ರಾಜ್ಯ ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್, ಉನ್ನತ ಅಧಿಕಾರಿಗಳು ಹಾಗೂ ಪೋಷಕರ ಸಮ್ಮುಖದಲ್ಲಿ ಗುಕೇಶ್ ಅವರಿಗೆ ಶಾಲು ಹೊದಿಸಿ, ಪ್ರಶಸ್ತಿ ನೀಡುವ ಮೂಲಕ ಗೌರವಿಸಲಾಯಿತು. ಗುಕೇಶ್ ಅವರ ಸಾಧನೆಗೆ ಸಿಎಂ ಅಭಿನಂದನೆ ಸಲ್ಲಿಸಿದರು.
ರಾಜ್ಯ ಸರ್ಕಾರದ ಪ್ರೋತ್ಸಾಹಧನ ಮತ್ತು ಬೆಂಬಲಕ್ಕೆ ಗುಕೇಶ್ ಧನ್ಯವಾದ ಅರ್ಪಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸ್ಟಾಲಿನ್, ‘ಯುವಜನತೆ ಶಿಕ್ಷಣದೊಂದಿಗೆ ತಮ್ಮ ಆಯ್ಕೆಯ ಕ್ರೀಡೆಯನ್ನು ಅಭ್ಯಾಸ ಮಾಡುವುದನ್ನು ದಿನಚರಿಯಾಗಿ ರೂಢಿಸಿಕೊಳ್ಳಬೇಕು. ಇದು ನಿಮ್ಮ ದೇಹ ಮತ್ತು ಮನಸ್ಸನ್ನು ಎಚ್ಚರವಾಗಿ ಮತ್ತು ಕ್ರಿಯಾಶೀಲವಾಗಿರಿಸಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.