<p><strong>ಚೆನ್ನೈ:</strong> ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ, ಇಂದು (ಮಂಗಳವಾರ) ರಾಜ್ಯ ಸರ್ಕಾರದ ಭಾಷಣವನ್ನು ಓದದೇ ವಿಧಾನಸಭೆಯಿಂದ ಹೊರನಡೆದಿದ್ದಾರೆ.</p><p>ಇದರೊಂದಿಗೆ ಸತತ ಮೂರನೇ ವರ್ಷವೂ ಸರ್ಕಾರ ಸಿದ್ಧಪಡಿಸಿಕೊಟ್ಟ ಭಾಷಣವನ್ನು ಓದಲು ನಿರಾಕರಿಸಿದ್ದಾರೆ. </p><p>'ನನಗೆ ನಿರಾಸೆಯಾಗಿದೆ. ರಾಷ್ಟ್ರಗೀತೆಗೆ ಸರಿಯಾದ ಗೌರವ ಸಿಗಲಿಲ್ಲ' ಎಂದು ಆರ್.ಎನ್.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p><p>ಸದನಕ್ಕೆ ಆಗಮಿಸಿದ ರವಿ ಅವರನ್ನು ಸ್ಪೀಕರ್ ಎಂ. ಅಪ್ಪಾವು ಅವರು ಸ್ವಾಗತಿಸಿದರು. ಆದರೆ ತಮಿಳುನಾಡು ವಿಧಾನಸಭೆಯನ್ನು ಉದ್ದೇಶಿಸಿ ಭಾಷಣ ಮಾಡದೇ ಹೊರಟು ಹೋದರು. </p>.ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ.ವರ್ತನೆ ಬದಲಿಸಿಕೊಳ್ಳದ ರಾಜ್ಯಪಾಲ: ಸ್ಟಾಲಿನ್ ಆರೋಪ.<h2><strong>ಸದನಕ್ಕೆ ಅವಮಾನ: ಸ್ಟಾಲಿನ್</strong></h2><p>'ಅಧಿವೇಶನದಿಂದ ರಾಜ್ಯಪಾಲ ಆರ್.ಎನ್.ರವಿ ಅವರ ಹೊರನಡೆದಿರುವ ನಡೆಯನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಟೀಕಿಸಿದ್ದಾರೆ. ಸಾಂಪ್ರದಾಯವನ್ನು ಉಲ್ಲಂಘಿಸಿ ರಾಜ್ಯಪಾಲರು ಹೊರನಡೆದಿದ್ದಾರೆ. ರಾಜ್ಯಪಾಲರು ಉದ್ದೇಶಪೂರ್ವಕವಾಗಿಯೇ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ನಡೆಯು ಇಡೀ ಸದನವನ್ನು ಅವಮಾನಿಸಿದಂತೆ' ಎಂದು ಸ್ಟಾಲಿನ್ ಆರೋಪಿಸಿದ್ದಾರೆ. </p><p>'ರಾಜ್ಯಪಾಲರಿಗೆ ಭಾಷಣದಲ್ಲಿ ತಮ್ಮ ಅಭಿಪ್ರಾಯಗಳನ್ನು ಸೇರಿಸಲು ಯಾವುದೇ ಅವಕಾಶ ಇರುವುದಿಲ್ಲ' ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ, ಇಂದು (ಮಂಗಳವಾರ) ರಾಜ್ಯ ಸರ್ಕಾರದ ಭಾಷಣವನ್ನು ಓದದೇ ವಿಧಾನಸಭೆಯಿಂದ ಹೊರನಡೆದಿದ್ದಾರೆ.</p><p>ಇದರೊಂದಿಗೆ ಸತತ ಮೂರನೇ ವರ್ಷವೂ ಸರ್ಕಾರ ಸಿದ್ಧಪಡಿಸಿಕೊಟ್ಟ ಭಾಷಣವನ್ನು ಓದಲು ನಿರಾಕರಿಸಿದ್ದಾರೆ. </p><p>'ನನಗೆ ನಿರಾಸೆಯಾಗಿದೆ. ರಾಷ್ಟ್ರಗೀತೆಗೆ ಸರಿಯಾದ ಗೌರವ ಸಿಗಲಿಲ್ಲ' ಎಂದು ಆರ್.ಎನ್.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p><p>ಸದನಕ್ಕೆ ಆಗಮಿಸಿದ ರವಿ ಅವರನ್ನು ಸ್ಪೀಕರ್ ಎಂ. ಅಪ್ಪಾವು ಅವರು ಸ್ವಾಗತಿಸಿದರು. ಆದರೆ ತಮಿಳುನಾಡು ವಿಧಾನಸಭೆಯನ್ನು ಉದ್ದೇಶಿಸಿ ಭಾಷಣ ಮಾಡದೇ ಹೊರಟು ಹೋದರು. </p>.ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ.ವರ್ತನೆ ಬದಲಿಸಿಕೊಳ್ಳದ ರಾಜ್ಯಪಾಲ: ಸ್ಟಾಲಿನ್ ಆರೋಪ.<h2><strong>ಸದನಕ್ಕೆ ಅವಮಾನ: ಸ್ಟಾಲಿನ್</strong></h2><p>'ಅಧಿವೇಶನದಿಂದ ರಾಜ್ಯಪಾಲ ಆರ್.ಎನ್.ರವಿ ಅವರ ಹೊರನಡೆದಿರುವ ನಡೆಯನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಟೀಕಿಸಿದ್ದಾರೆ. ಸಾಂಪ್ರದಾಯವನ್ನು ಉಲ್ಲಂಘಿಸಿ ರಾಜ್ಯಪಾಲರು ಹೊರನಡೆದಿದ್ದಾರೆ. ರಾಜ್ಯಪಾಲರು ಉದ್ದೇಶಪೂರ್ವಕವಾಗಿಯೇ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ನಡೆಯು ಇಡೀ ಸದನವನ್ನು ಅವಮಾನಿಸಿದಂತೆ' ಎಂದು ಸ್ಟಾಲಿನ್ ಆರೋಪಿಸಿದ್ದಾರೆ. </p><p>'ರಾಜ್ಯಪಾಲರಿಗೆ ಭಾಷಣದಲ್ಲಿ ತಮ್ಮ ಅಭಿಪ್ರಾಯಗಳನ್ನು ಸೇರಿಸಲು ಯಾವುದೇ ಅವಕಾಶ ಇರುವುದಿಲ್ಲ' ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>