<p><strong>ನವದೆಹಲಿ:</strong> ಏರಿದ ವಸ್ತುಗಳ ಬೆಲೆ, ಆರ್ಥಿಕ ಬಿಕ್ಕಟ್ಟು, ಅಧ್ಯಕ್ಷರ ವಿರುದ್ಧ ಪ್ರತಿಭಟನೆ, ಬೀದಿಗಿಳಿದಿರುವ ಜನ,...ಈ ನಡುವೆ ಮತ್ತೆ ತುರ್ತು ಪರಿಸ್ಥಿತಿ! ನಿತ್ಯದ ಬದುಕು ಅಯೋಮಯವಾಗಿರುವ ಶ್ರೀಲಂಕಾದ ಜನರಿಗೆ ತಮಿಳುನಾಡಿನ ಪುಟಾಣಿಯೊಬ್ಬಳು ಸಹಾಯಹಸ್ತ ಚಾಚಿದ್ದಾಳೆ. ಹುಂಡಿಯಲ್ಲಿ ಕೂಡಿಟ್ಟಿದ್ದ ಅಷ್ಟೂ ಹಣವನ್ನು ಲಂಕಾ ಜನರಿಗೆ ನೀಡಿದ್ದಾಳೆ.</p>.<p>ರಾಮನಾಥಪುರಂನ ಹುಡುಗಿ ತಾನು ಈವರೆಗೂ ಉಳಿಸಿದ್ದ ₹4,400 ಹಣವನ್ನು ಜಿಲ್ಲಾಧಿಕಾರಿ ಶಂಕರ್ ಲಾಲ್ ಕುಮಾವತ್ ಅವರಿಗೆ ಕೊಟ್ಟು, ಸಂಕಷ್ಟದಲ್ಲಿರುವ ಶ್ರೀಲಂಕಾದ ಜನರಿಗೆ ತಲುಪಿಸುವಂತೆ ಕೋರಿದ್ದಾಳೆ. ಈ ಕುರಿತು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.</p>.<p>ಹುಡುಗಿಯ ಕಾರ್ಯಕ್ಕೆ ಕೊಲಂಬೊದಲ್ಲಿರುವ ಭಾರತದ ಹೈ ಕಮಿಷನ್ ಮೆಚ್ಚುಗೆ ವ್ಯಕ್ತಪಡಿಸಿದ್ದು, 'ಭಾರತ ಮತ್ತು ಶ್ರೀಲಂಕಾ ಜನರ ನಡುವಿನ ಬಾಂಧವ್ಯದ ದೃಢತೆಯ ಅನಾವರಣ...' ಎಂದು ಟ್ವೀಟಿಸಿದೆ.</p>.<p>ಡಿಎಂಕೆ ಪಕ್ಷದಿಂದ ಶ್ರೀಲಂಕಾಗೆ ಒಂದು ಕೋಟಿ ರೂಪಾಯಿ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಇತ್ತೀಚೆಗೆ ಘೋಷಿಸಿದ್ದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/business/commerce-news/lpg-price-hiked-here-is-list-of-price-in-varies-states-934975.html" itemprop="url">ಎಲ್ಪಿಜಿ ಸಿಲಿಂಡರ್ ದರ ₹1002 </a></p>.<p>ಡಿಎಂಕೆಯ ಸಂಸದರು ಒಂದು ತಿಂಗಳ ವೇತನವನ್ನು ತಮಿಳುನಾಡು ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ. ಲಂಕಾದ ಜನರಿಗೆ ಆಹಾರ ಮತ್ತು ಔಷಧಗಳಂತಹ ಅಗತ್ಯ ವಸ್ತುಗಳ ಖರೀದಿಗೆ ಅನುವಾಗುವ ನಿಟ್ಟಿನಲ್ಲಿ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಸ್ಟಾಲಿನ್ ಸಾರ್ವಜನಿಕರನ್ನು ಕೋರಿದ್ದರು.</p>.<p>ತೀವ್ರ ಇಂಧನ ಕೊರತೆ ಎದುರಿಸುತ್ತಿರುವ ಶ್ರೀಲಂಕಾಗೆ ಭಾರತದಿಂದ 40,000 ಮೆಟ್ರಿಕ್ ಟನ್ ಪೆಟ್ರೋಲ್ ಪೂರೈಕೆ ಮಾಡಲಾಗಿದೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/2-cylinders-then-for-the-price-of-1-now-rahul-gandhi-slams-union-government-over-lpg-price-hike-935006.html" itemprop="url">ಈಗಿನ ದರಕ್ಕೆ ಕಾಂಗ್ರೆಸ್ ಕಾಲದಲ್ಲಿ ಎರಡು ಸಿಲಿಂಡರ್ ಬರುತ್ತಿತ್ತು: ರಾಹುಲ್ </a></p>.<p>ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಶುಕ್ರವಾರ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಐದು ವಾರಗಳಲ್ಲಿ ಎರಡನೇ ಬಾರಿಗೆ ಕಠಿಣ ಕಾನೂನನ್ನು ಜಾರಿಗೊಳಿಸಲಾಗಿದೆ. ಏಪ್ರಿಲ್ 1 ರಂದು ಮೊದಲ ಬಾರಿಗೆ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಬಳಿಕ, ಏಪ್ರಿಲ್ 14ರಂದು ರದ್ದುಗೊಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಏರಿದ ವಸ್ತುಗಳ ಬೆಲೆ, ಆರ್ಥಿಕ ಬಿಕ್ಕಟ್ಟು, ಅಧ್ಯಕ್ಷರ ವಿರುದ್ಧ ಪ್ರತಿಭಟನೆ, ಬೀದಿಗಿಳಿದಿರುವ ಜನ,...ಈ ನಡುವೆ ಮತ್ತೆ ತುರ್ತು ಪರಿಸ್ಥಿತಿ! ನಿತ್ಯದ ಬದುಕು ಅಯೋಮಯವಾಗಿರುವ ಶ್ರೀಲಂಕಾದ ಜನರಿಗೆ ತಮಿಳುನಾಡಿನ ಪುಟಾಣಿಯೊಬ್ಬಳು ಸಹಾಯಹಸ್ತ ಚಾಚಿದ್ದಾಳೆ. ಹುಂಡಿಯಲ್ಲಿ ಕೂಡಿಟ್ಟಿದ್ದ ಅಷ್ಟೂ ಹಣವನ್ನು ಲಂಕಾ ಜನರಿಗೆ ನೀಡಿದ್ದಾಳೆ.</p>.<p>ರಾಮನಾಥಪುರಂನ ಹುಡುಗಿ ತಾನು ಈವರೆಗೂ ಉಳಿಸಿದ್ದ ₹4,400 ಹಣವನ್ನು ಜಿಲ್ಲಾಧಿಕಾರಿ ಶಂಕರ್ ಲಾಲ್ ಕುಮಾವತ್ ಅವರಿಗೆ ಕೊಟ್ಟು, ಸಂಕಷ್ಟದಲ್ಲಿರುವ ಶ್ರೀಲಂಕಾದ ಜನರಿಗೆ ತಲುಪಿಸುವಂತೆ ಕೋರಿದ್ದಾಳೆ. ಈ ಕುರಿತು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.</p>.<p>ಹುಡುಗಿಯ ಕಾರ್ಯಕ್ಕೆ ಕೊಲಂಬೊದಲ್ಲಿರುವ ಭಾರತದ ಹೈ ಕಮಿಷನ್ ಮೆಚ್ಚುಗೆ ವ್ಯಕ್ತಪಡಿಸಿದ್ದು, 'ಭಾರತ ಮತ್ತು ಶ್ರೀಲಂಕಾ ಜನರ ನಡುವಿನ ಬಾಂಧವ್ಯದ ದೃಢತೆಯ ಅನಾವರಣ...' ಎಂದು ಟ್ವೀಟಿಸಿದೆ.</p>.<p>ಡಿಎಂಕೆ ಪಕ್ಷದಿಂದ ಶ್ರೀಲಂಕಾಗೆ ಒಂದು ಕೋಟಿ ರೂಪಾಯಿ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಇತ್ತೀಚೆಗೆ ಘೋಷಿಸಿದ್ದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/business/commerce-news/lpg-price-hiked-here-is-list-of-price-in-varies-states-934975.html" itemprop="url">ಎಲ್ಪಿಜಿ ಸಿಲಿಂಡರ್ ದರ ₹1002 </a></p>.<p>ಡಿಎಂಕೆಯ ಸಂಸದರು ಒಂದು ತಿಂಗಳ ವೇತನವನ್ನು ತಮಿಳುನಾಡು ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ. ಲಂಕಾದ ಜನರಿಗೆ ಆಹಾರ ಮತ್ತು ಔಷಧಗಳಂತಹ ಅಗತ್ಯ ವಸ್ತುಗಳ ಖರೀದಿಗೆ ಅನುವಾಗುವ ನಿಟ್ಟಿನಲ್ಲಿ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಸ್ಟಾಲಿನ್ ಸಾರ್ವಜನಿಕರನ್ನು ಕೋರಿದ್ದರು.</p>.<p>ತೀವ್ರ ಇಂಧನ ಕೊರತೆ ಎದುರಿಸುತ್ತಿರುವ ಶ್ರೀಲಂಕಾಗೆ ಭಾರತದಿಂದ 40,000 ಮೆಟ್ರಿಕ್ ಟನ್ ಪೆಟ್ರೋಲ್ ಪೂರೈಕೆ ಮಾಡಲಾಗಿದೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/2-cylinders-then-for-the-price-of-1-now-rahul-gandhi-slams-union-government-over-lpg-price-hike-935006.html" itemprop="url">ಈಗಿನ ದರಕ್ಕೆ ಕಾಂಗ್ರೆಸ್ ಕಾಲದಲ್ಲಿ ಎರಡು ಸಿಲಿಂಡರ್ ಬರುತ್ತಿತ್ತು: ರಾಹುಲ್ </a></p>.<p>ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಶುಕ್ರವಾರ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಐದು ವಾರಗಳಲ್ಲಿ ಎರಡನೇ ಬಾರಿಗೆ ಕಠಿಣ ಕಾನೂನನ್ನು ಜಾರಿಗೊಳಿಸಲಾಗಿದೆ. ಏಪ್ರಿಲ್ 1 ರಂದು ಮೊದಲ ಬಾರಿಗೆ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಬಳಿಕ, ಏಪ್ರಿಲ್ 14ರಂದು ರದ್ದುಗೊಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>