ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವಾರ್ ಚಂಡಮಾರುತ: ಪರಿಸ್ಥಿತಿ ಅವಲೋಕಿಸಿದ ತಮಿಳುನಾಡು ಸಿಎಂ ಪಳನಿಸ್ವಾಮಿ

Last Updated 25 ನವೆಂಬರ್ 2020, 11:34 IST
ಅಕ್ಷರ ಗಾತ್ರ

ಚೆನ್ನೈ: ‘ನಿವಾರ್’ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರು ಬುಧವಾರ ಚೆಂಬರಂಬಕ್ಕಂ ಸರೋವರ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.

ಈ ಮಧ್ಯೆ, ಪರಿಹಾರ ಕೇಂದ್ರಗಳಲ್ಲಿ ಕೋವಿಡ್–19 ಮಾರ್ಗಸೂಚಿಗಳನ್ನು ಪಾಲಿಸಲು ಒತ್ತುನೀಡಲಾಗುವುದು ಎಂದು ತಮಿಳುನಾಡು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತುಲ್ಯಾ ಮಿಶ್ರಾ ಹೇಳಿದ್ದಾರೆ.

‘ಪರಿಹಾರ ಕೇಂದ್ರಗಳಲ್ಲಿ ಮಾಸ್ಕ್‌ಗಳು, ಸ್ಯಾನಿಟೈಸರ್‌ಗಳು ಲಭ್ಯವಿವೆ. ಪ್ರತಿ ವ್ಯಕ್ತಿಗೆ 27 ವಸ್ತುಗಳಂತೆ ಅಗತ್ಯವಸ್ತುಗಳು ಸಿದ್ಧವಿವೆ. ಇದರಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಅಗತ್ಯವಸ್ತುಗಳ ಕಿಟ್‌ಗಳು ಸಹ ಇವೆ’ ಎಂದು ಅವರು ಹೇಳಿದ್ದಾರೆ.

‘ಈಶಾನ್ಯ ಮುಂಗಾರಿನ ಬಗ್ಗೆ ನಾವು ಯಾವಾಗಲೂ ಜಾಗರೂಕರಾಗಿರಬೇಕಾಗುತ್ತದೆ. ಮುಖ್ಯಮಂತ್ರಿಗಳು ಹಾಗೂ ಇತರ ಅಧಿಕಾರಿಗಳು ಸಭೆ ನಡೆಸಿದ್ದು, ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.

ಚಂಡಮಾರುತದ ಸಂದರ್ಭದಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ತಮಿಳುನಾಡು ಮತ್ತು ಪುದುಚೇರಿ ಸರ್ಕಾರದ ಜತೆ ಕೈಜೋಡಿಸಲು ಸೇನೆಯೂ ಸನ್ನದ್ಧವಾಗಿದೆ ಎಂದು ಸೇನೆಯ ದಕ್ಷಿಣ ಕಮಾಂಡ್ ತಿಳಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT