ಈಗಾಗಲೇ ಎಐಎಸ್ಎಂಕೆ ಮತ್ತು ಎಂಎನ್ಎಂ ಪಕ್ಷಗಳ ಮೈತ್ರಿ ಖಚಿತಪಟ್ಟಿದ್ದು, 'ತೃತೀಯ ರಂಗಕ್ಕೆ ಕಮಲ್ ಹಾಸನ್ ನೇತೃತ್ವ ಇರಲಿದೆ. ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುತ್ತಾರೆ' ಎಂದು ಶರತ್ ಕುಮಾರ್ ಹೇಳಿದ್ದಾರೆ. ಅವರ ಪತ್ನಿ, ಎಐಎಸ್ಎಂಕೆ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ರಾಧಿಕಾ ಶರತ್ಕುಮಾರ್ ಕೋವಿಲ್ಪತ್ತಿ ಅಥವಾ ವೆಲಚೇರಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ.