಯ ನೀಡಲಿದ್ದಾರೆ. ವಕೀಲರ ತಂಡದಲ್ಲಿ ಎನ್ಐಎ ನ್ಯಾಯವಾದಿ ಅಲ್ಲದೆ ವಕೀಲರಾದ ಸಂಜೀವಿ ಶೇಷಾದ್ರಿ<br>ಮತ್ತು ಶ್ರೀಧರ್ ಕಾಳೆ ಅವರೂ ಇರುವರು ಎಂದು ಮೂಲಗಳು ತಿಳಿಸಿವೆ.</p>.<p><strong>ದಿನದ ಬೆಳವಣಿಗೆ</strong></p><p>l ಗುರುವಾರ ಸಂಜೆ ನವದೆಹಲಿಗೆ ಬಂದಿಳಿದ ವಿಶೇಷ ವಿಮಾನ</p><p>l ಅಮೆರಿಕದ ಲಾಸ್ ಏಂಜಲೀಸ್ನಿಂದ ಬುಧವಾರ ಪ್ರಯಾಣ ಬೆಳೆಸಿದ್ದ ವಿಮಾನ</p><p>l ವಿಮಾನ ನಿಲ್ದಾಣದಲ್ಲೇ ಎನ್ಐಎ ಅಧಿಕಾರಿಗಳಿಂದ ಆರೋಪಿ ಬಂಧನ</p><p>l ರಾಣಾ ಪ್ರಕರಣದ ವಿಚಾರಣೆಗೆ ವಿಶೇಷ ಪ್ರಾಸಿಕ್ಯೂಟರ್ ಆಗಿ ನರೇಂದರ್ ಮಾನ್ ನೇಮಕ</p><p>l ವಿಚಾರಣೆಗೆ ಸಂಬಂಧಿಸಿದ ಕಡತಗಳನ್ನು ಮುಂಬೈನಿಂದ ತರಿಸಿಕೊಂಡ ನ್ಯಾಯಾಲಯ </p>.ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ರಾಣಾ ವಿಶೇಷ ವಿಮಾನದಲ್ಲಿ ಭಾರತಕ್ಕೆ ಇಂದು.ರಾಣಾ ನಮ್ಮ ದೇಶದ ಪ್ರಜೆಯಲ್ಲ: ಅಂತರ ಕಾಯ್ದುಕೊಂಡ ಪಾಕಿಸ್ತಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ, ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್ಐಎ) ವಶದಲ್ಲಿದ್ದಾನೆ.</p><p>ರಾಣಾನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್ಐಎ, ಆತನನ್ನು 20 ದಿನ ಕಸ್ಟಡಿಗೆ ನೀಡುವಂತೆ ಕೋರಿತು. ವಾದ–ಪ್ರತಿವಾದ ಆಲಿಸಿದ ನ್ಯಾಯಾಲಯ, ಈ ಕುರಿತ ಆದೇಶವನ್ನು ಕಾಯ್ದಿರಿಸಿತು.</p><p>ಗುರುವಾರ ಸಂಜೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಶೇಷ ವಿಮಾನದಿಂದ ಆರೋಪಿ ಹೊರಬರುತ್ತಿದ್ದಂತೆಯೇ ಎನ್ಐಎ ಅಧಿಕಾರಿಗಳು ಬಂಧಿಸಿದರು. ‘ಅಮೆರಿಕದಿಂದ ರಾಣಾನ ಹಸ್ತಾಂತರ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು, ನವದೆಹಲಿಗೆ ಬಂದಿಳಿದ ಕೂಡಲೇ ಬಂಧಿಸಲಾಯಿತು’ ಎಂದು ಎನ್ಐಎ ತಿಳಿಸಿದೆ.</p><p>ಮುಂಬೈ ದಾಳಿ ಘಟನೆ ನಡೆದ 16 ವರ್ಷಗಳ ನಂತರ ನಡೆದಿರುವ ಹಸ್ತಾಂತರ ಪ್ರಕ್ರಿಯೆಯು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಿಕ್ಕ ಬಲು ದೊಡ್ಡ ಜಯ ಎಂದು ವಿಶ್ಲೇಷಿಸಲಾಗಿದೆ. ಈ ದಾಳಿಯಲ್ಲಿ ಪಾಕಿಸ್ತಾನ ಸರ್ಕಾರದ ಪಾತ್ರವನ್ನು ಹೊರಗೆಳೆಯಲು ರಾಣಾ ಹಸ್ತಾಂತರವು ತನಿಖಾ ಸಂಸ್ಥೆಗಳಿಗೆ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಎನ್ಐಎ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಆರೋಪಿಯ ವೈದ್ಯಕೀಯ ಪರೀಕ್ಷೆ ಒಳಗೊಂಡಂತೆ ಹಸ್ತಾಂತರಕ್ಕೆ ಸಂಬಂಧಿಸಿದ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಬಂಧಿಸಿದರು. </p><p>ಆ ಬಳಿಕ ಬಿಗಿ ಭದ್ರತೆಯಲ್ಲಿ ವಿಶೇಷ ಎನ್ಐಎ ನ್ಯಾಯಾಧೀಶ ಚಂದರ್ಜೀತ್ ಸಿಂಗ್ ಮುಂದೆ ಹಾಜರುಪಡಿಸಲಾಯಿತು. ದೆಹಲಿ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲ ಪೀಯೂಷ್ ಸಚ್ದೇವ್ ಅವರು ಆರೋಪಿ ರಾಣಾ ಪರ ಹಾಜರಾದರು.</p>.<div><blockquote>ಹಸ್ತಾಂತರ ಪ್ರಕ್ರಿಯೆ ಯುಪಿಎ ಅವಧಿಯಲ್ಲೇ ಆರಂಭವಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ಅದರ ಶ್ರೇಯವನ್ನು ತನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದೆ</blockquote><span class="attribution">ಪಿ.ಚಿದಂಬರಂ, ಕಾಂಗ್ರೆಸ್ ನಾಯಕ</span></div>.<div><blockquote>ರಾಣಾ ಹಸ್ತಾಂತರವು ಮೋದಿ ಸರ್ಕಾರ ಮತ್ತು ದೇಶದ ಭದ್ರತಾ ಏಜೆನ್ಸಿಗಳ ‘ದೊಡ್ಡ ಸಾಧನೆ’. ಯುಪಿಎ ಸರ್ಕಾರ ಭಯೋತ್ಪಾದನೆ ಬಗ್ಗೆ ಮೃದು ಧೋರಣೆ ಹೊಂದಿತ್ತು</blockquote><span class="attribution">ಶೆಹಜಾದ್ ಪೂನಾವಾಲಾ, ಬಿಜೆಪಿ ರಾಷ್ಟ್ರೀಯ ವಕ್ತಾರ</span></div>.<p><strong>ದಯಾನ್ ಕೃಷ್ಣನ್ ನೇತೃತ್ವದಲ್ಲಿ ವಾದ</strong></p><p>ರಾಣಾನನ್ನು ಹಸ್ತಾಂತರಿಸುವ ಪ್ರಕ್ರಿಯೆಯಲ್ಲಿ ಅಮೆರಿಕದ ನ್ಯಾಯಾಲಯದಲ್ಲಿ ಭಾರತದ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ದಯಾನ್ ಕೃಷ್ಣನ್ ಅವರು ಎನ್ಐಎ ಪರ ವಕೀಲರ ತಂಡದ ನೇತೃತ್ವ ವಹಿಸಲಿದ್ದಾರೆ.</p><p>ಹಸ್ತಾಂತರ ಪ್ರಕ್ರಿಯೆಗೆ 2010ರಿಂದಲೂ ನೆರವು ನೀಡಿರುವ ಕೃಷ್ಣನ್ ಅವರಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನರೇಂದರ್ ಮಾನ್ ವಾದದಲ್ಲಿ ಸಹಾಯ ನೀಡಲಿದ್ದಾರೆ. ವಕೀಲರ ತಂಡದಲ್ಲಿ ಎನ್ಐಎ ನ್ಯಾಯವಾದಿ ಅಲ್ಲದೆ ವಕೀಲರಾದ ಸಂಜೀವಿ ಶೇಷಾದ್ರಿ<br>ಮತ್ತು ಶ್ರೀಧರ್ ಕಾಳೆ ಅವರೂ ಇರುವರು ಎಂದು ಮೂಲಗಳು ತಿಳಿಸಿವೆ.</p>.<p><strong>ದಿನದ ಬೆಳವಣಿಗೆ</strong></p><p>l ಗುರುವಾರ ಸಂಜೆ ನವದೆಹಲಿಗೆ ಬಂದಿಳಿದ ವಿಶೇಷ ವಿಮಾನ</p><p>l ಅಮೆರಿಕದ ಲಾಸ್ ಏಂಜಲೀಸ್ನಿಂದ ಬುಧವಾರ ಪ್ರಯಾಣ ಬೆಳೆಸಿದ್ದ ವಿಮಾನ</p><p>l ವಿಮಾನ ನಿಲ್ದಾಣದಲ್ಲೇ ಎನ್ಐಎ ಅಧಿಕಾರಿಗಳಿಂದ ಆರೋಪಿ ಬಂಧನ</p><p>l ರಾಣಾ ಪ್ರಕರಣದ ವಿಚಾರಣೆಗೆ ವಿಶೇಷ ಪ್ರಾಸಿಕ್ಯೂಟರ್ ಆಗಿ ನರೇಂದರ್ ಮಾನ್ ನೇಮಕ</p><p>l ವಿಚಾರಣೆಗೆ ಸಂಬಂಧಿಸಿದ ಕಡತಗಳನ್ನು ಮುಂಬೈನಿಂದ ತರಿಸಿಕೊಂಡ ನ್ಯಾಯಾಲಯ </p>.ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ರಾಣಾ ವಿಶೇಷ ವಿಮಾನದಲ್ಲಿ ಭಾರತಕ್ಕೆ ಇಂದು.ರಾಣಾ ನಮ್ಮ ದೇಶದ ಪ್ರಜೆಯಲ್ಲ: ಅಂತರ ಕಾಯ್ದುಕೊಂಡ ಪಾಕಿಸ್ತಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>