ಲಾಹೋರ್ನಲ್ಲಿ 'ಪಂಜಾಬ್ ಸರ್ಕಾರದ 100 ದಿನದ ಸಾಧನೆ' ಕಾರ್ಯಕ್ರಮದಲ್ಲಿ ಮಾತನಾಡಿದ್ದ ಇಮ್ರಾನ್ ಖಾನ್, ಅಲ್ಪ ಸಂಖ್ಯಾತರನ್ನು ಹೇಗೆ ನೋಡಿಕೊಳ್ಳಬೇಕೆಂದು ನಾವು ಮೋದಿ ಸರ್ಕಾರಕ್ಕೆ ತೋರಿಸಿಕೊಡುತ್ತೇವೆ. ಭಾರತದಲ್ಲಿ ಅಲ್ಪ ಸಂಖ್ಯಾತರನ್ನು ಇತರ ಪ್ರಜೆಗಳಿಗೆ ಸಮಾನವಾಗಿ ನೋಡಿಕೊಳ್ಳುತ್ತಿಲ್ಲ. ಗುಂಪುದಾಳಿ ಬಗ್ಗೆ ಶಾ ಅವರ ಈ ಹೇಳಿಕೆಯನ್ನು ಉಲ್ಲೇಖಿಸಿದ ಖಾನ್ ನಾವು ಅಲ್ಪ ಸಂಖ್ಯಾತರಿಗೆ ರಕ್ಷಣೆ ನೀಡುವ ಮೂಲಕ ಅವರ ಹೊಸ ಪಾಕಿಸ್ತಾನದಲ್ಲಿ ಅವರ ಹಕ್ಕುಗಳನ್ನು ಕಾಪಾಡುತ್ತೇವೆ ಎಂದಿದ್ದರು. ಖಾನ್ ಅವರ ಈ ಹೇಳಿಕೆಗೆ ಶಾ ಅವರು ಖಾರವಾಗಿಯೇ ಪ್ರತಿಕ್ರಿಯೆ ನೀಡಿರುವುದಾಗಿ ಸಂಡೇ ಎಕ್ಸ್ ಪ್ರೆಸ್ ವರದಿ ಮಾಡಿದೆ.