<p><strong>ಚೆನ್ನೈ</strong>: ಆಡಳಿತಾರೂಢ ಡಿಎಂಕೆಯು ತನ್ನ ಮಿತ್ರಪಕ್ಷಗಳೊಂದಿಗೆ ಚರ್ಚಿಸಲು ಪಕ್ಷದ ಹಿರಿಯ ನಾಯಕ ಟಿ.ಆರ್. ಬಾಲು ನೇತೃತ್ವದಲ್ಲಿ ಏಳು ಸದಸ್ಯರ ಸೀಟು ಹಂಚಿಕೆ ಸಮಿತಿಯನ್ನು ಶನಿವಾರ ರಚಿಸಿದೆ.</p>.<p>ಮುಂಬರುವ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆಯ ಮಾತುಕತೆಯನ್ನು ಮಿತ್ರಪಕ್ಷಗಳೊಂದಿಗೆ ಫೆ.22ರ ಭಾನುವಾರದಿಂದಲೇ ಆರಂಭಿಸುವ ಸಾಧ್ಯತೆಯಿದೆ ಎಂದು ಡಿಎಂಕೆಯ ಮೂಲಗಳು ತಿಳಿಸಿವೆ.</p>.<p>ಮೈತ್ರಿಕೂಟದಲ್ಲಿ ಡಿಎಂಡಿಕೆಯನ್ನು ಒಳಗೊಳ್ಳುವುದರ ಜೊತೆಗೆ, ಕಾಂಗ್ರೆಸ್ಗೆ ಹೆಚ್ಚಿನ ಸ್ಥಾನಗಳನ್ನು ಬಿಟ್ಟುಕೊಡುವ ಸಾಧ್ಯತೆಯಿದೆ ಎನ್ನಲಾಗಿದೆ.</p>.<p>ವಿಜಯಕಾಂತ್ ಸ್ಥಾಪಿಸಿರುವ ಡಿಎಂಡಿಕೆಯನ್ನು ತಮ್ಮ ಒಕ್ಕೂಟಕ್ಕೆ ಸೆಳೆಯಲು ಡಿಎಂಕೆ ಹಾಗೂ ಎಐಎಡಿಎಂಕೆ ನಡುವೆ ಹಗ್ಗಜಗ್ಗಾಟ ನಡೆದಿದೆ.</p>.<p>ಡಿಎಂಕೆಯು ಸಮಿತಿ ರಚಿಸಿದ ಬೆನ್ನಿಗೆ ಎಂಡಿಎಂಕೆ ಪಕ್ಷವು ಸಹ ನಾಲ್ವರು ಸದಸ್ಯರ ಸಮಿತಿ ರಚಿಸಿದ್ದು, ಸೀಟು ಹಂಚಿಕೆಯ ಮಾತುಕತೆ ನಡೆಸಲಿದೆ ಎಂದು ಎಂಡಿಎಂಕೆ ಮುಖ್ಯಸ್ಥ ವೈಕೊ ತಿಳಿಸಿದ್ದಾರೆ.</p>.<p>ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅವಕಾಶವಿಲ್ಲ ಎಂದಿರುವ ವೈಕೊ, ಸ್ಟಾಲಿನ್ ಬಹುಮತದಿಂದ ಅಧಿಕಾರಕ್ಕೆ ಮರಳುತ್ತಾರೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಆಡಳಿತಾರೂಢ ಡಿಎಂಕೆಯು ತನ್ನ ಮಿತ್ರಪಕ್ಷಗಳೊಂದಿಗೆ ಚರ್ಚಿಸಲು ಪಕ್ಷದ ಹಿರಿಯ ನಾಯಕ ಟಿ.ಆರ್. ಬಾಲು ನೇತೃತ್ವದಲ್ಲಿ ಏಳು ಸದಸ್ಯರ ಸೀಟು ಹಂಚಿಕೆ ಸಮಿತಿಯನ್ನು ಶನಿವಾರ ರಚಿಸಿದೆ.</p>.<p>ಮುಂಬರುವ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆಯ ಮಾತುಕತೆಯನ್ನು ಮಿತ್ರಪಕ್ಷಗಳೊಂದಿಗೆ ಫೆ.22ರ ಭಾನುವಾರದಿಂದಲೇ ಆರಂಭಿಸುವ ಸಾಧ್ಯತೆಯಿದೆ ಎಂದು ಡಿಎಂಕೆಯ ಮೂಲಗಳು ತಿಳಿಸಿವೆ.</p>.<p>ಮೈತ್ರಿಕೂಟದಲ್ಲಿ ಡಿಎಂಡಿಕೆಯನ್ನು ಒಳಗೊಳ್ಳುವುದರ ಜೊತೆಗೆ, ಕಾಂಗ್ರೆಸ್ಗೆ ಹೆಚ್ಚಿನ ಸ್ಥಾನಗಳನ್ನು ಬಿಟ್ಟುಕೊಡುವ ಸಾಧ್ಯತೆಯಿದೆ ಎನ್ನಲಾಗಿದೆ.</p>.<p>ವಿಜಯಕಾಂತ್ ಸ್ಥಾಪಿಸಿರುವ ಡಿಎಂಡಿಕೆಯನ್ನು ತಮ್ಮ ಒಕ್ಕೂಟಕ್ಕೆ ಸೆಳೆಯಲು ಡಿಎಂಕೆ ಹಾಗೂ ಎಐಎಡಿಎಂಕೆ ನಡುವೆ ಹಗ್ಗಜಗ್ಗಾಟ ನಡೆದಿದೆ.</p>.<p>ಡಿಎಂಕೆಯು ಸಮಿತಿ ರಚಿಸಿದ ಬೆನ್ನಿಗೆ ಎಂಡಿಎಂಕೆ ಪಕ್ಷವು ಸಹ ನಾಲ್ವರು ಸದಸ್ಯರ ಸಮಿತಿ ರಚಿಸಿದ್ದು, ಸೀಟು ಹಂಚಿಕೆಯ ಮಾತುಕತೆ ನಡೆಸಲಿದೆ ಎಂದು ಎಂಡಿಎಂಕೆ ಮುಖ್ಯಸ್ಥ ವೈಕೊ ತಿಳಿಸಿದ್ದಾರೆ.</p>.<p>ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅವಕಾಶವಿಲ್ಲ ಎಂದಿರುವ ವೈಕೊ, ಸ್ಟಾಲಿನ್ ಬಹುಮತದಿಂದ ಅಧಿಕಾರಕ್ಕೆ ಮರಳುತ್ತಾರೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>