<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಿದ ಬಳಿಕ 70 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. </p><p>ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ (ಸಿಇಒ) ಅರ್ಚನಾ ಪಟ್ನಾಯಕ್ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. </p><p>ರಾಜ್ಯದಲ್ಲಿ ಈಗ 5.67 ಕೋಟಿ ಮತದಾರರಿದ್ದಾರೆ ಎಂದು ಅವರು ತಿಳಿಸಿದ್ದಾರೆ. </p><p>ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಗೂ ಮುನ್ನ ರಾಜ್ಯದಲ್ಲಿ ಮತದಾರರ ಸಂಖ್ಯೆ 6.41 ಕೋಟಿ ಇತ್ತು. ಈಗ 18ರಿಂದ 19 ವರ್ಷ ವಯಸ್ಸಿನ 7.40 ಲಕ್ಷ ಮಂದಿಯನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಹೇಳಿದ್ದಾರೆ. </p><p>ಚುನಾವಣಾ ಹೊಸ್ತಿಲಲ್ಲಿರುವ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್ಐಆರ್ ಈಗಾಗಲೇ ವಿವಾದಕ್ಕೆ ಕಾರಣವಾಗಿದೆ. </p>.SIR: ಅರ್ಹ ವ್ಯಕ್ತಿಗಳು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು–ಸುಪ್ರೀಂ ಕೋರ್ಟ್.SIR ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಿದ ಬಳಿಕ 70 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. </p><p>ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ (ಸಿಇಒ) ಅರ್ಚನಾ ಪಟ್ನಾಯಕ್ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. </p><p>ರಾಜ್ಯದಲ್ಲಿ ಈಗ 5.67 ಕೋಟಿ ಮತದಾರರಿದ್ದಾರೆ ಎಂದು ಅವರು ತಿಳಿಸಿದ್ದಾರೆ. </p><p>ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಗೂ ಮುನ್ನ ರಾಜ್ಯದಲ್ಲಿ ಮತದಾರರ ಸಂಖ್ಯೆ 6.41 ಕೋಟಿ ಇತ್ತು. ಈಗ 18ರಿಂದ 19 ವರ್ಷ ವಯಸ್ಸಿನ 7.40 ಲಕ್ಷ ಮಂದಿಯನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಹೇಳಿದ್ದಾರೆ. </p><p>ಚುನಾವಣಾ ಹೊಸ್ತಿಲಲ್ಲಿರುವ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್ಐಆರ್ ಈಗಾಗಲೇ ವಿವಾದಕ್ಕೆ ಕಾರಣವಾಗಿದೆ. </p>.SIR: ಅರ್ಹ ವ್ಯಕ್ತಿಗಳು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು–ಸುಪ್ರೀಂ ಕೋರ್ಟ್.SIR ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>