ಜುಲೈ 16ರಂದು ಹೊರಡಿಸಿದ್ದ ಹಿಂದಿನ ಆದೇಶದಂತೆ, ಈಜುಕೊಳಗಳು, ಬಾರ್-ರೆಸ್ಟೋರೆಂಟ್ಗಳು,ಶಿಕ್ಷಣ ಸಂಸ್ಥೆಗಳು, ಮೃಗಾಲಯಗಳು ಮತ್ತು ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನಿರಾಕರಿಸಲಾಗಿತ್ತು. ಪುದುಚೇರಿ ಹೊರತುಪಡಿಸಿ ಅಂತರರಾಜ್ಯ ಪ್ರಯಾಣವನ್ನು ನಿರ್ಬಂಧಿಸಲಾಗಿತ್ತು. ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳಿಗೆ ಅವಕಾಶ ನೀಡಿರಲಿಲ್ಲ. ಆದರೆ,50ಕ್ಕಿಂತ ಹೆಚ್ಚು ಜನರು ಸೇರದೆ ಮದುವೆ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡಲಾಗಿತ್ತು. ಅಂತ್ಯಕ್ರಿಯೆ ವೇಳೆ20ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದೂ ಸೂಚಿಸಿತ್ತು.