<p>ಚೆನ್ನೈ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಡಿಎಂಕೆ ಮತ್ತು ಅದರ ಮೈತ್ರಿ ಪಕ್ಷಗಳು ತಮಿಳುನಾಡಿನಾದ್ಯಂತ ಮಂಗಳವಾರ ಪ್ರತಿಭಟಿಸಿದವು.</p>.<p>‘ಚುನಾವಣಾ ಆಯೋಗ ಕೈಗೊಂಡಿರುವ ಎಸ್ಐಆರ್ ಪ್ರಕ್ರಿಯೆಯನ್ನು ತಡೆಯುವುದು ಕಾರ್ಯಕರ್ತರ ಪ್ರಮುಖ ಕರ್ತವ್ಯವಾಗಬೇಕಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ಸಂದರ್ಭದಲ್ಲಿ ಹೇಳಿದರು.</p>.<p>‘ಪ್ರಜಾಪ್ರಭುತ್ವದ ಮೂಲಹಕ್ಕನ್ನು ಎಸ್ಐಆರ್ ಕಸಿದುಕೊಳ್ಳಲಿದೆ. ಆದ್ದರಿಂದ ಇದರ ವಿರುದ್ಧ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಕಾನೂನಾತ್ಮಕವಾಗಿ ಹಾಗೂ ಬೀದಿಗಿಳಿದು ಹೋರಾಟ ನಡೆಸಲಿವೆ’ ಎಂದು ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ರಾಜ್ಯದಲ್ಲಿ ಎಸ್ಐಆರ್ ಆರಂಭವಾಗಿದೆ. ಈ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮ ತಡೆಗಟ್ಟಲಿಕ್ಕಾಗಿಯೇ ನಾವು ಈಗಾಗಲೇ ಸಹಾಯವಾಣಿ ಆರಂಭಿಸಿದ್ದೇವೆ. ಜಾತ್ಯತೀತ ಪ್ರಗತಿಪರ ಒಕ್ಕೂಟದ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ನಮ್ಮ ಜನರ ಮತದಾನದ ಹಕ್ಕನ್ನು ರಕ್ಷಿಸಲಿಕ್ಕಾಗಿ ಹೋರಾಟ ಮುಂದುವರಿಸೋಣ’ ಎಂದಿದ್ದಾರೆ.</p>.<p>ರಾಜ್ಯದ ಎಲ್ಲೆಡೆ ಪ್ರತಿಭಟಿಸಿದ ಡಿಎಂಕೆ, ಕಾಂಗ್ರೆಸ್, ವಿಸಿಕೆ ಮತ್ತು ಎಡಪಕ್ಷಗಳ ಮುಖಂಡರು, ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆವರೆಗೂ ಎಸ್ಐಆರ್ ಪ್ರಕ್ರಿಯೆ ಮುಂದೂಡಬೇಕು ಎಂದು ಆಗ್ರಹಿಸಿದರು.</p>.<p>‘ಇದು ಭಾರತದ ಚುನಾವಣಾ ಆಯೋಗವೋ ಅಥವಾ ಮೋದಿ ಚುನಾವಣಾ ಆಯೋಗವೋ,’ ‘ಚುನಾವಣಾ ಆಯೋಗವು ಬಿಜೆಪಿಯ ಒಂದು ವಿಭಾಗದಂತೆ ಕಾರ್ಯನಿರ್ವಹಿಸುತ್ತಿದೆ’ ಎಂದು ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಡಿಎಂಕೆ ಮತ್ತು ಅದರ ಮೈತ್ರಿ ಪಕ್ಷಗಳು ತಮಿಳುನಾಡಿನಾದ್ಯಂತ ಮಂಗಳವಾರ ಪ್ರತಿಭಟಿಸಿದವು.</p>.<p>‘ಚುನಾವಣಾ ಆಯೋಗ ಕೈಗೊಂಡಿರುವ ಎಸ್ಐಆರ್ ಪ್ರಕ್ರಿಯೆಯನ್ನು ತಡೆಯುವುದು ಕಾರ್ಯಕರ್ತರ ಪ್ರಮುಖ ಕರ್ತವ್ಯವಾಗಬೇಕಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ಸಂದರ್ಭದಲ್ಲಿ ಹೇಳಿದರು.</p>.<p>‘ಪ್ರಜಾಪ್ರಭುತ್ವದ ಮೂಲಹಕ್ಕನ್ನು ಎಸ್ಐಆರ್ ಕಸಿದುಕೊಳ್ಳಲಿದೆ. ಆದ್ದರಿಂದ ಇದರ ವಿರುದ್ಧ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಕಾನೂನಾತ್ಮಕವಾಗಿ ಹಾಗೂ ಬೀದಿಗಿಳಿದು ಹೋರಾಟ ನಡೆಸಲಿವೆ’ ಎಂದು ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ರಾಜ್ಯದಲ್ಲಿ ಎಸ್ಐಆರ್ ಆರಂಭವಾಗಿದೆ. ಈ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮ ತಡೆಗಟ್ಟಲಿಕ್ಕಾಗಿಯೇ ನಾವು ಈಗಾಗಲೇ ಸಹಾಯವಾಣಿ ಆರಂಭಿಸಿದ್ದೇವೆ. ಜಾತ್ಯತೀತ ಪ್ರಗತಿಪರ ಒಕ್ಕೂಟದ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ನಮ್ಮ ಜನರ ಮತದಾನದ ಹಕ್ಕನ್ನು ರಕ್ಷಿಸಲಿಕ್ಕಾಗಿ ಹೋರಾಟ ಮುಂದುವರಿಸೋಣ’ ಎಂದಿದ್ದಾರೆ.</p>.<p>ರಾಜ್ಯದ ಎಲ್ಲೆಡೆ ಪ್ರತಿಭಟಿಸಿದ ಡಿಎಂಕೆ, ಕಾಂಗ್ರೆಸ್, ವಿಸಿಕೆ ಮತ್ತು ಎಡಪಕ್ಷಗಳ ಮುಖಂಡರು, ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆವರೆಗೂ ಎಸ್ಐಆರ್ ಪ್ರಕ್ರಿಯೆ ಮುಂದೂಡಬೇಕು ಎಂದು ಆಗ್ರಹಿಸಿದರು.</p>.<p>‘ಇದು ಭಾರತದ ಚುನಾವಣಾ ಆಯೋಗವೋ ಅಥವಾ ಮೋದಿ ಚುನಾವಣಾ ಆಯೋಗವೋ,’ ‘ಚುನಾವಣಾ ಆಯೋಗವು ಬಿಜೆಪಿಯ ಒಂದು ವಿಭಾಗದಂತೆ ಕಾರ್ಯನಿರ್ವಹಿಸುತ್ತಿದೆ’ ಎಂದು ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>