<p><strong>ನವದೆಹಲಿ</strong>: ‘ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 90ರಿಂದ 100 ಸ್ಥಾನಗಳನ್ನು ಗೆಲ್ಲಲಿದೆ ಎಂದು ನಾವು ಹೇಳಿದಾಗ, ನಮ್ಮನ್ನು ನೋಡಿ ಎಲ್ಲರೂ ನಗುತ್ತಿದ್ದರು’ ಎಂದು ‘ಆಕ್ಸಿಸ್ ಮೈ ಇಂಡಿಯಾ’ದ ಮುಖ್ಯಸ್ಥ ಪ್ರದೀಪ್ ಗುಪ್ತಾ ಹೇಳಿದ್ದಾರೆ.</p><p>ಮತದಾನೋತ್ತರ ಸಮೀಕ್ಷೆ ಪ್ರಕಟಿಸಿದ್ದ ‘ಆಕ್ಸಿಸ್ ಮೈ ಇಂಡಿಯಾ’, ಟಿವಿಕೆ 90ರಿಂದ 100 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿತ್ತು.</p><p>ತಮಿಳುನಾಡಿನಲ್ಲಿ ವಿಜಯ್ ಪಕ್ಷವು ಮುನ್ನಡೆ ಕಾಯ್ದುಕೊಂಡಿರುವ ಬಗ್ಗೆ ಸುದ್ದಿಸಂಸ್ಥೆ ಎನ್ಡಿಟಿವಿ ಜತೆ ಮಾತನಾಡಿದ ಗುಪ್ತಾ, ‘ಇದು ನಮ್ಮ ಸಮೀಕ್ಷೆಗೆ ಸಿಕ್ಕ ಜಯ’ ಎಂದು ಹೇಳಿದ್ದಾರೆ.</p>.<p>‘ಇತರ ಸಂಸ್ಥೆಗಳು ಏಕೆ ಭವಿಷ್ಯ ನುಡಿಯಲು ಸಾಧ್ಯವಾಗಲಿಲ್ಲ ಎಂಬುದು ನಿಮಗೆ ಈಗ ತಿಳಿಯುತ್ತದೆ. ಏಕೆಂದರೆ ನಾವು ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತೇವೆ’ ಎಂದು ಹೇಳಿದ್ದಾರೆ.</p><p>‘ದೇಶದಾದ್ಯಂತ ಯಾರೂ ಇದನ್ನು ನಂಬುತ್ತಿರಲಿಲ್ಲ. ನಾವು ತಮಿಳುನಾಡು ಫಲಿತಾಂಶ ಮತ್ತು ಅದರಲ್ಲೂ ವಿಶೇಷವಾಗಿ ವಿಜಯ್ ಅವರ ವಿಜಯವನ್ನು ಈ ರೀತಿ ಭವಿಷ್ಯ ನುಡಿದಾಗ, ರಾಜಕೀಯ ಪಂಡಿತರು, ಇತರ ಮತದಾನ ಸಂಸ್ಥೆಗಳು ನಮ್ಮನ್ನು ನೋಡಿ ನಗುತ್ತಿದ್ದರು’ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 90ರಿಂದ 100 ಸ್ಥಾನಗಳನ್ನು ಗೆಲ್ಲಲಿದೆ ಎಂದು ನಾವು ಹೇಳಿದಾಗ, ನಮ್ಮನ್ನು ನೋಡಿ ಎಲ್ಲರೂ ನಗುತ್ತಿದ್ದರು’ ಎಂದು ‘ಆಕ್ಸಿಸ್ ಮೈ ಇಂಡಿಯಾ’ದ ಮುಖ್ಯಸ್ಥ ಪ್ರದೀಪ್ ಗುಪ್ತಾ ಹೇಳಿದ್ದಾರೆ.</p><p>ಮತದಾನೋತ್ತರ ಸಮೀಕ್ಷೆ ಪ್ರಕಟಿಸಿದ್ದ ‘ಆಕ್ಸಿಸ್ ಮೈ ಇಂಡಿಯಾ’, ಟಿವಿಕೆ 90ರಿಂದ 100 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿತ್ತು.</p><p>ತಮಿಳುನಾಡಿನಲ್ಲಿ ವಿಜಯ್ ಪಕ್ಷವು ಮುನ್ನಡೆ ಕಾಯ್ದುಕೊಂಡಿರುವ ಬಗ್ಗೆ ಸುದ್ದಿಸಂಸ್ಥೆ ಎನ್ಡಿಟಿವಿ ಜತೆ ಮಾತನಾಡಿದ ಗುಪ್ತಾ, ‘ಇದು ನಮ್ಮ ಸಮೀಕ್ಷೆಗೆ ಸಿಕ್ಕ ಜಯ’ ಎಂದು ಹೇಳಿದ್ದಾರೆ.</p>.<p>‘ಇತರ ಸಂಸ್ಥೆಗಳು ಏಕೆ ಭವಿಷ್ಯ ನುಡಿಯಲು ಸಾಧ್ಯವಾಗಲಿಲ್ಲ ಎಂಬುದು ನಿಮಗೆ ಈಗ ತಿಳಿಯುತ್ತದೆ. ಏಕೆಂದರೆ ನಾವು ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತೇವೆ’ ಎಂದು ಹೇಳಿದ್ದಾರೆ.</p><p>‘ದೇಶದಾದ್ಯಂತ ಯಾರೂ ಇದನ್ನು ನಂಬುತ್ತಿರಲಿಲ್ಲ. ನಾವು ತಮಿಳುನಾಡು ಫಲಿತಾಂಶ ಮತ್ತು ಅದರಲ್ಲೂ ವಿಶೇಷವಾಗಿ ವಿಜಯ್ ಅವರ ವಿಜಯವನ್ನು ಈ ರೀತಿ ಭವಿಷ್ಯ ನುಡಿದಾಗ, ರಾಜಕೀಯ ಪಂಡಿತರು, ಇತರ ಮತದಾನ ಸಂಸ್ಥೆಗಳು ನಮ್ಮನ್ನು ನೋಡಿ ನಗುತ್ತಿದ್ದರು’ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>