‘ಡಿಎಂಕೆ ಪಕ್ಷ, ನೀಟ್ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿತ್ತು. ಇದರಿಂದಾಗಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧಗೊಂಡಿರಲಿಲ್ಲ'ಎಂದು ಪಳನಿಸ್ವಾಮಿ ಆರೋಪಿಸಿದರು. ಮೃತರ ಕುಟುಂಬಕ್ಕೆ ನಗದು ಪರಿಹಾರ ನೀಡುವ ಜತೆಗೆ, ಸದಸ್ಯರೊಬ್ಬರಿಗೆ ಕೆಲಸಕೊಡಬೇಕೆಂದು ಒತ್ತಾಯಿಸಿದರು. ನಂತರ ಕಪ್ಪು ಪಟ್ಟಿ ಧರಿಸಿ ಸದನಕ್ಕೆ ಬಂದಿದ್ದ ವಿರೋಧ ಪಕ್ಷದ ಸದಸ್ಯರು ಪಳನಿಸ್ವಾಮಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.