<p><strong>ನವದೆಹಲಿ:</strong> ಮುಂಬೈ ಮೇಲಿನ ಭಯೋತ್ಪಾದಕ ದಾಳಿ ಪ್ರಕರಣದ ಆರೋಪಿ ತಹವ್ವುರ್ ಹುಸೇನ್ ರಾಣಾಗೆ ಸಹೋದರನ ಜೊತೆ ದೂರವಾಣಿ ಮೂಲಕ ಈ ತಿಂಗಳಲ್ಲಿ ಮೂರು ಬಾರಿ ಮಾತನಾಡಲು ಅವಕಾಶ ನೀಡಿ ದೆಹಲಿಯ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದೆ ಎಂದು ಮೂಲಗಳು ತಿಳಿಸಿವೆ.</p>.<p>ಖಾಸಗಿ ವಕೀಲರ ನೇಮಕ ವಿಚಾರ ಚರ್ಚಿಸುವ ಸಲುವಾಗಿ ಕೋರ್ಟ್ ಈ ಅವಕಾಶ ನೀಡಿದೆ ಎಂದು ತಿಳಿಸಿವೆ.</p>.<p>ಇದೇ ಸಂದರ್ಭದಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಚಂದರ್ಜಿತ್ ಸಿಂಗ್ ಅವರು, ರಾಣಾ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 8ರವರೆಗೆ ವಿಸ್ತರಿಸಿದರು.</p>.<p>ರಾಣಾ ಮಾತುಕತೆಯ ದೂರವಾಣಿ ಕರೆಯನ್ನು ದಾಖಲಿಸಬೇಕು. ಮಾತುಕತೆಯು ಜೈಲು ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ನಡೆಯಬೇಕು ಮತ್ತು ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿಯೇ ಇರಬೇಕು ಎಂಬ ನಿರ್ದೇಶನ ನೀಡಿದರು ಎಂದು ಮೂಲಗಳು ಹೇಳಿವೆ.</p>.<p>2008ರ ನವೆಂಬರ್ 26ರಂದು ಪಾಕಿಸ್ತಾನದ 10 ಮಂದಿ ಭಯೋತ್ಪಾದಕರು ಮುಂಬೈ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 166 ಮಂದಿ ಜೀವ ಕಳೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬೈ ಮೇಲಿನ ಭಯೋತ್ಪಾದಕ ದಾಳಿ ಪ್ರಕರಣದ ಆರೋಪಿ ತಹವ್ವುರ್ ಹುಸೇನ್ ರಾಣಾಗೆ ಸಹೋದರನ ಜೊತೆ ದೂರವಾಣಿ ಮೂಲಕ ಈ ತಿಂಗಳಲ್ಲಿ ಮೂರು ಬಾರಿ ಮಾತನಾಡಲು ಅವಕಾಶ ನೀಡಿ ದೆಹಲಿಯ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದೆ ಎಂದು ಮೂಲಗಳು ತಿಳಿಸಿವೆ.</p>.<p>ಖಾಸಗಿ ವಕೀಲರ ನೇಮಕ ವಿಚಾರ ಚರ್ಚಿಸುವ ಸಲುವಾಗಿ ಕೋರ್ಟ್ ಈ ಅವಕಾಶ ನೀಡಿದೆ ಎಂದು ತಿಳಿಸಿವೆ.</p>.<p>ಇದೇ ಸಂದರ್ಭದಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಚಂದರ್ಜಿತ್ ಸಿಂಗ್ ಅವರು, ರಾಣಾ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 8ರವರೆಗೆ ವಿಸ್ತರಿಸಿದರು.</p>.<p>ರಾಣಾ ಮಾತುಕತೆಯ ದೂರವಾಣಿ ಕರೆಯನ್ನು ದಾಖಲಿಸಬೇಕು. ಮಾತುಕತೆಯು ಜೈಲು ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ನಡೆಯಬೇಕು ಮತ್ತು ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿಯೇ ಇರಬೇಕು ಎಂಬ ನಿರ್ದೇಶನ ನೀಡಿದರು ಎಂದು ಮೂಲಗಳು ಹೇಳಿವೆ.</p>.<p>2008ರ ನವೆಂಬರ್ 26ರಂದು ಪಾಕಿಸ್ತಾನದ 10 ಮಂದಿ ಭಯೋತ್ಪಾದಕರು ಮುಂಬೈ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 166 ಮಂದಿ ಜೀವ ಕಳೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>