ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರು ತಮಿಳುನಾಡಿನ ಅರಾವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಸೋಲುಗಳು ಜೀವನದ ಒಂದು ಭಾಗವಾಗಿದ್ದು, ಇಂತಹ ಹಲವು ಸೋಲುಗಳನ್ನು ನೋಡಿದ್ದೇನೆ. ಗೆಲುವಿನ ನಿರೀಕ್ಷೆ ಇತ್ತು. ಆದರೆ, ಅದು ಸಾಧ್ಯವಾಗಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.
ಅರಾವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ನನಗೆ 68 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ ಮತದಾರರಿಗೆ ನನ್ನ ಧನ್ಯವಾದಗಳು ಎಂದಿದ್ದಾರೆ.
ನನ್ನ ಪರವಾಗಿ ಶ್ರಮಿಸಿದ ಪಕ್ಷದ ಹಿರಿಯರಿಗೂ, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ.
Losses are part of life. Have seen many & today is one such day. Wanted to but couldn’t cross the finish line!
Sincerely thank all the 68000+ voters for voting for BJP in Aravakurichi.
Time to dust up, keep working hard & involve totally in @BJP4India work more vigorously!
ಐಪಿಎಸ್ಗೆ ರಾಜೀನಾಮೆ ನೀಡಿದ ಬಳಿಕ ಕರೂರು ಜಿಲ್ಲೆಯ ತಮ್ಮ ಹುಟ್ಟೂರಲ್ಲಿ ನೆಲೆಯಾದ ಅಣ್ಣಾಮಲೈ ಅವರು ವಿದ್ಯಾರ್ಥಿಗಳಿಗೆ ನೆರವಾಗುವುದಕ್ಕಾಗಿ ಪ್ರತಿಷ್ಠಾನವೊಂದನ್ನು ಆರಂಭಿಸಿದ್ದರು. ಅವರು ಸ್ಪರ್ಧಿಸಿರುವ ಅರವಿಕುರಿಚಿ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯೇನೂ ಇರಲ್ಲಿಲ್ಲ. ಮತ ಸೆಳೆಯಲು ಮಿತ್ರಪಕ್ಷ ಎಐಎಡಿಎಂಕೆಯ ಮೇಲೆಯೇ ಅವಲಂಬಿತರಾಗಿದ್ದರು. ಜತೆಗೆ, ಪ್ರತಿಸ್ಪರ್ಧಿಗಳು ಪ್ರಭಾವಿಗಳಾಗಿರುವುದರಿಂದ ಅಣ್ಣಾಮಲೈ ಮುಂದೆ ದೊಡ್ಡ ಸವಾಲೇ ಇತ್ತು.