<p><strong>ರಾಜಾಮಹೇಂದ್ರವರಂ:</strong> ಭ್ರಷ್ಟಾಚಾರ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಹಣವನ್ನು ಜನರಿಗೆ ಮರಳಿಸುವ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯವನ್ನು ಪಡೆಯಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.</p>.<p>ಆಂಧ್ರಪ್ರದೇಶದ ವೇಮಗಿರಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಜಾರಿ ನಿರ್ದೇಶನಾಲಯದ ದಾಳಿಯ ವೇಳೆ ಜಾರ್ಖಂಡ್ ಸಚಿವರೊಬ್ಬರ ಕಾರ್ಯದರ್ಶಿಯ ಮನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಹಣ ಪತ್ತೆಯಾಗಿರುವ ಬಗ್ಗೆ ಕಿಡಿಕಾರಿದರು.</p>.<p>‘ಇಂತಹ ವ್ಯಕ್ತಿಗಳು ಕಾಂಗ್ರೆಸ್ ಪರಿವಾರಕ್ಕೆ ಆಪ್ತರಾಗಿರುತ್ತಾರೆ. ಕಾಂಗ್ರೆಸ್ನವರು ತಮ್ಮ ಪಕ್ಷದ ಕಾರ್ಯಕರ್ತರ ಮನೆಯನ್ನು ಭ್ರಷ್ಟಾಚಾರದ ಗೋದಾಮು ಮಾಡಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಜಪ್ತಿ ಮಾಡಿಕೊಳ್ಳುತ್ತಿರುವುದು ಇದೇ ಮೊದಲಲ್ಲ’ ಎಂದು ಟೀಕಿಸಿದರು</p>.<p>‘ಹಣ ಕೊಳ್ಳೆ ಹೊಡೆಯುವವರೆಲ್ಲ ಏಕೆ ಕಾಂಗ್ರೆಸ್ನ ಮೊದಲ ಪರಿವಾರಕ್ಕೆ ಆಪ್ತರಾಗಿರುತ್ತಾರೆ? ಕಾಂಗ್ರೆಸ್ನ ಮೊದಲ ಪರಿವಾರ ಕಪ್ಪುಹಣದ ಗೋದಾಮನ್ನು ನಿರ್ಮಿಸಿದೆಯೇ? ದೇಶ ಇದನ್ನು ತಿಳಿಯಲು ಬಯಸುತ್ತಿದೆ’ ಎಂದು ಹೇಳಿದರು.</p>.<p>‘ಇ.ಡಿ ₹1.25 ಲಕ್ಷ ಕೋಟಿ ಆಸ್ತಿಯನ್ನು ಈವರೆಗೆ ಜಪ್ತಿ ಮಾಡಿದೆ. ಇತರ ತನಿಖಾ ಸಂಸ್ಥೆಗಳು ಜಪ್ತಿ ಮಾಡಿರುವುದನ್ನು ಸೇರಿಸಿದರೆ ಈ ಮೊತ್ತ ಹೆಚ್ಚಾಗುತ್ತದೆ. ಈಗಾಗಲೇ ₹17000 ಕೋಟಿ ಹಣವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಬಡಜನರ ಹಕ್ಕುಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಇದು ಮೋದಿ ಗ್ಯಾರಂಟಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜಾಮಹೇಂದ್ರವರಂ:</strong> ಭ್ರಷ್ಟಾಚಾರ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಹಣವನ್ನು ಜನರಿಗೆ ಮರಳಿಸುವ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯವನ್ನು ಪಡೆಯಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.</p>.<p>ಆಂಧ್ರಪ್ರದೇಶದ ವೇಮಗಿರಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಜಾರಿ ನಿರ್ದೇಶನಾಲಯದ ದಾಳಿಯ ವೇಳೆ ಜಾರ್ಖಂಡ್ ಸಚಿವರೊಬ್ಬರ ಕಾರ್ಯದರ್ಶಿಯ ಮನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಹಣ ಪತ್ತೆಯಾಗಿರುವ ಬಗ್ಗೆ ಕಿಡಿಕಾರಿದರು.</p>.<p>‘ಇಂತಹ ವ್ಯಕ್ತಿಗಳು ಕಾಂಗ್ರೆಸ್ ಪರಿವಾರಕ್ಕೆ ಆಪ್ತರಾಗಿರುತ್ತಾರೆ. ಕಾಂಗ್ರೆಸ್ನವರು ತಮ್ಮ ಪಕ್ಷದ ಕಾರ್ಯಕರ್ತರ ಮನೆಯನ್ನು ಭ್ರಷ್ಟಾಚಾರದ ಗೋದಾಮು ಮಾಡಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಜಪ್ತಿ ಮಾಡಿಕೊಳ್ಳುತ್ತಿರುವುದು ಇದೇ ಮೊದಲಲ್ಲ’ ಎಂದು ಟೀಕಿಸಿದರು</p>.<p>‘ಹಣ ಕೊಳ್ಳೆ ಹೊಡೆಯುವವರೆಲ್ಲ ಏಕೆ ಕಾಂಗ್ರೆಸ್ನ ಮೊದಲ ಪರಿವಾರಕ್ಕೆ ಆಪ್ತರಾಗಿರುತ್ತಾರೆ? ಕಾಂಗ್ರೆಸ್ನ ಮೊದಲ ಪರಿವಾರ ಕಪ್ಪುಹಣದ ಗೋದಾಮನ್ನು ನಿರ್ಮಿಸಿದೆಯೇ? ದೇಶ ಇದನ್ನು ತಿಳಿಯಲು ಬಯಸುತ್ತಿದೆ’ ಎಂದು ಹೇಳಿದರು.</p>.<p>‘ಇ.ಡಿ ₹1.25 ಲಕ್ಷ ಕೋಟಿ ಆಸ್ತಿಯನ್ನು ಈವರೆಗೆ ಜಪ್ತಿ ಮಾಡಿದೆ. ಇತರ ತನಿಖಾ ಸಂಸ್ಥೆಗಳು ಜಪ್ತಿ ಮಾಡಿರುವುದನ್ನು ಸೇರಿಸಿದರೆ ಈ ಮೊತ್ತ ಹೆಚ್ಚಾಗುತ್ತದೆ. ಈಗಾಗಲೇ ₹17000 ಕೋಟಿ ಹಣವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಬಡಜನರ ಹಕ್ಕುಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಇದು ಮೋದಿ ಗ್ಯಾರಂಟಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>