<p><strong>ಚೆನ್ನೈ</strong> (ಪಿಟಿಐ): ತಮಿಳುನಾಡು ಹಣಕಾಸು ಸಚಿವ ತಂಗಂ ತೇನರಸು ಅವರು 2026–27ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಿದರು.</p>.<p>ಬಜೆಟ್ನಲ್ಲಿ ಸಾಮಾಜಿಕ ಭದ್ರತೆ ಯೋಜನೆಗಳಿಗಾಗಿ ಅವರು ಒಟ್ಟು ₹5,463 ಕೋಟಿ ಮೀಸಲಿಟ್ಟಿದ್ದಾರೆ.</p>.<p>ಬಜೆಟ್ ಭಾಷಣದ ವೇಳೆ ಅವರು, ‘ತಮಿಳುನಾಡಿನಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಸಲು ಕೇಂದ್ರ ಸರ್ಕಾರವು ಯತ್ನಿಸುತ್ತಿದೆ’ ಎಂದು ಆರೋಪಿಸಿದರು.</p>.<p>ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅನ್ಯಾಯ ಎಸಗಿದ ಹಲವು ಉದಾಹರಣೆಗಳು ನಮ್ಮ ಮುಂದಿವೆ ಎಂದರು.</p>.<p>‘ನಮ್ಮ ಸರ್ಕಾರವು ಹಿಂದೆಂದೂ ಕಂಡಿರದಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆಯನ್ನು ನಿರಾಕರಿಸಲಾಗುತ್ತಿದೆ. ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳ ಅನುದಾನವನ್ನು ತಡೆಹಿಡಿಯಲಾಗುತ್ತಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong> (ಪಿಟಿಐ): ತಮಿಳುನಾಡು ಹಣಕಾಸು ಸಚಿವ ತಂಗಂ ತೇನರಸು ಅವರು 2026–27ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಿದರು.</p>.<p>ಬಜೆಟ್ನಲ್ಲಿ ಸಾಮಾಜಿಕ ಭದ್ರತೆ ಯೋಜನೆಗಳಿಗಾಗಿ ಅವರು ಒಟ್ಟು ₹5,463 ಕೋಟಿ ಮೀಸಲಿಟ್ಟಿದ್ದಾರೆ.</p>.<p>ಬಜೆಟ್ ಭಾಷಣದ ವೇಳೆ ಅವರು, ‘ತಮಿಳುನಾಡಿನಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಸಲು ಕೇಂದ್ರ ಸರ್ಕಾರವು ಯತ್ನಿಸುತ್ತಿದೆ’ ಎಂದು ಆರೋಪಿಸಿದರು.</p>.<p>ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅನ್ಯಾಯ ಎಸಗಿದ ಹಲವು ಉದಾಹರಣೆಗಳು ನಮ್ಮ ಮುಂದಿವೆ ಎಂದರು.</p>.<p>‘ನಮ್ಮ ಸರ್ಕಾರವು ಹಿಂದೆಂದೂ ಕಂಡಿರದಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆಯನ್ನು ನಿರಾಕರಿಸಲಾಗುತ್ತಿದೆ. ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳ ಅನುದಾನವನ್ನು ತಡೆಹಿಡಿಯಲಾಗುತ್ತಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>