ನವದೆಹಲಿ: ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚನಾತ್ಮಕ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಇದು ಎಚ್ಚರಿಕೆಯ ಗಂಟೆಯಾಗಿದೆ. ಕೋವಿಡ್ ತಡೆಗಟ್ಟಿ ಜನರ ಜೀವ ಉಳಿಸಲು ಮತ್ತು ಸೋಂಕು ಹರಡುವಿಕೆಯನ್ನು ತಡೆಯಲು ರಚನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವ ಸಮಯ ಇದಾಗಿದೆ’ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ಸರ್ಕಾರ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯನ್ನು ಮರೆಮಾಚುತ್ತಿದೆ ಎಂದು ಬುಧವಾರ ಕಾಂಗ್ರೆಸ್ ಆರೋಪಿಸಿದ್ದು, ರಾಜ್ಯ ಸರ್ಕಾರ ಆರಂಭದಿಂದಲ್ಲೂ ಎಚ್ಚರಿಕೆ ವಹಿಸಿದ್ದರೆ ಕೋವಿಡ್ ಹರಡುವಿಕೆಯನ್ನು ತಡೆಯಬಹುದಿತ್ತು ಎಂದು ವಾದಿಸಿತ್ತು.
ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ 12ನೇ ತರಗತಿ ವರೆಗಿನ ಎಲ್ಲ ಶಾಲೆಗಳನ್ನು ಮೇ 15ರವರೆಗೆ ಮುಚ್ಚುವಂತೆ ಹಾಗೂ 10 ಮತ್ತು 12ನೇ ತರಗತಿಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮೇ 20ಕ್ಕೆ ಮುಂದೂಡಿ ಸರ್ಕಾರ ಗುರುವಾರ ಆದೇಶಿಸಿದೆ.
अपना समय, संसाधन और ऊर्जा इस त्रासदी को छुपाने, दबाने में लगाना व्यर्थ है। महामारी को रोकने, लोगों की जान बचाने, संक्रमण को फैलने से रोकने के लिए ठोस कदम उठाइए। यही वक्त की पुकार है। pic.twitter.com/xwKrfyav4o
— Priyanka Gandhi Vadra (@priyankagandhi) April 15, 2021
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.