<p><strong>ನವದೆಹಲಿ:</strong> ಕರ್ನಾಟಕದ ಗಡಿಯಲ್ಲಿ ರುವ ಬಿಳಿಗುಂಡ್ಲು ಬಳಿಯ ರಾಸಿಮನಲ್ ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಲು ತಮಿಳುನಾಡು ಸರ್ಕಾರಕ್ಕೆ ಅನುಮತಿ ನೀಡುವಂತೆ ಕೋರಿ ಅಲ್ಲಿನ ರೈತ ಸಂಘಟನೆಗಳು ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ಕ್ಕೆ ಮನವಿ ಸಲ್ಲಿಸಿವೆ.</p>.<p>ತಮಿಳುನಾಡಿನ ರೈತ ಒಕ್ಕೂಟಗಳ ಮುಖ್ಯಸ್ಥ ಪಿ.ಆರ್. ಪಾಂಡಿಯನ್ ನೇತೃತ್ವದಲ್ಲಿ ಸೋಮವಾರ ಸಂಜೆ ಆಯೋಗದ ಅಧ್ಯಕ್ಷ ಮಸೂದ್ ಹುಸೇನ್ ಅವರನ್ನು ಭೇಟಿ ಮಾಡಿದ ರೈತರು, ತಮಿಳುನಾಡಿನ ಪಾಲಿನ ಜೂನ್ ತಿಂಗಳ ಕಾವೇರಿ ನೀರನ್ನು ಹರಿಸಲು ಕ್ರಮ ಕೈಗೊಳ್ಳಬೇಕು ಎಂದೂ ಮನವಿ ಮಾಡಿದ್ದಾರೆ.</p>.<p>ಕಾವೇರಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸಲು ಮುಂದಾಗಿದೆ. ಈ ಯೋಜನೆ ಆರಂಭವಾದರೆ ತಮಿಳುನಾಡಿಗೆ ಹರಿಯುವ ನೀರಿನ ಪ್ರಮಾಣದಲ್ಲಿ ಕಡಿತ ಉಂಟಾಗಲಿದ್ದು, ತೀವ್ರ ಸಂಕಷ್ಟ ಎದುರಾಗಲಿದೆ ಎಂದು ರೈತರು ದೂರಿದ್ದಾರೆ.</p>.<p>ಕರ್ನಾಟಕಕ್ಕೆ ಅಣೆಕಟ್ಟೆ ನಿರ್ಮಿಸಲು ಅವಕಾಶ ನೀಡದೆ, ರಾಸಿಮನಲ್ ಬಳಿ ತಮಿಳುನಾಡು ರೂಪಿಸಿರುವ ಯೋಜನೆಗೆ ಅನುಮತಿ ನೀಡಬೇಕು ಎಂದು ಕೋರಿ<br />ರುವ ರೈತರು, ಒಂದೊಮ್ಮೆ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ತಮಿಳುನಾಡಿನ 25 ಲಕ್ಷ ಎಕರೆ<br />ಭೂಮಿಗೆ ನೀರಾವರಿ ಸೌಲಭ್ಯ ದೊರೆಯದೆ ರೈತರು ಸಂಕಷ್ಟಕ್ಕೆ ಈಡಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.</p>.<p>ಪ್ರಧಾನಿ ಮಧ್ಯಸ್ಥಿಕೆಗೆ ಮನವಿ: ಮೇಕೆ ದಾಟು ಯೋಜನೆಗೆ ಪರಿಸರ ಅನುಮತಿ ನೀಡಕೂಡದು ಎಂದು ಕೋರಿ ತಮಿಳು ನಾಡಿನ ಸಿ.ಎಂ ಪಳನಿಸ್ವಾಮಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.</p>.<p><strong>ಕಾವೇರಿ: ಪ್ರಾಧಿಕಾರದ ಸಭೆ ಇಂದು</strong></p>.<p>ನವದೆಹಲಿ: ಕಾವೇರಿ ನದಿ ನೀರಿನ ಹಂಚಿಕೆ ಮತ್ತು ನಿರ್ವಹಣೆ ಕುರಿತು ಚರ್ಚಿಸುವ ಉದ್ದೇಶದಿಂದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ಮಂಗಳವಾರ ಸಭೆ ಆಯೋಜಿಸಿದೆ.</p>.<p>ನಿರೀಕ್ಷಿತ ಮುಂಗಾರು ಸುರಿಯದ್ದರಿಂದ ಜಲಾಶಯಗಳು ಭರ್ತಿಯಾಗದೆ ಕರ್ನಾಟಕದಲ್ಲಿ ಆತಂಕದ ಛಾಯೆ ಆವರಿಸಿದೆ. ಆದರೆ, ಕೂಡಲೇ ಜೂನ್ ತಿಂಗಳಿನ ತನ್ನ ಪಾಲಿನ ನೀರನ್ನು ಹರಿಸುವಂತೆ ತಮಿಳುನಾಡು ಬೇಡಿಕೆ ಸಲ್ಲಿಸಿರುವುದರಿಂದ ಈ ಸಭೆಗೆ ಮಹತ್ವ ದೊರೆತಿದೆ.</p>.<p>ಉತ್ತಮ ಮುಂಗಾರು ಸುರಿದಲ್ಲಿ ಮಾತ್ರ ತಮಿಳುನಾಡಿಗೆ 9.19 ಟಿಎಂಸಿ ಅಡಿ ನೀರು ಹರಿಸಬೇಕು. ಇಲ್ಲದಿದ್ದರೆ ಮುಂದಿನ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರವು ಮೇ 28ರಂದು ಆಯೋಜಿಸಿದ್ದ ಸಭೆಯಲ್ಲಿ ರಾಜ್ಯಕ್ಕೆ ತಿಳಿಸಿತ್ತು.</p>.<p>ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ದ ಮುಖ್ಯಸ್ಥರೂ ಆಗಿರುವ ಪ್ರಾಧಿಕಾರದ ಅಧ್ಯಕ್ಷ ಎಸ್.ಮಸೂದ್ ಹುಸೇನ್ ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಸಭೆಯ ನೇತೃತ್ವ ವಹಿಸಲಿದ್ದು, ಕಾವೇರಿ ಕಣಿವೆ ವ್ಯಾಪ್ತಿಯ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಯ ಪ್ರತಿನಿಧಿಗಳು ಭಾಗವಹಿಸುವರು.</p>.<p>ಜೂನ್ 30ಕ್ಕೆ ನಿವೃತ್ತರಾಗಲಿರುವ ಮಸೂದ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅಂತಿಮ ಸಭೆ ಇದಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದ ಗಡಿಯಲ್ಲಿ ರುವ ಬಿಳಿಗುಂಡ್ಲು ಬಳಿಯ ರಾಸಿಮನಲ್ ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಲು ತಮಿಳುನಾಡು ಸರ್ಕಾರಕ್ಕೆ ಅನುಮತಿ ನೀಡುವಂತೆ ಕೋರಿ ಅಲ್ಲಿನ ರೈತ ಸಂಘಟನೆಗಳು ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ಕ್ಕೆ ಮನವಿ ಸಲ್ಲಿಸಿವೆ.</p>.<p>ತಮಿಳುನಾಡಿನ ರೈತ ಒಕ್ಕೂಟಗಳ ಮುಖ್ಯಸ್ಥ ಪಿ.ಆರ್. ಪಾಂಡಿಯನ್ ನೇತೃತ್ವದಲ್ಲಿ ಸೋಮವಾರ ಸಂಜೆ ಆಯೋಗದ ಅಧ್ಯಕ್ಷ ಮಸೂದ್ ಹುಸೇನ್ ಅವರನ್ನು ಭೇಟಿ ಮಾಡಿದ ರೈತರು, ತಮಿಳುನಾಡಿನ ಪಾಲಿನ ಜೂನ್ ತಿಂಗಳ ಕಾವೇರಿ ನೀರನ್ನು ಹರಿಸಲು ಕ್ರಮ ಕೈಗೊಳ್ಳಬೇಕು ಎಂದೂ ಮನವಿ ಮಾಡಿದ್ದಾರೆ.</p>.<p>ಕಾವೇರಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸಲು ಮುಂದಾಗಿದೆ. ಈ ಯೋಜನೆ ಆರಂಭವಾದರೆ ತಮಿಳುನಾಡಿಗೆ ಹರಿಯುವ ನೀರಿನ ಪ್ರಮಾಣದಲ್ಲಿ ಕಡಿತ ಉಂಟಾಗಲಿದ್ದು, ತೀವ್ರ ಸಂಕಷ್ಟ ಎದುರಾಗಲಿದೆ ಎಂದು ರೈತರು ದೂರಿದ್ದಾರೆ.</p>.<p>ಕರ್ನಾಟಕಕ್ಕೆ ಅಣೆಕಟ್ಟೆ ನಿರ್ಮಿಸಲು ಅವಕಾಶ ನೀಡದೆ, ರಾಸಿಮನಲ್ ಬಳಿ ತಮಿಳುನಾಡು ರೂಪಿಸಿರುವ ಯೋಜನೆಗೆ ಅನುಮತಿ ನೀಡಬೇಕು ಎಂದು ಕೋರಿ<br />ರುವ ರೈತರು, ಒಂದೊಮ್ಮೆ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ತಮಿಳುನಾಡಿನ 25 ಲಕ್ಷ ಎಕರೆ<br />ಭೂಮಿಗೆ ನೀರಾವರಿ ಸೌಲಭ್ಯ ದೊರೆಯದೆ ರೈತರು ಸಂಕಷ್ಟಕ್ಕೆ ಈಡಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.</p>.<p>ಪ್ರಧಾನಿ ಮಧ್ಯಸ್ಥಿಕೆಗೆ ಮನವಿ: ಮೇಕೆ ದಾಟು ಯೋಜನೆಗೆ ಪರಿಸರ ಅನುಮತಿ ನೀಡಕೂಡದು ಎಂದು ಕೋರಿ ತಮಿಳು ನಾಡಿನ ಸಿ.ಎಂ ಪಳನಿಸ್ವಾಮಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.</p>.<p><strong>ಕಾವೇರಿ: ಪ್ರಾಧಿಕಾರದ ಸಭೆ ಇಂದು</strong></p>.<p>ನವದೆಹಲಿ: ಕಾವೇರಿ ನದಿ ನೀರಿನ ಹಂಚಿಕೆ ಮತ್ತು ನಿರ್ವಹಣೆ ಕುರಿತು ಚರ್ಚಿಸುವ ಉದ್ದೇಶದಿಂದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ಮಂಗಳವಾರ ಸಭೆ ಆಯೋಜಿಸಿದೆ.</p>.<p>ನಿರೀಕ್ಷಿತ ಮುಂಗಾರು ಸುರಿಯದ್ದರಿಂದ ಜಲಾಶಯಗಳು ಭರ್ತಿಯಾಗದೆ ಕರ್ನಾಟಕದಲ್ಲಿ ಆತಂಕದ ಛಾಯೆ ಆವರಿಸಿದೆ. ಆದರೆ, ಕೂಡಲೇ ಜೂನ್ ತಿಂಗಳಿನ ತನ್ನ ಪಾಲಿನ ನೀರನ್ನು ಹರಿಸುವಂತೆ ತಮಿಳುನಾಡು ಬೇಡಿಕೆ ಸಲ್ಲಿಸಿರುವುದರಿಂದ ಈ ಸಭೆಗೆ ಮಹತ್ವ ದೊರೆತಿದೆ.</p>.<p>ಉತ್ತಮ ಮುಂಗಾರು ಸುರಿದಲ್ಲಿ ಮಾತ್ರ ತಮಿಳುನಾಡಿಗೆ 9.19 ಟಿಎಂಸಿ ಅಡಿ ನೀರು ಹರಿಸಬೇಕು. ಇಲ್ಲದಿದ್ದರೆ ಮುಂದಿನ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರವು ಮೇ 28ರಂದು ಆಯೋಜಿಸಿದ್ದ ಸಭೆಯಲ್ಲಿ ರಾಜ್ಯಕ್ಕೆ ತಿಳಿಸಿತ್ತು.</p>.<p>ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ದ ಮುಖ್ಯಸ್ಥರೂ ಆಗಿರುವ ಪ್ರಾಧಿಕಾರದ ಅಧ್ಯಕ್ಷ ಎಸ್.ಮಸೂದ್ ಹುಸೇನ್ ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಸಭೆಯ ನೇತೃತ್ವ ವಹಿಸಲಿದ್ದು, ಕಾವೇರಿ ಕಣಿವೆ ವ್ಯಾಪ್ತಿಯ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಯ ಪ್ರತಿನಿಧಿಗಳು ಭಾಗವಹಿಸುವರು.</p>.<p>ಜೂನ್ 30ಕ್ಕೆ ನಿವೃತ್ತರಾಗಲಿರುವ ಮಸೂದ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅಂತಿಮ ಸಭೆ ಇದಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>