<p><strong>ನವದೆಹಲಿ:</strong> ದ್ವಿಭಾಷಾ ನೀತಿ ಅನುಸರಿಸಲಾಗುತ್ತಿದೆ ಎಂಬ ಕಾರಣ ನೀಡುತ್ತಿದ್ದ ತಮಿಳುನಾಡು, ರಾಜ್ಯದಲ್ಲಿ ಜವಾಹರ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಿರಲಿಲ್ಲ. ಇಂತಹ ಕ್ರಮ ಕೈಗೊಂಡ ದೇಶದ ಏಕೈಕ ರಾಜ್ಯವೂ ಆಗಿತ್ತು. ಆದರೆ, ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಕುರಿತು ನೀಡಿರುವ ತೀರ್ಪಿನಿಂದಾಗಿ ತಮಿಳುನಾಡು ಸರ್ಕಾರ ಈಗ ರಾಜ್ಯದಲ್ಲಿ ಈ ಶಾಲೆಗಳನ್ನು ಸ್ಥಾಪಿಸಲೇಬೇಕಾಗಿದೆ.</p>.<p>ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆದಿರುವ ಶಿಕ್ಷಣ ಸಚಿವಾಲಯವು, ನವೋದಯ ಶಾಲೆಗಳನ್ನು ಸ್ಥಾಪಿಸಲು ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ಚರ್ಚಿಸಲು ಶೀಘ್ರವೇ ಸಭೆ ಆಯೋಜಿಸುವಂತೆ ಸೂಚಿಸಿದೆ.</p>.<p>ಈ ಕುರಿತು ಸುಪ್ರೀಂ ಕೋರ್ಟ್ ಡಿಸೆಂಬರ್ 16ರಂದು ತೀರ್ಪು ನೀಡಿದೆ. ‘ಜವಾಹರ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸುವುದಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳುವಂತಿಲ್ಲ. ಈ ಶಾಲೆಗಳನ್ನು ಸ್ಥಾಪಿಸುವ ಪ್ರಕ್ರಿಯೆಗೆ 15 ದಿನಗಳ ಒಳಗಾಗಿ ಚಾಲನೆ ನೀಡಬೇಕು’ ಎಂದು ನಿರ್ದೇಶನ ನೀಡಿದೆ.</p>.<p>‘ರಾಜ್ಯದ ಪ್ರತಿ ಜಿಲ್ಲೆಯಲ್ಲಿ ನವೋದಯ ಶಾಲೆ ಸ್ಥಾಪಿಸಲು ಎಷ್ಟು ಜಮೀನು ಅಗತ್ಯವಿದೆ ಎಂಬ ಬಗ್ಗೆ ವಿವರಗಳನ್ನು ಸಿದ್ಧಪಡಿಸಬೇಕು’ ಎಂದೂ ಸೂಚಿಸಿದೆ.</p>.<p>6ರಿಂದ 10ನೇ ತರಗತಿವರೆಗೆ ಮೂರು ಭಾರತೀಯ ಭಾಷೆಗಳಲ್ಲಿ ಬೋಧಿಸಬೇಕು. ಇವುಗಳಲ್ಲಿ ಎರಡು ಭಾರತೀಯ ಭಾಷೆಗಳೇ ಆಗಿರಬೇಕು ಎಂದು ರಾಷ್ಟ್ರೀಯ ಶಿಕ್ಷಣ ನೀತಿ–2020 (ಎನ್ಇಪಿ) ಹೇಳುತ್ತದೆ.</p>.<p><strong>6 ರಾಜ್ಯಗಳಿಗೆ ಪತ್ರ:</strong> ಎನ್ಇಪಿ ಅಡಿ ಕೇಂದ್ರ ಸರ್ಕಾರ ರೂಪಿಸಿರುವ ನೀತಿಯನ್ನು ಪಾಲನೆ ಮಾಡುವಂತೆ ಸೂಚಿಸಿ ತಮಿಳುನಾಡು, ಕೇರಳ, ಪುದುಚೆರಿ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಛತ್ತೀಸಗಢ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎರಡನೇ ಬಾರಿ ಪತ್ರ ಬರೆದಿದೆ. </p>.<p>ಈ ಮೊದಲು, 2023ರ ಫೆಬ್ರುವರಿ 9ರಂದು ಈ ರಾಜ್ಯಗಳಿಗೆ ಪತ್ರ ಬರೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದ್ವಿಭಾಷಾ ನೀತಿ ಅನುಸರಿಸಲಾಗುತ್ತಿದೆ ಎಂಬ ಕಾರಣ ನೀಡುತ್ತಿದ್ದ ತಮಿಳುನಾಡು, ರಾಜ್ಯದಲ್ಲಿ ಜವಾಹರ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಿರಲಿಲ್ಲ. ಇಂತಹ ಕ್ರಮ ಕೈಗೊಂಡ ದೇಶದ ಏಕೈಕ ರಾಜ್ಯವೂ ಆಗಿತ್ತು. ಆದರೆ, ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಕುರಿತು ನೀಡಿರುವ ತೀರ್ಪಿನಿಂದಾಗಿ ತಮಿಳುನಾಡು ಸರ್ಕಾರ ಈಗ ರಾಜ್ಯದಲ್ಲಿ ಈ ಶಾಲೆಗಳನ್ನು ಸ್ಥಾಪಿಸಲೇಬೇಕಾಗಿದೆ.</p>.<p>ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆದಿರುವ ಶಿಕ್ಷಣ ಸಚಿವಾಲಯವು, ನವೋದಯ ಶಾಲೆಗಳನ್ನು ಸ್ಥಾಪಿಸಲು ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ಚರ್ಚಿಸಲು ಶೀಘ್ರವೇ ಸಭೆ ಆಯೋಜಿಸುವಂತೆ ಸೂಚಿಸಿದೆ.</p>.<p>ಈ ಕುರಿತು ಸುಪ್ರೀಂ ಕೋರ್ಟ್ ಡಿಸೆಂಬರ್ 16ರಂದು ತೀರ್ಪು ನೀಡಿದೆ. ‘ಜವಾಹರ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸುವುದಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳುವಂತಿಲ್ಲ. ಈ ಶಾಲೆಗಳನ್ನು ಸ್ಥಾಪಿಸುವ ಪ್ರಕ್ರಿಯೆಗೆ 15 ದಿನಗಳ ಒಳಗಾಗಿ ಚಾಲನೆ ನೀಡಬೇಕು’ ಎಂದು ನಿರ್ದೇಶನ ನೀಡಿದೆ.</p>.<p>‘ರಾಜ್ಯದ ಪ್ರತಿ ಜಿಲ್ಲೆಯಲ್ಲಿ ನವೋದಯ ಶಾಲೆ ಸ್ಥಾಪಿಸಲು ಎಷ್ಟು ಜಮೀನು ಅಗತ್ಯವಿದೆ ಎಂಬ ಬಗ್ಗೆ ವಿವರಗಳನ್ನು ಸಿದ್ಧಪಡಿಸಬೇಕು’ ಎಂದೂ ಸೂಚಿಸಿದೆ.</p>.<p>6ರಿಂದ 10ನೇ ತರಗತಿವರೆಗೆ ಮೂರು ಭಾರತೀಯ ಭಾಷೆಗಳಲ್ಲಿ ಬೋಧಿಸಬೇಕು. ಇವುಗಳಲ್ಲಿ ಎರಡು ಭಾರತೀಯ ಭಾಷೆಗಳೇ ಆಗಿರಬೇಕು ಎಂದು ರಾಷ್ಟ್ರೀಯ ಶಿಕ್ಷಣ ನೀತಿ–2020 (ಎನ್ಇಪಿ) ಹೇಳುತ್ತದೆ.</p>.<p><strong>6 ರಾಜ್ಯಗಳಿಗೆ ಪತ್ರ:</strong> ಎನ್ಇಪಿ ಅಡಿ ಕೇಂದ್ರ ಸರ್ಕಾರ ರೂಪಿಸಿರುವ ನೀತಿಯನ್ನು ಪಾಲನೆ ಮಾಡುವಂತೆ ಸೂಚಿಸಿ ತಮಿಳುನಾಡು, ಕೇರಳ, ಪುದುಚೆರಿ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಛತ್ತೀಸಗಢ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎರಡನೇ ಬಾರಿ ಪತ್ರ ಬರೆದಿದೆ. </p>.<p>ಈ ಮೊದಲು, 2023ರ ಫೆಬ್ರುವರಿ 9ರಂದು ಈ ರಾಜ್ಯಗಳಿಗೆ ಪತ್ರ ಬರೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>