<p><strong>ಅಮರಾವತಿ</strong>: ಆಂಧ್ರಪ್ರದೇಶ ಸರ್ಕಾರದ ಆರು ಪ್ರಮುಖ ಕಲ್ಯಾಣ ಕಾರ್ಯಕ್ರಮಗಳಲ್ಲಿ ‘ತಲ್ಲಿಕಿ ವಂದನಂ’ (ತಾಯಿಗೆ ವಂದನೆ) ಅತ್ಯಂತ ಮಹತ್ವದ್ದು, ಶಾಲೆಗೆ ಹೋಗುವ ಪ್ರತಿ ಮನೆಯ ಹೆಣ್ಣು ಮಕ್ಕಳಿಗೆ ಈ ಯೋಜನೆ ವಾರ್ಷಿಕ ₹15,000 ಒದಗಿಸಲಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಗುರುವಾರ ಹೇಳಿದ್ದಾರೆ.</p>.<p>ಉಂಡವಲ್ಲಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಂದ್ರಬಾಬು ನಾಯ್ಡು ಅವರು, ‘ಟಿಡಿಪಿ ನೇತೃತ್ವದ ಸರ್ಕಾರ ಶಿಕ್ಷಣವನ್ನು ಉತ್ತೇಜಿಸುವ ಸಲುವಾಗಿ ‘ತಲ್ಲಿಕಿ ವಂದನಂ’ ಯೋಜನೆಯ ಅಡಿ ₹10,091 ಕೋಟಿ ವೆಚ್ಚ ಮಾಡಲಿದೆ’ ಎಂದು ತಿಳಿಸಿದರು.</p>.<p>2024ರ ಚುನಾವಣೆ ವೇಳೆ ನಾಯ್ಡು ಅವರು ‘ಸೂಪರ್ ಸಿಕ್ಸ್’ ಶೀರ್ಷಿಕೆ ಅಡಿ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಿಸಿದ್ದರು. 19–59 ವರ್ಷದ ಮಹಿಳೆಯರಿಗೆ ಮಾಸಿಕ ₹1,500, ಯುವಕರಿಗೆ 20 ಲಕ್ಷ ಉದ್ಯೋಗ ಅಥವಾ ಮಾಸಿಕ ₹3,000 ನಿರುದ್ಯೋಗ ಭತ್ಯೆ ಮತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗಳನ್ನು ಪ್ರಕಟಿಸಿದ್ದರು.</p>.<p>‘ಒಂದು ಮನೆಯಲ್ಲಿ ಎರಡು ಅಥವಾ ಅದಕ್ಕೂ ಹೆಚ್ಚು ಮಕ್ಕಳಿದ್ದರೆ ಒಂದೇ ಮಗುವಿಗೆ ಸೌಲಭ್ಯ ನೀಡುವುದು ಸರಿಯಲ್ಲ. ಹೀಗಾಗಿ ಕುಟುಂಬದ ಎಲ್ಲ ಮಕ್ಕಳಿಗೂ ಯೋಜನೆಯ ಸೌಲಭ್ಯ ಸಿಗಲಿದ್ದು, 67 ಲಕ್ಷಕ್ಕೂ ಹೆಚ್ಚು ಜನರು ಇದರ ಲಾಭ ಪಡೆಯಲಿದ್ದಾರೆ. ₹1,346 ಕೋಟಿ ವೆಚ್ಚದಲ್ಲಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಆಂಧ್ರಪ್ರದೇಶ ಸರ್ಕಾರದ ಆರು ಪ್ರಮುಖ ಕಲ್ಯಾಣ ಕಾರ್ಯಕ್ರಮಗಳಲ್ಲಿ ‘ತಲ್ಲಿಕಿ ವಂದನಂ’ (ತಾಯಿಗೆ ವಂದನೆ) ಅತ್ಯಂತ ಮಹತ್ವದ್ದು, ಶಾಲೆಗೆ ಹೋಗುವ ಪ್ರತಿ ಮನೆಯ ಹೆಣ್ಣು ಮಕ್ಕಳಿಗೆ ಈ ಯೋಜನೆ ವಾರ್ಷಿಕ ₹15,000 ಒದಗಿಸಲಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಗುರುವಾರ ಹೇಳಿದ್ದಾರೆ.</p>.<p>ಉಂಡವಲ್ಲಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಂದ್ರಬಾಬು ನಾಯ್ಡು ಅವರು, ‘ಟಿಡಿಪಿ ನೇತೃತ್ವದ ಸರ್ಕಾರ ಶಿಕ್ಷಣವನ್ನು ಉತ್ತೇಜಿಸುವ ಸಲುವಾಗಿ ‘ತಲ್ಲಿಕಿ ವಂದನಂ’ ಯೋಜನೆಯ ಅಡಿ ₹10,091 ಕೋಟಿ ವೆಚ್ಚ ಮಾಡಲಿದೆ’ ಎಂದು ತಿಳಿಸಿದರು.</p>.<p>2024ರ ಚುನಾವಣೆ ವೇಳೆ ನಾಯ್ಡು ಅವರು ‘ಸೂಪರ್ ಸಿಕ್ಸ್’ ಶೀರ್ಷಿಕೆ ಅಡಿ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಿಸಿದ್ದರು. 19–59 ವರ್ಷದ ಮಹಿಳೆಯರಿಗೆ ಮಾಸಿಕ ₹1,500, ಯುವಕರಿಗೆ 20 ಲಕ್ಷ ಉದ್ಯೋಗ ಅಥವಾ ಮಾಸಿಕ ₹3,000 ನಿರುದ್ಯೋಗ ಭತ್ಯೆ ಮತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗಳನ್ನು ಪ್ರಕಟಿಸಿದ್ದರು.</p>.<p>‘ಒಂದು ಮನೆಯಲ್ಲಿ ಎರಡು ಅಥವಾ ಅದಕ್ಕೂ ಹೆಚ್ಚು ಮಕ್ಕಳಿದ್ದರೆ ಒಂದೇ ಮಗುವಿಗೆ ಸೌಲಭ್ಯ ನೀಡುವುದು ಸರಿಯಲ್ಲ. ಹೀಗಾಗಿ ಕುಟುಂಬದ ಎಲ್ಲ ಮಕ್ಕಳಿಗೂ ಯೋಜನೆಯ ಸೌಲಭ್ಯ ಸಿಗಲಿದ್ದು, 67 ಲಕ್ಷಕ್ಕೂ ಹೆಚ್ಚು ಜನರು ಇದರ ಲಾಭ ಪಡೆಯಲಿದ್ದಾರೆ. ₹1,346 ಕೋಟಿ ವೆಚ್ಚದಲ್ಲಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>