ಅಧಿಕಾರಿಗಳ ವರ್ಗಾವಣೆ ಸಂಬಂಧ ರಾಜ್ಯದಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಚುನಾವಣಾ ಆಯೋಗವು, ವಿಶೇಷ ವೀಕ್ಷಕರ ವರದಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.ತಿರುಚನಾಪಳ್ಳಿ ಎಸ್ಪಿ ಪಿ.ರಾಜನ್, ಜಿಲ್ಲಾಧಿಕಾರಿ ಎಸ್.ಶಿವರಾಸು ಮತ್ತು ಶ್ರೀರಂಗಂನ ಉಪ ಜಿಲ್ಲಾಧಿಕಾರಿ ನಿಶಾಂತ್ ಕೃಷ್ಣ ಅವರನ್ನು ಚುನಾವಣೇತರ ಹುದ್ದೆಗಳಿಗೆ ವರ್ಗಾಯಿಸಲು ಅನುಮೋದನೆ ನೀಡಲಾಗಿದೆ ಎಂದೂ ಹೇಳಿದೆ.