<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದ್ದು ಐಯುಎಂಎಲ್ ಪಕ್ಷದ ಎಂ.ಶಾಜಹಾನ್ ಮತ್ತು ವಿಸಿಕೆ ಪಕ್ಷದ ವನ್ನಿ ಅರಸು ಶುಕ್ರವಾರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.</p><p>ಇಲ್ಲಿನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರು ಸಚಿವರಿಗೆ ಅಧಿಕಾರ ಮತ್ತು ಗೋಪ್ಯತೆ ಪ್ರಮಾಣವಚನ ಬೋಧಿಸಿದರು. ಮುಖ್ಯಮಂತ್ರಿ ವಿಜಯ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p><p>ಈಗಾಗಲೇ ಇಬ್ಬರು ಕಾಂಗ್ರೆಸ್ ಶಾಸಕರು ವಿಜಯ್ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇದೀಗ ಐಯುಎಂಎಲ್ ಮತ್ತು ವಿಸಿಕೆ ಸೇರ್ಪಡೆಯೊಂದಿಗೆ ಆಡಳಿತಾರೂಢ ಮೈತ್ರಿಕೂಟದ ಪಾಲುದಾರರ ಪಕ್ಷಗಳ ಸಚಿವರ ಸಂಖ್ಯೆ ನಾಲ್ಕಕ್ಕೇರಿದೆ.</p>.<p><strong>ಡಿಎಂಕೆ ನಾಯಕ ಎ.ರಾಜಾ ವ್ಯಂಗ್ಯ:</strong> ಡಿಎಂಕೆ ನಾಯಕ ಎ.ರಾಜಾ ಅವರು ಐಯುಎಂಎಲ್ ಮತ್ತು ವಿಸಿಕೆ ಪಕ್ಷಗಳ ನಡೆಯನ್ನು ಟೀಕಿಸಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.</p><p>ನಮ್ಮ ಮನೆಯ ತೆಂಗಿನ ಮರ ನೆರೆ ಮನೆಯ ಕಡೆಗೆ ಬಾಗಿ, ಅಲ್ಲಿ ಕಾಯಿ ಬಿಟ್ಟರೆ, ಆ ಮರದಿಂದ ಲಾಭ ಪಡೆಯಲು ಯತ್ನಿಸುವವರಿಗೆ ಏನೆಂದು ಕರೆಯಬೇಕು? ಎಂದು ಮಿತ್ರಪಕ್ಷಗಳನ್ನು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದ್ದು ಐಯುಎಂಎಲ್ ಪಕ್ಷದ ಎಂ.ಶಾಜಹಾನ್ ಮತ್ತು ವಿಸಿಕೆ ಪಕ್ಷದ ವನ್ನಿ ಅರಸು ಶುಕ್ರವಾರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.</p><p>ಇಲ್ಲಿನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರು ಸಚಿವರಿಗೆ ಅಧಿಕಾರ ಮತ್ತು ಗೋಪ್ಯತೆ ಪ್ರಮಾಣವಚನ ಬೋಧಿಸಿದರು. ಮುಖ್ಯಮಂತ್ರಿ ವಿಜಯ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p><p>ಈಗಾಗಲೇ ಇಬ್ಬರು ಕಾಂಗ್ರೆಸ್ ಶಾಸಕರು ವಿಜಯ್ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇದೀಗ ಐಯುಎಂಎಲ್ ಮತ್ತು ವಿಸಿಕೆ ಸೇರ್ಪಡೆಯೊಂದಿಗೆ ಆಡಳಿತಾರೂಢ ಮೈತ್ರಿಕೂಟದ ಪಾಲುದಾರರ ಪಕ್ಷಗಳ ಸಚಿವರ ಸಂಖ್ಯೆ ನಾಲ್ಕಕ್ಕೇರಿದೆ.</p>.<p><strong>ಡಿಎಂಕೆ ನಾಯಕ ಎ.ರಾಜಾ ವ್ಯಂಗ್ಯ:</strong> ಡಿಎಂಕೆ ನಾಯಕ ಎ.ರಾಜಾ ಅವರು ಐಯುಎಂಎಲ್ ಮತ್ತು ವಿಸಿಕೆ ಪಕ್ಷಗಳ ನಡೆಯನ್ನು ಟೀಕಿಸಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.</p><p>ನಮ್ಮ ಮನೆಯ ತೆಂಗಿನ ಮರ ನೆರೆ ಮನೆಯ ಕಡೆಗೆ ಬಾಗಿ, ಅಲ್ಲಿ ಕಾಯಿ ಬಿಟ್ಟರೆ, ಆ ಮರದಿಂದ ಲಾಭ ಪಡೆಯಲು ಯತ್ನಿಸುವವರಿಗೆ ಏನೆಂದು ಕರೆಯಬೇಕು? ಎಂದು ಮಿತ್ರಪಕ್ಷಗಳನ್ನು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>