ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಜ್ ಮಹಲ್, ಕುತುಬ್ ಮಿನಾರ್ ಕೆಡವಬೇಕು: ಬಿಜೆಪಿ ಶಾಸಕ

Last Updated 5 ಏಪ್ರಿಲ್ 2023, 16:12 IST
ಅಕ್ಷರ ಗಾತ್ರ

ಗುವಾಹಟಿ: ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಿ ಅಲ್ಲಿ ವಿಶ್ವದ ಅತ್ಯಂತ ಸುಂದರ ದೇವಾಲಯವನ್ನು ನಿರ್ಮಾಣ ಮಾಡಬೇಕು ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ.

ಅಸ್ಸಾಂನ ಮರಿಯಾನಿ ಕ್ಷೇತ್ರದ ಬಿಜೆಪಿ ಶಾಸಕ ರೂಪ್​​ಜ್ಯೋತಿ ಕುರ್ಮಿ ಅವರು ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಇರುವ ಜಾಗದಲ್ಲಿ ದೇವಾಲಯ ನಿರ್ಮಾಣ ಮಾಡಬೇಕು ಇದಕ್ಕಾಗಿ ನನ್ನ ಒಂದು ವರ್ಷದ ವೇತನವನ್ನು ದೇಣಿಗೆ ನೀಡುವೆ ಎಂದಿದ್ದಾರೆ.

1500ರಲ್ಲಿ ಭಾರತಕ್ಕೆ ಬಂದ ಮೊಘಲರ ಬಗ್ಗೆ ವಿದ್ಯಾರ್ಥಿಗಳು ಅಧ್ಯಯನ ಮಾಡಬಾರದು. ನಮ್ಮ ರಾಜರುಗಳ ಬಗ್ಗೆ ಅವರು ಅಧ್ಯಯನ ಮಾಡಬೇಕು ಎಂದರು.

ಪಠ್ಯ ಪುಸ್ತಕದಿಂದ ಮೊಘಲ್ ಇತಿಹಾಸ ತೆಗೆದುಹಾಕುವ ಕುರಿತು ನಡೆಯುತ್ತಿರುವ ಚರ್ಚೆಯ ನಡುವೆಯೇ ಬಿಜೆಪಿ ಶಾಸಕರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಅವರ ಹೇಳಿಕೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT