<p><strong>ಚೆನ್ನೈ:</strong> ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಸ್ಪರ್ಧಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ರಾಜಕೀಯ ಸನ್ನಿವೇಶ ಬದಲಾಗುತ್ತಿದೆ ಎಂದು ನಟ ಹಾಗೂ ರಾಜಕಾರಣಿ ವಿಜಯ್ ಅವರು ಸೋಮವಾರ ಹೇಳಿದ್ದಾರೆ.</p><p>2026ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸುವಂತೆ ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. </p><p>‘ಟಿವಿಕೆ’ಗೆ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದೆ. ಪಕ್ಷದ ಕಾರ್ಯಕರ್ತರು ದೃಢಸಂಕಲ್ಪ ಮತ್ತು ಏಕತೆಯಿಂದ ಚುನಾವಣೆಯನ್ನು ಎದುರಿಸೋಣ. ಆ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಯ ಮೂಲಕವೇ ಅಧಿಕಾರದ ಗುರಿಯನ್ನು ತಲುಪೋಣ ಎಂದು ಹೇಳಿದ್ದಾರೆ. </p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ವಿಜಯ್, ‘ಟಿವಿಕೆ ಸ್ಥಾಪನೆಯಾಗಿ ಎರಡು ವರ್ಷ ಕಳೆದಿದೆ. ಇಂದಿನಿಂದ ಮೂರನೇ ವರ್ಷಕ್ಕೆ ಕಾಲಿಡಲಿದ್ದೇವೆ. ನಮ್ಮ ರಾಜಕೀಯ ಪಯಣ ಇನ್ನೂ ಮುಂದುವರೆಯಲಿದೆ’ ಎಂದು ತಿಳಿಸಿದ್ದಾರೆ. </p>.<p>ಟಿವಿಕೆ ಪಕ್ಷವು ಆಳ ಸಮುದ್ರವಿದ್ದಂತೆ. ಅದು ರಾಜಕೀಯ ಪಯಣದಲ್ಲಿ ಯಾವತ್ತೂ ತನ್ನ ಗುರಿಯನ್ನು ಬಿಟ್ಟು ಕಳೆದುಹೋಗುವುದಿಲ್ಲ. ಅಡತಡೆಗಳನ್ನು ಹಿಮ್ಮೆಟ್ಟಿಸಿ ನಿಲ್ಲುತ್ತದೆ. ಅಧಿಕಾರಕ್ಕಾಗಿ ಕಚ್ಚಾಡುವವರ ನಡುವೆ ಜನಸಾಮಾನ್ಯರಿಗಾಗಿ ಪಕ್ಷವು ಕೆಲಸ ಮಾಡುತ್ತದೆ. 2026ರ ಚುನಾವಣೆಯಲ್ಲಿ ಈ ಹಿಂದೆ ಕಾರಣ ಹೊಸ ರಾಜಕೀಯ ವಾತಾವರಣ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ. </p><p>2024ರ ಫೆ.2ರಂದು ನಟ ವಿಜಯ್ ಅವರು ಟಿವಿಕೆ ಪಕ್ಷವನ್ನು ಸ್ಥಾಪಿಸುವ ಮೂಲಕ ರಾಜಕಾರಣಕ್ಕೆ ಕಾಲಿಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಸ್ಪರ್ಧಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ರಾಜಕೀಯ ಸನ್ನಿವೇಶ ಬದಲಾಗುತ್ತಿದೆ ಎಂದು ನಟ ಹಾಗೂ ರಾಜಕಾರಣಿ ವಿಜಯ್ ಅವರು ಸೋಮವಾರ ಹೇಳಿದ್ದಾರೆ.</p><p>2026ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸುವಂತೆ ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. </p><p>‘ಟಿವಿಕೆ’ಗೆ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದೆ. ಪಕ್ಷದ ಕಾರ್ಯಕರ್ತರು ದೃಢಸಂಕಲ್ಪ ಮತ್ತು ಏಕತೆಯಿಂದ ಚುನಾವಣೆಯನ್ನು ಎದುರಿಸೋಣ. ಆ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಯ ಮೂಲಕವೇ ಅಧಿಕಾರದ ಗುರಿಯನ್ನು ತಲುಪೋಣ ಎಂದು ಹೇಳಿದ್ದಾರೆ. </p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ವಿಜಯ್, ‘ಟಿವಿಕೆ ಸ್ಥಾಪನೆಯಾಗಿ ಎರಡು ವರ್ಷ ಕಳೆದಿದೆ. ಇಂದಿನಿಂದ ಮೂರನೇ ವರ್ಷಕ್ಕೆ ಕಾಲಿಡಲಿದ್ದೇವೆ. ನಮ್ಮ ರಾಜಕೀಯ ಪಯಣ ಇನ್ನೂ ಮುಂದುವರೆಯಲಿದೆ’ ಎಂದು ತಿಳಿಸಿದ್ದಾರೆ. </p>.<p>ಟಿವಿಕೆ ಪಕ್ಷವು ಆಳ ಸಮುದ್ರವಿದ್ದಂತೆ. ಅದು ರಾಜಕೀಯ ಪಯಣದಲ್ಲಿ ಯಾವತ್ತೂ ತನ್ನ ಗುರಿಯನ್ನು ಬಿಟ್ಟು ಕಳೆದುಹೋಗುವುದಿಲ್ಲ. ಅಡತಡೆಗಳನ್ನು ಹಿಮ್ಮೆಟ್ಟಿಸಿ ನಿಲ್ಲುತ್ತದೆ. ಅಧಿಕಾರಕ್ಕಾಗಿ ಕಚ್ಚಾಡುವವರ ನಡುವೆ ಜನಸಾಮಾನ್ಯರಿಗಾಗಿ ಪಕ್ಷವು ಕೆಲಸ ಮಾಡುತ್ತದೆ. 2026ರ ಚುನಾವಣೆಯಲ್ಲಿ ಈ ಹಿಂದೆ ಕಾರಣ ಹೊಸ ರಾಜಕೀಯ ವಾತಾವರಣ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ. </p><p>2024ರ ಫೆ.2ರಂದು ನಟ ವಿಜಯ್ ಅವರು ಟಿವಿಕೆ ಪಕ್ಷವನ್ನು ಸ್ಥಾಪಿಸುವ ಮೂಲಕ ರಾಜಕಾರಣಕ್ಕೆ ಕಾಲಿಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>