<p><strong>ಸೇಲಂ:</strong> ತೂತ್ತುಕುಡಿ ಜಿಲ್ಲೆ ಶಾಂತನ್ಕುಲಂನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಂದೆ, ಮಗ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಭಾನುವಾರ ಇಲ್ಲಿ ಹೇಳಿದರು.</p>.<p>ತನಿಖೆಯನ್ನು ಸಿಬಿಐಗೆ ವಹಿಸುವ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ಗೆ ತಿಳಿಸಿ, ಪ್ರಕರಣವನ್ನು ಸಿಬಿಐಗೆ ವಹಿಸುವ ಸಂಬಂಧ ಅನುಮೋದನೆ ಪಡೆಯಲಾಗುವುದು ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ಮೊಬೈಲ್ ಫೋನ್ ಮಾರಾಟದ ಅಂಗಡಿ ನಡೆಸುತ್ತಿದ್ದ ಪಿ.ಜಯರಾಜ್, ಮಗ ಫೆನಿಕ್ಸ್ ಅವರು ಲಾಕ್ಡೌನ್ ನಿಯಮ ಉಲ್ಲಂಘಿಸಿ, ನಿಗದಿತ ಅವಧಿ ಮೀರಿ ವ್ಯಾಪಾರ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದರು.</p>.<p>ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಅವರಿಗೆ ಗಂಭೀರವಾದ ಗಾಯಗಳಾಗಿದ್ದವು. ಹೀಗಾಗಿ ಕೋವಿಲ್ಪಟ್ಟಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಜೂನ್ 23ರಂದು ಮೃತಪಟ್ಟರು. ಪೊಲೀಸರು ನೀಡಿದ ಚಿತ್ರಹಿಂಸೆಯಿಂದಾಗಿ ತಂದೆ, ಮಗ ಮೃತಪಟ್ಟಿದ್ದಾರೆ ಎಂದು ಅವರ ಬಂಧುಗಳು ಆರೋಪಿಸಿದ್ದಾರೆ. ಈ ಘಟನೆ ಬಗ್ಗೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಲಂ:</strong> ತೂತ್ತುಕುಡಿ ಜಿಲ್ಲೆ ಶಾಂತನ್ಕುಲಂನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಂದೆ, ಮಗ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಭಾನುವಾರ ಇಲ್ಲಿ ಹೇಳಿದರು.</p>.<p>ತನಿಖೆಯನ್ನು ಸಿಬಿಐಗೆ ವಹಿಸುವ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ಗೆ ತಿಳಿಸಿ, ಪ್ರಕರಣವನ್ನು ಸಿಬಿಐಗೆ ವಹಿಸುವ ಸಂಬಂಧ ಅನುಮೋದನೆ ಪಡೆಯಲಾಗುವುದು ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ಮೊಬೈಲ್ ಫೋನ್ ಮಾರಾಟದ ಅಂಗಡಿ ನಡೆಸುತ್ತಿದ್ದ ಪಿ.ಜಯರಾಜ್, ಮಗ ಫೆನಿಕ್ಸ್ ಅವರು ಲಾಕ್ಡೌನ್ ನಿಯಮ ಉಲ್ಲಂಘಿಸಿ, ನಿಗದಿತ ಅವಧಿ ಮೀರಿ ವ್ಯಾಪಾರ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದರು.</p>.<p>ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಅವರಿಗೆ ಗಂಭೀರವಾದ ಗಾಯಗಳಾಗಿದ್ದವು. ಹೀಗಾಗಿ ಕೋವಿಲ್ಪಟ್ಟಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಜೂನ್ 23ರಂದು ಮೃತಪಟ್ಟರು. ಪೊಲೀಸರು ನೀಡಿದ ಚಿತ್ರಹಿಂಸೆಯಿಂದಾಗಿ ತಂದೆ, ಮಗ ಮೃತಪಟ್ಟಿದ್ದಾರೆ ಎಂದು ಅವರ ಬಂಧುಗಳು ಆರೋಪಿಸಿದ್ದಾರೆ. ಈ ಘಟನೆ ಬಗ್ಗೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>