<p><strong>ಚೆನ್ನೈ</strong>: ‘ತಮಿಳುನಾಡು ಸರ್ಕಾರವು 2 ಸಾವಿರ ಎಕರೆ ಪ್ರದೇಶದಲ್ಲಿ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿದ್ದು, ವಾರ್ಷಿಕ 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರಲಿದೆ. ಹೊಸ ನಿಲ್ದಾಣವು ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗಳ ಕೈಗಾರಿಕಾ ಅಗತ್ಯಗಳನ್ನು ಪೂರೈಸಲಿದೆ’ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಅಧಿವೇಶನದಲ್ಲಿ ಗುರುವಾರ ಪ್ರಕಟಿಸಿದರು.</p>.<p>ಸದನದಲ್ಲಿದ್ದ ಎಲ್ಲ ರಾಜಕೀಯ ಪಕ್ಷಗಳು ಈ ನಿರ್ಧಾರವನ್ನು ಸ್ವಾಗತಿಸಿದವು. </p>.<p>‘ಡಿಎಂಕೆ ಅಧಿಕಾರಕ್ಕೆ ಬಂದ ಬಳಿಕ ತಮಿಳುನಾಡು ಎಲ್ಲ ಕ್ಷೇತ್ರಗಳಲ್ಲಿ ವ್ಯಾಪಕ ಪ್ರಗತಿ ದಾಖಲಿಸುತ್ತಿದ್ದು, 2022ರ ರಫ್ತು ಸನ್ನದ್ಧತೆ ಸೂಚ್ಯಂಕದಲ್ಲಿ ಅತ್ಯುತ್ತಮ ಪ್ರಗತಿ ದಾಖಲಿಸಿದೆ’ ಎಂದರು.</p>.<p>‘ಮೋಟರ್ ವಾಹನ, ಎಂಜಿನ್ಗಳ ಬಿಡಿಭಾಗಗಳು, ಚರ್ಮದ ಉತ್ಪನ್ನಗಳು ಹಾಗೂ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ರಫ್ತಿನಲ್ಲಿ ಇಡೀ ದೇಶದಲ್ಲಿ ತಮಿಳುನಾಡು ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಕೈಗಾರಿಕಾ ಬೆಳವಣಿಗೆಯಲ್ಲಿ ತಮಿಳುನಾಡು ಅತ್ಯುನ್ನತ ಕಾರ್ಯಕ್ಷಮತೆಯ ರಾಜ್ಯವಾಗಿ ಮಾರ್ಪಟ್ಟಿದೆ’ ಎಂದು ಸ್ಟಾಲಿನ್ ಹೇಳಿದರು.</p>.<p>‘ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕ್ ವಾಹನಗಳ ತಯಾರಿಕೆ ಕ್ಷೇತ್ರದಲ್ಲಿ ಹೊಸೂರು ಕೆಲವು ವರ್ಷಗಳಿಂದ ಈಚೆಗೆ ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸಿದ್ದು, ಹೊಸೂರು ಪಟ್ಟಣದ ಮೂಲಸೌಕರ್ಯ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ’ ಎಂದು ಸ್ಟಾಲಿನ್ ತಿಳಿಸಿದರು.</p>.<p>‘ಧರ್ಮಪುರಿ, ಕೃಷ್ಣಗಿರಿ ಪ್ರಾಂತ್ಯಗಳ ಸಮಗ್ರ ಸಾಮಾಜಿಕ– ಆರ್ಥಿಕ ಅಭಿವೃದ್ಧಿಗಾಗಿ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದು ಅಗತ್ಯವೆಂದು ಸರ್ಕಾರವು ಪ್ರತಿಪಾದಿಸುತ್ತದೆ’ ಎಂದರು.</p>.<div><blockquote>2030ರ ವೇಳೆಗೆ ರಾಜ್ಯವನ್ನು 1 ಟ್ರಿಲಿಯನ್ ಡಾಲರ್ (ಸುಮಾರು ₹83 ಲಕ್ಷ ಕೋಟಿ) ಆರ್ಥಿಕತೆಯನ್ನಾಗಿ ಮಾರ್ಪಡಿಸಲು ಎಲ್ಲ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ.</blockquote><span class="attribution">– ಎಂ.ಕೆ.ಸ್ಟಾಲಿನ್, ತಮಿಳುನಾಡು ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ‘ತಮಿಳುನಾಡು ಸರ್ಕಾರವು 2 ಸಾವಿರ ಎಕರೆ ಪ್ರದೇಶದಲ್ಲಿ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿದ್ದು, ವಾರ್ಷಿಕ 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರಲಿದೆ. ಹೊಸ ನಿಲ್ದಾಣವು ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗಳ ಕೈಗಾರಿಕಾ ಅಗತ್ಯಗಳನ್ನು ಪೂರೈಸಲಿದೆ’ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಅಧಿವೇಶನದಲ್ಲಿ ಗುರುವಾರ ಪ್ರಕಟಿಸಿದರು.</p>.<p>ಸದನದಲ್ಲಿದ್ದ ಎಲ್ಲ ರಾಜಕೀಯ ಪಕ್ಷಗಳು ಈ ನಿರ್ಧಾರವನ್ನು ಸ್ವಾಗತಿಸಿದವು. </p>.<p>‘ಡಿಎಂಕೆ ಅಧಿಕಾರಕ್ಕೆ ಬಂದ ಬಳಿಕ ತಮಿಳುನಾಡು ಎಲ್ಲ ಕ್ಷೇತ್ರಗಳಲ್ಲಿ ವ್ಯಾಪಕ ಪ್ರಗತಿ ದಾಖಲಿಸುತ್ತಿದ್ದು, 2022ರ ರಫ್ತು ಸನ್ನದ್ಧತೆ ಸೂಚ್ಯಂಕದಲ್ಲಿ ಅತ್ಯುತ್ತಮ ಪ್ರಗತಿ ದಾಖಲಿಸಿದೆ’ ಎಂದರು.</p>.<p>‘ಮೋಟರ್ ವಾಹನ, ಎಂಜಿನ್ಗಳ ಬಿಡಿಭಾಗಗಳು, ಚರ್ಮದ ಉತ್ಪನ್ನಗಳು ಹಾಗೂ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ರಫ್ತಿನಲ್ಲಿ ಇಡೀ ದೇಶದಲ್ಲಿ ತಮಿಳುನಾಡು ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಕೈಗಾರಿಕಾ ಬೆಳವಣಿಗೆಯಲ್ಲಿ ತಮಿಳುನಾಡು ಅತ್ಯುನ್ನತ ಕಾರ್ಯಕ್ಷಮತೆಯ ರಾಜ್ಯವಾಗಿ ಮಾರ್ಪಟ್ಟಿದೆ’ ಎಂದು ಸ್ಟಾಲಿನ್ ಹೇಳಿದರು.</p>.<p>‘ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕ್ ವಾಹನಗಳ ತಯಾರಿಕೆ ಕ್ಷೇತ್ರದಲ್ಲಿ ಹೊಸೂರು ಕೆಲವು ವರ್ಷಗಳಿಂದ ಈಚೆಗೆ ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸಿದ್ದು, ಹೊಸೂರು ಪಟ್ಟಣದ ಮೂಲಸೌಕರ್ಯ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ’ ಎಂದು ಸ್ಟಾಲಿನ್ ತಿಳಿಸಿದರು.</p>.<p>‘ಧರ್ಮಪುರಿ, ಕೃಷ್ಣಗಿರಿ ಪ್ರಾಂತ್ಯಗಳ ಸಮಗ್ರ ಸಾಮಾಜಿಕ– ಆರ್ಥಿಕ ಅಭಿವೃದ್ಧಿಗಾಗಿ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದು ಅಗತ್ಯವೆಂದು ಸರ್ಕಾರವು ಪ್ರತಿಪಾದಿಸುತ್ತದೆ’ ಎಂದರು.</p>.<div><blockquote>2030ರ ವೇಳೆಗೆ ರಾಜ್ಯವನ್ನು 1 ಟ್ರಿಲಿಯನ್ ಡಾಲರ್ (ಸುಮಾರು ₹83 ಲಕ್ಷ ಕೋಟಿ) ಆರ್ಥಿಕತೆಯನ್ನಾಗಿ ಮಾರ್ಪಡಿಸಲು ಎಲ್ಲ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ.</blockquote><span class="attribution">– ಎಂ.ಕೆ.ಸ್ಟಾಲಿನ್, ತಮಿಳುನಾಡು ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>