<p><strong>ಚೆನ್ನೈ:</strong> ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (ಒಎಸ್ಡಿ) ನೇಮಕ ಮಾಡಿದ್ದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ಸರ್ಕಾರವು ನೇಮಕಾತಿಯನ್ನು ರದ್ದುಪಡಿಸಿದೆ. </p><p>ಈ ಸಂಬಂಧ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ವೆಟ್ರಿವೇಲ್ ನೇಮಕಾತಿಯನ್ನು ವಿರೋಧ ಪಕ್ಷಗಳು ಮಾತ್ರವಲ್ಲದೆ, ಟಿವಿಕೆ ಮಿತ್ರಪಕ್ಷಗಳೂ ಪ್ರಶ್ನಿಸಿದ್ದವು.</p><p>ರಿಕಿ ರಾಧನ್ ಅವರು ವಿಜಯ್ ಅವರ ಜ್ಯೋತಿಷಿಯಾಗಿದ್ದು, ರಾಜಕೀಯ ವಿಚಾರಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡುತ್ತಿದ್ದರು. ಒಎಸ್ಡಿಯಾಗಿ ಜ್ಯೋತಿಷಿಯ ನೇಮಕವು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಗುರಿಯಾಗಿತ್ತು.</p><p>ಕಾಂಗ್ರೆಸ್ ಸಂಸದ ಸಸಿಕಾಂತ ಸೆಂಥಿಲ್ ಅವರು ಮಂಗಳವಾರ ವೆಟ್ರಿವೇಲ್ ನೇಮಕಾತಿ ಪತ್ರವನ್ನು ಲಗತ್ತಿಸಿ, ಮುಖ್ಯಮಂತ್ರಿಯ ಸಾಮಾಜಿಕ ಮಾಧ್ಯಮ ಖಾತೆಗೆ ಟ್ಯಾಗ್ ಮಾಡಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದರು.</p><p>‘ಜ್ಯೋತಿಷಿಗೆ ಒಎಸ್ಡಿ ಸ್ಥಾನ ಏಕೆ ಬೇಕು? ಯಾರಾದರೂ ವಿವರಿಸುತ್ತೀರಾ?’ ಎಂದು ಮಾಜಿ ಐಎಎಸ್ ಅಧಿಕಾರಿ ಹಾಗೂ ತಿರುವಳ್ಳೂರು ಕ್ಷೇತ್ರದ ಸಂಸದ ತಮ್ಮ ಖಾತೆಯಲ್ಲಿ ಉಲ್ಲೇಖಿಸಿದ್ದರು.</p><p>ಪ್ರಭಾವಿ ರಾಜಕೀಯ ನಾಯಕರ ಜ್ಯೋತಿಷಿ ಎಂದು ಬಿಂಬಿಸಿಕೊಂಡಿದ್ದ ರಿಕಿ ಅವರು ಮಾಜಿ ಮುಖ್ಯಮಂತ್ರಿ, ದಿವಂಗತ ಜಯಲಲಿತಾ ಹಾಗೂ ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಅವರಿಗೂ ಆಪ್ತರಾಗಿದ್ದರು ಎನ್ನಲಾಗಿದೆ.</p><p>ರಾಧನ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ವಿಜಯ್ ಅವರ ಚುನಾವಣಾ ಯಶಸ್ಸನ್ನು ಭವಿಷ್ಯ ನುಡಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (ಒಎಸ್ಡಿ) ನೇಮಕ ಮಾಡಿದ್ದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ಸರ್ಕಾರವು ನೇಮಕಾತಿಯನ್ನು ರದ್ದುಪಡಿಸಿದೆ. </p><p>ಈ ಸಂಬಂಧ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ವೆಟ್ರಿವೇಲ್ ನೇಮಕಾತಿಯನ್ನು ವಿರೋಧ ಪಕ್ಷಗಳು ಮಾತ್ರವಲ್ಲದೆ, ಟಿವಿಕೆ ಮಿತ್ರಪಕ್ಷಗಳೂ ಪ್ರಶ್ನಿಸಿದ್ದವು.</p><p>ರಿಕಿ ರಾಧನ್ ಅವರು ವಿಜಯ್ ಅವರ ಜ್ಯೋತಿಷಿಯಾಗಿದ್ದು, ರಾಜಕೀಯ ವಿಚಾರಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡುತ್ತಿದ್ದರು. ಒಎಸ್ಡಿಯಾಗಿ ಜ್ಯೋತಿಷಿಯ ನೇಮಕವು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಗುರಿಯಾಗಿತ್ತು.</p><p>ಕಾಂಗ್ರೆಸ್ ಸಂಸದ ಸಸಿಕಾಂತ ಸೆಂಥಿಲ್ ಅವರು ಮಂಗಳವಾರ ವೆಟ್ರಿವೇಲ್ ನೇಮಕಾತಿ ಪತ್ರವನ್ನು ಲಗತ್ತಿಸಿ, ಮುಖ್ಯಮಂತ್ರಿಯ ಸಾಮಾಜಿಕ ಮಾಧ್ಯಮ ಖಾತೆಗೆ ಟ್ಯಾಗ್ ಮಾಡಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದರು.</p><p>‘ಜ್ಯೋತಿಷಿಗೆ ಒಎಸ್ಡಿ ಸ್ಥಾನ ಏಕೆ ಬೇಕು? ಯಾರಾದರೂ ವಿವರಿಸುತ್ತೀರಾ?’ ಎಂದು ಮಾಜಿ ಐಎಎಸ್ ಅಧಿಕಾರಿ ಹಾಗೂ ತಿರುವಳ್ಳೂರು ಕ್ಷೇತ್ರದ ಸಂಸದ ತಮ್ಮ ಖಾತೆಯಲ್ಲಿ ಉಲ್ಲೇಖಿಸಿದ್ದರು.</p><p>ಪ್ರಭಾವಿ ರಾಜಕೀಯ ನಾಯಕರ ಜ್ಯೋತಿಷಿ ಎಂದು ಬಿಂಬಿಸಿಕೊಂಡಿದ್ದ ರಿಕಿ ಅವರು ಮಾಜಿ ಮುಖ್ಯಮಂತ್ರಿ, ದಿವಂಗತ ಜಯಲಲಿತಾ ಹಾಗೂ ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಅವರಿಗೂ ಆಪ್ತರಾಗಿದ್ದರು ಎನ್ನಲಾಗಿದೆ.</p><p>ರಾಧನ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ವಿಜಯ್ ಅವರ ಚುನಾವಣಾ ಯಶಸ್ಸನ್ನು ಭವಿಷ್ಯ ನುಡಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>