‘ಮಣಿಪುರದಲ್ಲಿ ಶಾಂತಿ ನೆಲೆಸಬೇಕು ಎಂದು ಯಾರಾದರೂ ಬಯಸುವುದಾದರೆ, ಶಸ್ತ್ರಾಸ್ತ್ರ ಎತ್ತಿಕೊಳ್ಳಬೇಡಿ ಎಂದು ಮೈತೇಯಿ ಹಾಗೂ ಕುಕಿ ಸಮುದಾಯದವರೊಂದಿಗೆ ವಿನಂತಿಸಿಕೊಳ್ಳಿ. ಶಸ್ತ್ರಾಸ್ತ್ರ ಹೋರಾಟದಿಂದ ಪರಿಹಾರ ಅಸಾಧ್ಯ. ಮಾತುಕತೆಯಿಂದಾಗಿ ಶಾಂತಿ ಮರಳಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.
ಮಣಿಪುರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆ ಹಾಗೂ ಸಂಸತ್ನಲ್ಲೂ ಶಾಂತಿ ಕಾಪಾಡಲು ಮನವಿ ಮಾಡಿದ್ದರು ಎಂದು ರಿಜಿಜು ಹೇಳಿದ್ದಾರೆ.