<p><strong>ಚೆನ್ನೈ</strong>: 21ಲಕ್ಷಕ್ಕೂ ಅಧಿಕ ಮಂದಿ ವೃದ್ಧರು ಮತ್ತು ಅಂಗವಿಕಲರ ಮನೆ ಬಾಗಿಲಿಗೆ ಪಡಿತರ ಸಾಮಗ್ರಿಗಳನ್ನು ತಲುಪಿಸುವ ವಿನೂತನ ಯೋಜನೆಯನ್ನು ಜಾರಿಗೆ ತರಲು ತಮಿಳುನಾಡು ಸರ್ಕಾರ ಮುಂದಾಗಿದೆ.</p><p>ಈ ಕಾರ್ಯಕ್ರಮವನ್ನು ಇಂದು (ಮಂಗಳವಾರ) ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>'ಮುಖ್ಯಮಂತ್ರಿಗಳ ಥಾಯುಮನವರ್ ಯೋಜನೆ'ಯನ್ನು ಸ್ಟಾಲಿನ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಡಿ ಅಕ್ಕಿ ಮತ್ತು ಸಕ್ಕರೆ ಸೇರಿದಂತೆ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.</p>.'ಕೂಲಿ' ಚಿತ್ರಕ್ಕಾಗಿ ಸೂಪರ್ ಸ್ಟಾರ್ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು? .ಚುನಾವಣೆ ನಡೆಯುವ ತನಕ ಬಿಬಿಎಂಪಿ ಕಾಯ್ದೆಯೇ ಮುಂದುವರಿಯಲಿದೆ: ಅಡ್ವೊಕೇಟ್ ಜನರಲ್ . <p>70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.</p><p>ಸುಮಾರು 20.42 ಲಕ್ಷ ಹಿರಿಯ ನಾಗರಿಕರು ಮತ್ತು 1.27 ಲಕ್ಷಕ್ಕೂ ಹೆಚ್ಚು ಅಂಗವಿಕಲರು ಈ ಯೋಜನೆಯಡಿ ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.</p><p>ತಿಂಗಳ ಪ್ರತಿ ಎರಡನೇ ಶನಿವಾರ ಮತ್ತು ಭಾನುವಾರ ಫಲಾನುಭವಿಗಳಿಗೆ ಪಡಿತರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ಇದಕ್ಕೆ ಸಂಬಂಧಿತ ವಿವರಗಳನ್ನು ಈಗಾಗಲೇ ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯಿಂದ ಸ್ವೀಕರಿಸಲಾಗಿದೆ. ಈ ಕಾರ್ಯಕ್ರಮದಿಂದ ಸರ್ಕಾರಕ್ಕೆ ₹30.16 ಕೋಟಿ ಹೊರೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.Bengaluru Metro | ನಮ್ಮ ಮೆಟ್ರೊ ಹಳದಿ ಮಾರ್ಗ: ಮೊದಲ ದಿನ ಉತ್ತಮ ಸ್ಪಂದನೆ.ಬೆಂಗಳೂರು: ಬೀದಿ ನಾಯಿಗಳ ಹುಚ್ಚಾಟ, ಜನರಿಗೆ ಪ್ರಾಣ ಸಂಕಟ.ಆರೋಗ್ಯ ಸೇವೆ ವ್ಯತ್ಯಯವಾಗದಿರಲಿ: ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಸೂಚನೆ.ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ ಟಿಕೆಟ್ ದರ ₹2,000!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: 21ಲಕ್ಷಕ್ಕೂ ಅಧಿಕ ಮಂದಿ ವೃದ್ಧರು ಮತ್ತು ಅಂಗವಿಕಲರ ಮನೆ ಬಾಗಿಲಿಗೆ ಪಡಿತರ ಸಾಮಗ್ರಿಗಳನ್ನು ತಲುಪಿಸುವ ವಿನೂತನ ಯೋಜನೆಯನ್ನು ಜಾರಿಗೆ ತರಲು ತಮಿಳುನಾಡು ಸರ್ಕಾರ ಮುಂದಾಗಿದೆ.</p><p>ಈ ಕಾರ್ಯಕ್ರಮವನ್ನು ಇಂದು (ಮಂಗಳವಾರ) ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>'ಮುಖ್ಯಮಂತ್ರಿಗಳ ಥಾಯುಮನವರ್ ಯೋಜನೆ'ಯನ್ನು ಸ್ಟಾಲಿನ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಡಿ ಅಕ್ಕಿ ಮತ್ತು ಸಕ್ಕರೆ ಸೇರಿದಂತೆ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.</p>.'ಕೂಲಿ' ಚಿತ್ರಕ್ಕಾಗಿ ಸೂಪರ್ ಸ್ಟಾರ್ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು? .ಚುನಾವಣೆ ನಡೆಯುವ ತನಕ ಬಿಬಿಎಂಪಿ ಕಾಯ್ದೆಯೇ ಮುಂದುವರಿಯಲಿದೆ: ಅಡ್ವೊಕೇಟ್ ಜನರಲ್ . <p>70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.</p><p>ಸುಮಾರು 20.42 ಲಕ್ಷ ಹಿರಿಯ ನಾಗರಿಕರು ಮತ್ತು 1.27 ಲಕ್ಷಕ್ಕೂ ಹೆಚ್ಚು ಅಂಗವಿಕಲರು ಈ ಯೋಜನೆಯಡಿ ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.</p><p>ತಿಂಗಳ ಪ್ರತಿ ಎರಡನೇ ಶನಿವಾರ ಮತ್ತು ಭಾನುವಾರ ಫಲಾನುಭವಿಗಳಿಗೆ ಪಡಿತರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ಇದಕ್ಕೆ ಸಂಬಂಧಿತ ವಿವರಗಳನ್ನು ಈಗಾಗಲೇ ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯಿಂದ ಸ್ವೀಕರಿಸಲಾಗಿದೆ. ಈ ಕಾರ್ಯಕ್ರಮದಿಂದ ಸರ್ಕಾರಕ್ಕೆ ₹30.16 ಕೋಟಿ ಹೊರೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.Bengaluru Metro | ನಮ್ಮ ಮೆಟ್ರೊ ಹಳದಿ ಮಾರ್ಗ: ಮೊದಲ ದಿನ ಉತ್ತಮ ಸ್ಪಂದನೆ.ಬೆಂಗಳೂರು: ಬೀದಿ ನಾಯಿಗಳ ಹುಚ್ಚಾಟ, ಜನರಿಗೆ ಪ್ರಾಣ ಸಂಕಟ.ಆರೋಗ್ಯ ಸೇವೆ ವ್ಯತ್ಯಯವಾಗದಿರಲಿ: ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಸೂಚನೆ.ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ ಟಿಕೆಟ್ ದರ ₹2,000!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>