<p><strong>ನವದೆಹಲಿ</strong>: ಕೇಂದ್ರ ಸಚಿವ ಎಲ್.ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ‘ಪರಾಶಕ್ತಿ’ ಚಿತ್ರದ ನಟರಾದ ಶಿವಕಾರ್ತಿಕೇಯನ್, ರವಿ ಮೋಹನ್(ಜಯಂ ರವಿ) ಅವರು ಪಾಲ್ಗೊಂಡಿರುವುದು ಚುನಾವಣೆ ಸಮೀಪಿಸುತ್ತಿರುವ ತಮಿಳುನಾಡಿನಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.</p><p>ಇತ್ತೀಚೆಗೆ ಬಿಡುಗಡೆಯಾದ ‘ಪರಾಶಕ್ತಿ’ ಚಿತ್ರಕ್ಕೆ ತಮಿಳುನಾಡಿನಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ದೆಹಲಿಯ ತಮ್ಮ ನಿವಾಸದಲ್ಲಿ ನಡೆಯಲಿರುವ ಪೊಂಗಲ್ ಆಚರಣೆಯಲ್ಲಿ ಭಾಗವಹಿಸುವಂತೆ ‘ಪರಾಶಕ್ತಿ’ ಚಿತ್ರತಂಡಕ್ಕೆ ಮುರುಗನ್ ಅವರು ಆಹ್ವಾನ ನೀಡಿದ್ದರು.</p><p>ನಟರಾದ ಶಿವಕಾರ್ತಿಕೇಯನ್, ರವಿ ಮೋಹನ್(ಜಯಂ ರವಿ), ಸಂಗೀತ ಸಂಯೋಜಕ ಜಿ.ವಿ. ಪ್ರಕಾಶ್ ಕುಮಾರ್ ಸೇರಿದಂತೆ ಚಿತ್ರತಂಡದ ಹಲವರನ್ನು ಮೋದಿ ಅವರು ಭೇಟಿಯಾಗಿದ್ದಾರೆ.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕಾರ್ತಿಕೇಯನ್, ‘ಪ್ರಧಾನಿ ಅವರನ್ನು ಭೇಟಿಯಾಗಿರುವುದು ಗೌರವ ಮತ್ತು ಸಂತಸ ನೀಡಿದೆ ಎಂದು ಹೇಳಿದ್ದಾರೆ. ‘ದೆಹಲಿಯಲ್ಲಿ ಪೊಂಗಲ್ ಆಚರಿಸಿರುವುದು ಏಕತೆಯ ಸಂದೇಶವನ್ನು ಸಾರಿದೆ’ ಎಂದಿದ್ದಾರೆ.</p><p>ರವಿ ಮೋಹನ್ ಮಾತನಾಡಿ, ಪ್ರಧಾನಿ ಅವರು ನಗು ಮುಖದಿಂದ ನಮ್ಮನ್ನು ಸ್ವಾಗತಿಸಿದರು. ಇಲ್ಲಿ ಬಂದು ಹಬ್ಬ ಆಚರಿಸಿರುವುದು ಸಂತೋಷ ತಂದಿದೆ’ ಎಂದು ಹೇಳಿದ್ದಾರೆ.</p><p>‘ಇಂದು ದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್. ಮುರುಗನ್ ಅವರು ನನ್ನ ಸಂಯೋಜನೆಯ ‘ತಿರುವಾಸಗಂ’ ಹಾಡನ್ನು ಕೇಳಿದರು’ ಎಂದು ಜಿ.ವಿ. ಪ್ರಕಾಶ್ ಕುಮಾರ್ ಎಕ್ಸ್ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.</p>.<p>'ಪರಾಶಕ್ತಿ' ಚಿತ್ರವು 1960ರ ದಶಕದಲ್ಲಿ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ನಡೆದ ಪ್ರತಿಭಟನೆಗಳ ಕುರಿತ ಕಥಾಹಂದರವನ್ನು ಹೊಂದಿದೆ. ಚಿತ್ರದಲ್ಲಿ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರನ್ನು ಅವಮಾನಿಸಲಾಗಿದೆ ಎಂದು ತಮಿಳುನಾಡು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು.</p><p> ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ಕೂಡ ಚಿತ್ರದ ಭಾಗವಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸಚಿವ ಎಲ್.ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ‘ಪರಾಶಕ್ತಿ’ ಚಿತ್ರದ ನಟರಾದ ಶಿವಕಾರ್ತಿಕೇಯನ್, ರವಿ ಮೋಹನ್(ಜಯಂ ರವಿ) ಅವರು ಪಾಲ್ಗೊಂಡಿರುವುದು ಚುನಾವಣೆ ಸಮೀಪಿಸುತ್ತಿರುವ ತಮಿಳುನಾಡಿನಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.</p><p>ಇತ್ತೀಚೆಗೆ ಬಿಡುಗಡೆಯಾದ ‘ಪರಾಶಕ್ತಿ’ ಚಿತ್ರಕ್ಕೆ ತಮಿಳುನಾಡಿನಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ದೆಹಲಿಯ ತಮ್ಮ ನಿವಾಸದಲ್ಲಿ ನಡೆಯಲಿರುವ ಪೊಂಗಲ್ ಆಚರಣೆಯಲ್ಲಿ ಭಾಗವಹಿಸುವಂತೆ ‘ಪರಾಶಕ್ತಿ’ ಚಿತ್ರತಂಡಕ್ಕೆ ಮುರುಗನ್ ಅವರು ಆಹ್ವಾನ ನೀಡಿದ್ದರು.</p><p>ನಟರಾದ ಶಿವಕಾರ್ತಿಕೇಯನ್, ರವಿ ಮೋಹನ್(ಜಯಂ ರವಿ), ಸಂಗೀತ ಸಂಯೋಜಕ ಜಿ.ವಿ. ಪ್ರಕಾಶ್ ಕುಮಾರ್ ಸೇರಿದಂತೆ ಚಿತ್ರತಂಡದ ಹಲವರನ್ನು ಮೋದಿ ಅವರು ಭೇಟಿಯಾಗಿದ್ದಾರೆ.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕಾರ್ತಿಕೇಯನ್, ‘ಪ್ರಧಾನಿ ಅವರನ್ನು ಭೇಟಿಯಾಗಿರುವುದು ಗೌರವ ಮತ್ತು ಸಂತಸ ನೀಡಿದೆ ಎಂದು ಹೇಳಿದ್ದಾರೆ. ‘ದೆಹಲಿಯಲ್ಲಿ ಪೊಂಗಲ್ ಆಚರಿಸಿರುವುದು ಏಕತೆಯ ಸಂದೇಶವನ್ನು ಸಾರಿದೆ’ ಎಂದಿದ್ದಾರೆ.</p><p>ರವಿ ಮೋಹನ್ ಮಾತನಾಡಿ, ಪ್ರಧಾನಿ ಅವರು ನಗು ಮುಖದಿಂದ ನಮ್ಮನ್ನು ಸ್ವಾಗತಿಸಿದರು. ಇಲ್ಲಿ ಬಂದು ಹಬ್ಬ ಆಚರಿಸಿರುವುದು ಸಂತೋಷ ತಂದಿದೆ’ ಎಂದು ಹೇಳಿದ್ದಾರೆ.</p><p>‘ಇಂದು ದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್. ಮುರುಗನ್ ಅವರು ನನ್ನ ಸಂಯೋಜನೆಯ ‘ತಿರುವಾಸಗಂ’ ಹಾಡನ್ನು ಕೇಳಿದರು’ ಎಂದು ಜಿ.ವಿ. ಪ್ರಕಾಶ್ ಕುಮಾರ್ ಎಕ್ಸ್ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.</p>.<p>'ಪರಾಶಕ್ತಿ' ಚಿತ್ರವು 1960ರ ದಶಕದಲ್ಲಿ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ನಡೆದ ಪ್ರತಿಭಟನೆಗಳ ಕುರಿತ ಕಥಾಹಂದರವನ್ನು ಹೊಂದಿದೆ. ಚಿತ್ರದಲ್ಲಿ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರನ್ನು ಅವಮಾನಿಸಲಾಗಿದೆ ಎಂದು ತಮಿಳುನಾಡು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು.</p><p> ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ಕೂಡ ಚಿತ್ರದ ಭಾಗವಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>