‘ಸುಪ್ರೀಂ ಕೋರ್ಟ್ ನಿರ್ದೇಶನ ಮೇರೆಗೆ ಆಮ್ಲಜನಕ ಉತ್ಪಾದಿಸಲು ವಿದ್ಯುತ್ ಪೂರೈಕೆ ಸೇರಿದಂತೆ ಅಗತ್ಯ ಇರುವ ನೆರವು ಒದಗಿಸಲಾಗುವುದು. ನಾಲ್ಕು ತಿಂಗಳು ಮಾತ್ರ ಆಮ್ಲಜನಕ ಉತ್ಪಾದನೆಗೆ ಅವಕಾಶ ದೊರೆಯಲಿದೆ. ಪರಿಸ್ಥಿತಿಯ ಆಧಾರದ ಮೇಲೆ ಈ ಅವಧಿಯನ್ನು ವಿಸ್ತರಿಸಬಹುದಾಗಿದೆ. ಆದರೆ, ತಾಮ್ರ ಉತ್ಪಾದನೆ, ಕೋ–ಜನರೇಷನ್ ಘಟಕ ಆರಂಭಿಸುವುದು ಸೇರಿದಂತೆ ಯಾವುದೇ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ. ನಾಲ್ಕು ತಿಂಗಳ ಬಳಿಕ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಲಾಗುವುದು’ ಎಂದು ಸರ್ವಪಕ್ಷಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.