ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಗಣಿಗಾರಿಕೆ ಪ್ರಕರಣ: ತಮಿಳುನಾಡಿನ ಹಲವು ಕಡೆ ಇ.ಡಿ ಶೋಧ

Published 9 ಮಾರ್ಚ್ 2024, 6:06 IST
Last Updated 9 ಮಾರ್ಚ್ 2024, 6:06 IST
ಅಕ್ಷರ ಗಾತ್ರ

ಚೆನ್ನೈ: ಮರಳು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಶನಿವಾರ ತಮಿಳುನಾಡಿನ ಹಲವೆಡೆ ಶೋಧ ನಡೆಸಿತು.

‘ಲಾಟರಿ ಕಿಂಗ್‌‘ ಸ್ಯಾಂಟಿಗೊ ಮಾರ್ಟಿನ್‌ ಅವರ ಅಳಿಯ ಆಧವ್‌ ಅರ್ಜುನ್‌ ಅವರ ನಿವಾಸ ಸೆರಿದಂತೆ ಚೆನ್ನೈ ಮತ್ತು ಕೊಯಮತ್ತೂರಿನ ಹಲವರ ಮನೆಗಳಲ್ಲಿ ಶೋಧ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ತಮಿಳುನಾಡಿನಲ್ಲಿ ಮರಳು ಅಕ್ರಮ ಗಣಿಗಾರಿಕೆಯಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿರುವ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ 10 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ’ ಎಂದು ತಿಳಿಸಿವೆ.

ಸಿಕ್ಕಿಂ ಸರ್ಕಾರದ ಲಾಟರಿ ಮಾರಾಟಕ್ಕೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿಯೂ ಮಾರ್ಟಿನ್‌ ಅವರು ಇ.ಡಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT