ಡೆಹ್ರಾಡೂನ್ : ಭಾರಿ ಮಳೆಯಿಂದಾಗಿ ಉತ್ತರಾಖಂಡದ ಡೆಹ್ರಾಡೂನ್ನಲ್ಲಿರುವ ಪ್ರಸಿದ್ಧ ತಪಕೇಶ್ವರ ಮಹಾದೇವ ದೇವಸ್ಥಾನದ ಒಂದು ಭಾಗದಲ್ಲಿನ ಗೋಡೆಗಳು ಕುಸಿದು ಬಿದ್ದಿದೆ.
ಶ್ರಾವಣ ಮಾಸದ ಸೋಮವಾರವಾದ ಇಂದು ಬೆಳಿಗ್ಗೆ ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ದೇವಾಲಯದ ಮುಂಭಾಗದಲ್ಲಿ ಗೋಡೆ ಕುಸಿದ ಪರಿಣಾಮ ಒಳಹೋಗಲು ಸಾಧ್ಯವಾಗಲಿಲ್ಲ.
ಕಳೆದ ಕೆಲವು ದಿನಗಳಿಂದ ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ನದಿ, ಅಣೆಕಟ್ಟುಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸ್ಥಿತಿ ತಲೆದೂರಿದೆ. ಪರಿಣಾಮ ಅನೇಕ ಅವಘಡಗಳೂ ಸಂಭವಿಸಿವೆ.