<p><strong>ಚೆನ್ನೈ:</strong> ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾದ 'ಕೋಲ್ಡ್ರಿಫ್'(<strong>Coldrif)</strong> ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ.</p>.<p>ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ, ಚೆನ್ನೈ ಮೂಲದ ಕಂಪನಿಯು ತಯಾರಿಸಿದ ಈ ಕೆಮ್ಮಿನ ಸಿರಪ್ ಮಾರಾಟವನ್ನು ತಮಿಳುನಾಡಿನಾದ್ಯಂತ ನಿಷೇಧಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಕಂಪನಿಯು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಪುದುಚೇರಿಗೆ ಔಷಧಿಗಳನ್ನು ಪೂರೈಸುತ್ತದೆ. ಇದರಲ್ಲಿ 'ಡೈಥಿಲೀನ್ ಗ್ಲೈಕಾಲ್'(Diethylene glycol–DEG) ರಾಸಾಯನಿಕ ಇದೆ ಎನ್ನಲಾಗಿದೆ. ಹಾಗಾಗಿ ಕಾಂಚೀಪುರಂನಲ್ಲಿರುವ ಔಷಧ ಕಂಪನಿಯ ಉತ್ಪಾದನಾ ಘಟಕದಲ್ಲಿ ತಪಾಸಣೆ ನಡೆಸಲಾಗಿದೆ. ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಅವರು ಹೇಳಿದ್ದಾರೆ. </p>.<p>ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಘಟನೆಗಳು(ಮಕ್ಕಳ ಸಾವು) ವರದಿಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (ಡಿಜಿಎಚ್ಎಸ್), ಶುಕ್ರವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗಳ ಆರೋಗ್ಯ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದೆ.</p>.<p>‘ಕೆಮ್ಮು ಮತ್ತು ಶೀತಕ್ಕೆ ಸಂಬಂಧಿಸಿದಂತೆ ಎರಡು ವರ್ಷದೊಳಗಿನ ಮಕ್ಕಳಿಗೆ ಔಷಧ ಶಿಫಾರಸು ಮಾಡಬಾರದು. ಐದು ವರ್ಷದೊಳಗಿನ ಮಕ್ಕಳಿಗೂ ಸಾಮಾನ್ಯವಾಗಿ ಅಗತ್ಯ ಇರುವುದಿಲ್ಲ. ಅತಿ ಅಗತ್ಯವಾದರೆ ಮಾತ್ರ ಸೂಕ್ತ ಪ್ರಮಾಣದಲ್ಲಿ ಕಡಿಮೆ ಅವಧಿಗೆ ಒದಗಿಸಬೇಕು’ ಎಂದು ಸೂಚಿಸಿದೆ. </p>.<p>‘ಮಕ್ಕಳಲ್ಲಿನ ಕೆಮ್ಮಿಗೆ ಔಷಧಗಳನ್ನು ವಿವೇಚನೆ ಬಳಸಿ ವೈದ್ಯರು ಶಿಫಾರಸು ಮಾಡಬೇಕು. ಬಹುತೇಕ ಕೆಮ್ಮಿನ ಸಮಸ್ಯೆಗಳು ಔಷಧಗಳ ಅಗತ್ಯವಿಲ್ಲದೆ ಕಡಿಮೆಯಾಗುತ್ತವೆ. ಆದ್ದರಿಂದ ಅನಗತ್ಯವಾಗಿ ಔಷಧ ಬಳಕೆ ತಪ್ಪಿಸಿ, ವೈದ್ಯರ ಸಲಹೆಗಳನ್ನು ಮಾತ್ರ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದೂ ತಿಳಿಸಿದೆ.</p>.<p>ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಶಂಕಿತ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಸಾವಿಗೆ ಕೆಮ್ಮಿನ ಸಿರಪ್ನಲ್ಲಿದ್ದ 'Brake Oil Solvent' ಕಾರಣ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಕಮಲ್ ನಾಥ್ ಆರೋಪಿಸಿದ್ದರು.</p>.<p>ಮಧ್ಯಪ್ರದೇಶದಲ್ಲಿ 9 ಮತ್ತು ರಾಜಸ್ಥಾನದಲ್ಲಿ 2 ಮಕ್ಕಳು ಮೃತಪಟ್ಟಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p>.ಮಕ್ಕಳಲ್ಲಿ ಕೆಮ್ಮು: ಅನಗತ್ಯ ಔಷಧ ಶಿಫಾರಸು ಮಾಡದಂತೆ ಡಿಜಿಎಚ್ಎಸ್ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾದ 'ಕೋಲ್ಡ್ರಿಫ್'(<strong>Coldrif)</strong> ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ.</p>.<p>ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ, ಚೆನ್ನೈ ಮೂಲದ ಕಂಪನಿಯು ತಯಾರಿಸಿದ ಈ ಕೆಮ್ಮಿನ ಸಿರಪ್ ಮಾರಾಟವನ್ನು ತಮಿಳುನಾಡಿನಾದ್ಯಂತ ನಿಷೇಧಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಕಂಪನಿಯು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಪುದುಚೇರಿಗೆ ಔಷಧಿಗಳನ್ನು ಪೂರೈಸುತ್ತದೆ. ಇದರಲ್ಲಿ 'ಡೈಥಿಲೀನ್ ಗ್ಲೈಕಾಲ್'(Diethylene glycol–DEG) ರಾಸಾಯನಿಕ ಇದೆ ಎನ್ನಲಾಗಿದೆ. ಹಾಗಾಗಿ ಕಾಂಚೀಪುರಂನಲ್ಲಿರುವ ಔಷಧ ಕಂಪನಿಯ ಉತ್ಪಾದನಾ ಘಟಕದಲ್ಲಿ ತಪಾಸಣೆ ನಡೆಸಲಾಗಿದೆ. ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಅವರು ಹೇಳಿದ್ದಾರೆ. </p>.<p>ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಘಟನೆಗಳು(ಮಕ್ಕಳ ಸಾವು) ವರದಿಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (ಡಿಜಿಎಚ್ಎಸ್), ಶುಕ್ರವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗಳ ಆರೋಗ್ಯ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದೆ.</p>.<p>‘ಕೆಮ್ಮು ಮತ್ತು ಶೀತಕ್ಕೆ ಸಂಬಂಧಿಸಿದಂತೆ ಎರಡು ವರ್ಷದೊಳಗಿನ ಮಕ್ಕಳಿಗೆ ಔಷಧ ಶಿಫಾರಸು ಮಾಡಬಾರದು. ಐದು ವರ್ಷದೊಳಗಿನ ಮಕ್ಕಳಿಗೂ ಸಾಮಾನ್ಯವಾಗಿ ಅಗತ್ಯ ಇರುವುದಿಲ್ಲ. ಅತಿ ಅಗತ್ಯವಾದರೆ ಮಾತ್ರ ಸೂಕ್ತ ಪ್ರಮಾಣದಲ್ಲಿ ಕಡಿಮೆ ಅವಧಿಗೆ ಒದಗಿಸಬೇಕು’ ಎಂದು ಸೂಚಿಸಿದೆ. </p>.<p>‘ಮಕ್ಕಳಲ್ಲಿನ ಕೆಮ್ಮಿಗೆ ಔಷಧಗಳನ್ನು ವಿವೇಚನೆ ಬಳಸಿ ವೈದ್ಯರು ಶಿಫಾರಸು ಮಾಡಬೇಕು. ಬಹುತೇಕ ಕೆಮ್ಮಿನ ಸಮಸ್ಯೆಗಳು ಔಷಧಗಳ ಅಗತ್ಯವಿಲ್ಲದೆ ಕಡಿಮೆಯಾಗುತ್ತವೆ. ಆದ್ದರಿಂದ ಅನಗತ್ಯವಾಗಿ ಔಷಧ ಬಳಕೆ ತಪ್ಪಿಸಿ, ವೈದ್ಯರ ಸಲಹೆಗಳನ್ನು ಮಾತ್ರ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದೂ ತಿಳಿಸಿದೆ.</p>.<p>ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಶಂಕಿತ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಸಾವಿಗೆ ಕೆಮ್ಮಿನ ಸಿರಪ್ನಲ್ಲಿದ್ದ 'Brake Oil Solvent' ಕಾರಣ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಕಮಲ್ ನಾಥ್ ಆರೋಪಿಸಿದ್ದರು.</p>.<p>ಮಧ್ಯಪ್ರದೇಶದಲ್ಲಿ 9 ಮತ್ತು ರಾಜಸ್ಥಾನದಲ್ಲಿ 2 ಮಕ್ಕಳು ಮೃತಪಟ್ಟಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p>.ಮಕ್ಕಳಲ್ಲಿ ಕೆಮ್ಮು: ಅನಗತ್ಯ ಔಷಧ ಶಿಫಾರಸು ಮಾಡದಂತೆ ಡಿಜಿಎಚ್ಎಸ್ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>