<p><strong>ಚೆನ್ನೈ:</strong> ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಜ್ಞಾನಶೇಕರನ್ಗೆ ಮಹಿಳಾ ನ್ಯಾಯಾಲಯವು ಸೋಮವಾರ ಶಿಕ್ಷೆ ಪ್ರಕಟಿಸಿದೆ. ಕ್ಷಮಾದಾನ ಇಲ್ಲದೆ, 30 ವರ್ಷಗಳ ಜೀವಾವಧಿ ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. </p>.<p>ಮಹಿಳಾ ನ್ಯಾಯಾಲಯದ ನ್ಯಾಯಾಧೀಶರಾದ ಎಂ. ರಾಜಲಕ್ಷ್ಮಿ ಅವರು ಶಿಕ್ಷೆ ಪ್ರಕಟಿಸಿದರು. </p>.<p>ಜ್ಞಾನಶೇಕರನ್ ಮೇಲೆ ಒಟ್ಟು 11 ಆರೋಪಗಳನ್ನು ಹೊರಿಸಲಾಗಿತ್ತು. ದಾಖಲೆಗಳು ಮತ್ತು ವಿಧಿವಿಜ್ಞಾನ ಸಾಕ್ಷ್ಯಗಳ ಮೂಲಕ ಸರ್ಕಾರಿ ವಕೀಲರು ಈ ಎಲ್ಲ ಆರೋಪಗಳನ್ನು ಸಾಬೀತು ಮಾಡಿದ್ದಾರೆ. ಕುಟುಂಬದಲ್ಲಿ ತಾನೊಬ್ಬನೇ ದುಡಿಯುವ ವ್ಯಕ್ತಿ. ಆದ್ದರಿಂದ ಗರಿಷ್ಠ ಶಿಕ್ಷೆ ವಿಧಿಸಬಾರದು ಎಂದು ಅಪರಾಧಿ ನ್ಯಾಯಾಲಯಕ್ಕೆ ಕೋರಿದ್ದ.</p>.<p>2024ರ ಡಿಸೆಂಬರ್ನಲ್ಲಿ ಈ ಘಟನೆ ನಡೆದಿತ್ತು. ತಮಿಳುನಾಡಿನಲ್ಲಿ ಈ ಘಟನೆಯು ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು. ಅಪರಾಧಿಯು ಆಡಳಿತಾರೂಢ ಡಿಎಂಕೆ ಪಕ್ಷದ ಸಂಪರ್ಕ ಹೊಂದಿದ್ದಾನೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಇದಕ್ಕಾಗಿ ರಾಜಕೀಯ ಮೇಲಾಟವೂ ನಡೆದಿತ್ತು.</p>.<p>ಜ್ಞಾನಶೇಕರನ್ ಕುರಿತು ಇದೇ ಜನವರಿಯಲ್ಲಿ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ‘ಆತ ತಮ್ಮ ಪಕ್ಷದ ಬೆಂಬಲಿಗನಷ್ಟೆ. ಆತ ಪಕ್ಷದ ಸದಸ್ಯನಾಗಿರಲಿಲ್ಲ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಜ್ಞಾನಶೇಕರನ್ಗೆ ಮಹಿಳಾ ನ್ಯಾಯಾಲಯವು ಸೋಮವಾರ ಶಿಕ್ಷೆ ಪ್ರಕಟಿಸಿದೆ. ಕ್ಷಮಾದಾನ ಇಲ್ಲದೆ, 30 ವರ್ಷಗಳ ಜೀವಾವಧಿ ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. </p>.<p>ಮಹಿಳಾ ನ್ಯಾಯಾಲಯದ ನ್ಯಾಯಾಧೀಶರಾದ ಎಂ. ರಾಜಲಕ್ಷ್ಮಿ ಅವರು ಶಿಕ್ಷೆ ಪ್ರಕಟಿಸಿದರು. </p>.<p>ಜ್ಞಾನಶೇಕರನ್ ಮೇಲೆ ಒಟ್ಟು 11 ಆರೋಪಗಳನ್ನು ಹೊರಿಸಲಾಗಿತ್ತು. ದಾಖಲೆಗಳು ಮತ್ತು ವಿಧಿವಿಜ್ಞಾನ ಸಾಕ್ಷ್ಯಗಳ ಮೂಲಕ ಸರ್ಕಾರಿ ವಕೀಲರು ಈ ಎಲ್ಲ ಆರೋಪಗಳನ್ನು ಸಾಬೀತು ಮಾಡಿದ್ದಾರೆ. ಕುಟುಂಬದಲ್ಲಿ ತಾನೊಬ್ಬನೇ ದುಡಿಯುವ ವ್ಯಕ್ತಿ. ಆದ್ದರಿಂದ ಗರಿಷ್ಠ ಶಿಕ್ಷೆ ವಿಧಿಸಬಾರದು ಎಂದು ಅಪರಾಧಿ ನ್ಯಾಯಾಲಯಕ್ಕೆ ಕೋರಿದ್ದ.</p>.<p>2024ರ ಡಿಸೆಂಬರ್ನಲ್ಲಿ ಈ ಘಟನೆ ನಡೆದಿತ್ತು. ತಮಿಳುನಾಡಿನಲ್ಲಿ ಈ ಘಟನೆಯು ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು. ಅಪರಾಧಿಯು ಆಡಳಿತಾರೂಢ ಡಿಎಂಕೆ ಪಕ್ಷದ ಸಂಪರ್ಕ ಹೊಂದಿದ್ದಾನೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಇದಕ್ಕಾಗಿ ರಾಜಕೀಯ ಮೇಲಾಟವೂ ನಡೆದಿತ್ತು.</p>.<p>ಜ್ಞಾನಶೇಕರನ್ ಕುರಿತು ಇದೇ ಜನವರಿಯಲ್ಲಿ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ‘ಆತ ತಮ್ಮ ಪಕ್ಷದ ಬೆಂಬಲಿಗನಷ್ಟೆ. ಆತ ಪಕ್ಷದ ಸದಸ್ಯನಾಗಿರಲಿಲ್ಲ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>