<p><strong>ಚೆನ್ನೈ:</strong> ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶೀಘ್ರದಲ್ಲೇ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲಿದ್ದು, ಆಗ ಕಾಂಗ್ರೆಸ್ನ ಇಬ್ಬರು ಶಾಸಕರು ಸಚಿವರಾಗಲಿದ್ದಾರೆ.</p><p>1967ರ ನಂತರ ತಮಿಳುನಾಡಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ಗೆ ಅಧಿಕಾರ ಅನುಭವಿಸುವ ಯೋಗ ಒದಗಿಬಂದಿದೆ. </p><p>‘59 ವರ್ಷಗಳ ನಂತರ ಇಬ್ಬರು ಕಾಂಗ್ರೆಸ್ ಸಚಿವರು ತಮಿಳುನಾಡು ಸರ್ಕಾರದ ಭಾಗವಾಗಲಿದ್ದಾರೆ. ನನ್ನಂತಹ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರಿಗೆ ಇದು ಭಾವನಾತ್ಮಕ ಮತ್ತು ಮಹತ್ವದ ಕ್ಷಣವಾಗಿದೆ’ ಎಂದು ಲೋಕಸಭೆಯ ಕಾಂಗ್ರೆಸ್ನ ಉಪ ಮುಖ್ಯ ಸಚೇತಕ ಮಾಣಿಕ್ಕಂ ಟ್ಯಾಗೋರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. </p><p>‘ತಮಿಳುನಾಡು ಮೈತ್ರಿ ಸರ್ಕಾರವನ್ನು ಒಪ್ಪುವುದಿಲ್ಲ ಎಂದು ಡಿಎಂಕೆ ಬಹಿರಂಗವಾಗಿ ಘೋಷಿಸಿತ್ತು. ಆದರೆ, ಜನರು ಈಗಾಗಲೇ ಈ ಬಗ್ಗೆ ತೀರ್ಪು ನೀಡಿದ್ದಾರೆ. ಮೈತ್ರಿ ಪಕ್ಷಗಳಿಗೆ ಅಧಿಕಾರದಲ್ಲಿ ಪಾಲು ನೀಡಲಾಗುವುದು ಎಂದು ಹೇಳಿದ್ದ ವಿಜಯ್ ಅವರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ’ ಎಂದು ಟ್ಯಾಗೋರ್ ಹೇಳಿದ್ದಾರೆ.</p><p>‘ಮೇ 10ರಂದು ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗಲೇ ಕಾಂಗ್ರೆಸ್ನ ಶಾಸಕರ ಹೆಸರು ಕೊಡುವಂತೆ ಕೋರಿದ್ದರು. ಆದರೆ, ನಿಗದಿತ ಸಮಯದೊಳಗೆ ಹೆಸರನ್ನು ತಿಳಿಸದಿದ್ದರಿಂದ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಅವಕಾಶ ‘ಕೈ’ತಪ್ಪಿತು’ ಎನ್ನಲಾಗಿದೆ.</p><p>ಸಾಮಾನ್ಯ ಕ್ಷೇತ್ರದಿಂದ ಗೆದ್ದಿರುವ ದಲಿತ ನಾಯಕ ಪಿ. ವಿಶ್ವನಾಥನ್ ಮತ್ತು ಸಿಎಲ್ಪಿ ನಾಯಕ ರಾಜೇಶ್ ಕುಮಾರ್ ಅವರನ್ನು ಕಾಂಗ್ರೆಸ್ ಸಚಿವರನ್ನಾಗಿ ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. </p><p>ಒಂದು ವೇಳೆ ಟಿವಿಕೆಯು ಶಾಸಕಿಯರನ್ನು ಸಚಿವರನ್ನಾಗಿಸುವಂತೆ ಕೋರಿದರೆ, ಕಾಂಗ್ರೆಸ್ನ ಏಕೈಕ ಶಾಸಕಿ, ಕೊಲಾಚೆಲ್ ಕ್ಷೇತ್ರದ ತಾರಹೈ ಕತ್ಬರ್ಟ್ ಅವರಿಗೆ ಅವಕಾಶ ದೊರೆಯಲಿದೆ ಎನ್ನಲಾಗಿದೆ.</p><p>2006ರಲ್ಲಿ ಡಿಎಂಕೆ ಸರ್ಕಾರವು ಆಡಳಿತ ನಡೆಸಲು ಕಾಂಗ್ರೆಸ್ ಶಾಸಕರ ಮೇಲೆ ಅವಲಂಬಿತವಾಗಿದ್ದರೂ, ಮೈತ್ರಿ ಸರ್ಕಾರ ರಚಿಸುವಂತೆ ಒತ್ತಡ ಹೇರುವ ಅವಕಾಶವನ್ನು ಕಾಂಗ್ರೆಸ್ ಕೈಚೆಲ್ಲಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶೀಘ್ರದಲ್ಲೇ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲಿದ್ದು, ಆಗ ಕಾಂಗ್ರೆಸ್ನ ಇಬ್ಬರು ಶಾಸಕರು ಸಚಿವರಾಗಲಿದ್ದಾರೆ.</p><p>1967ರ ನಂತರ ತಮಿಳುನಾಡಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ಗೆ ಅಧಿಕಾರ ಅನುಭವಿಸುವ ಯೋಗ ಒದಗಿಬಂದಿದೆ. </p><p>‘59 ವರ್ಷಗಳ ನಂತರ ಇಬ್ಬರು ಕಾಂಗ್ರೆಸ್ ಸಚಿವರು ತಮಿಳುನಾಡು ಸರ್ಕಾರದ ಭಾಗವಾಗಲಿದ್ದಾರೆ. ನನ್ನಂತಹ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರಿಗೆ ಇದು ಭಾವನಾತ್ಮಕ ಮತ್ತು ಮಹತ್ವದ ಕ್ಷಣವಾಗಿದೆ’ ಎಂದು ಲೋಕಸಭೆಯ ಕಾಂಗ್ರೆಸ್ನ ಉಪ ಮುಖ್ಯ ಸಚೇತಕ ಮಾಣಿಕ್ಕಂ ಟ್ಯಾಗೋರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. </p><p>‘ತಮಿಳುನಾಡು ಮೈತ್ರಿ ಸರ್ಕಾರವನ್ನು ಒಪ್ಪುವುದಿಲ್ಲ ಎಂದು ಡಿಎಂಕೆ ಬಹಿರಂಗವಾಗಿ ಘೋಷಿಸಿತ್ತು. ಆದರೆ, ಜನರು ಈಗಾಗಲೇ ಈ ಬಗ್ಗೆ ತೀರ್ಪು ನೀಡಿದ್ದಾರೆ. ಮೈತ್ರಿ ಪಕ್ಷಗಳಿಗೆ ಅಧಿಕಾರದಲ್ಲಿ ಪಾಲು ನೀಡಲಾಗುವುದು ಎಂದು ಹೇಳಿದ್ದ ವಿಜಯ್ ಅವರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ’ ಎಂದು ಟ್ಯಾಗೋರ್ ಹೇಳಿದ್ದಾರೆ.</p><p>‘ಮೇ 10ರಂದು ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗಲೇ ಕಾಂಗ್ರೆಸ್ನ ಶಾಸಕರ ಹೆಸರು ಕೊಡುವಂತೆ ಕೋರಿದ್ದರು. ಆದರೆ, ನಿಗದಿತ ಸಮಯದೊಳಗೆ ಹೆಸರನ್ನು ತಿಳಿಸದಿದ್ದರಿಂದ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಅವಕಾಶ ‘ಕೈ’ತಪ್ಪಿತು’ ಎನ್ನಲಾಗಿದೆ.</p><p>ಸಾಮಾನ್ಯ ಕ್ಷೇತ್ರದಿಂದ ಗೆದ್ದಿರುವ ದಲಿತ ನಾಯಕ ಪಿ. ವಿಶ್ವನಾಥನ್ ಮತ್ತು ಸಿಎಲ್ಪಿ ನಾಯಕ ರಾಜೇಶ್ ಕುಮಾರ್ ಅವರನ್ನು ಕಾಂಗ್ರೆಸ್ ಸಚಿವರನ್ನಾಗಿ ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. </p><p>ಒಂದು ವೇಳೆ ಟಿವಿಕೆಯು ಶಾಸಕಿಯರನ್ನು ಸಚಿವರನ್ನಾಗಿಸುವಂತೆ ಕೋರಿದರೆ, ಕಾಂಗ್ರೆಸ್ನ ಏಕೈಕ ಶಾಸಕಿ, ಕೊಲಾಚೆಲ್ ಕ್ಷೇತ್ರದ ತಾರಹೈ ಕತ್ಬರ್ಟ್ ಅವರಿಗೆ ಅವಕಾಶ ದೊರೆಯಲಿದೆ ಎನ್ನಲಾಗಿದೆ.</p><p>2006ರಲ್ಲಿ ಡಿಎಂಕೆ ಸರ್ಕಾರವು ಆಡಳಿತ ನಡೆಸಲು ಕಾಂಗ್ರೆಸ್ ಶಾಸಕರ ಮೇಲೆ ಅವಲಂಬಿತವಾಗಿದ್ದರೂ, ಮೈತ್ರಿ ಸರ್ಕಾರ ರಚಿಸುವಂತೆ ಒತ್ತಡ ಹೇರುವ ಅವಕಾಶವನ್ನು ಕಾಂಗ್ರೆಸ್ ಕೈಚೆಲ್ಲಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>