<p><strong>ನವದೆಹಲಿ</strong>: ಮುಂದಿನ 15 ವರ್ಷಗಳಲ್ಲಿ ಭಾರತವು 119 ಉಪಗ್ರಹಗಳನ್ನು ಉಡಾವಣೆ ಮಾಡುವ ಯೋಜನೆ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಶನಿವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>ಈ ಯೋಜನೆಯು ಭೂಮಿಗೆ ಸಂಬಂಧಿಸಿದ 80 ಉಪಗ್ರಹಗಳು, ಸಾಗರ ಮತ್ತು ಪರಿಸರಕ್ಕೆ ಸಂಬಂಧಿಸಿದ 23 ಉಪಗ್ರಹಗಳು, ತಂತ್ರಜ್ಞಾನಕ್ಕೆ ಸಂಬಂಧಿಸಿದ 16 ಉಪಗ್ರಹಗಳ ಉಡಾವಣೆ ಉದ್ದೇಶವನ್ನು ಒಳಗೊಂಡಿದೆ. ಭೂಮಿಯಲ್ಲಿನ ಹವಾಗುಣ ಅಧ್ಯಯನಕ್ಕೆ ಸಂಬಂಧಿಸಿದಂತೆ ಉಪಗ್ರಹಗಳಿಗೆ ಯೋಜನೆಯಡಿ ಆದ್ಯತೆ ನೀಡಲಾಗಿದೆ. </p><p>ಮುಂದಿನ ಎರಡು ದಶಕಗಳಲ್ಲಿ ಮಂಗಳ ಗ್ರಹದ ಮೇಲೆ ಇಳಿಯುವುದೂ ಸೇರಿ 2040ರ ವೇಳೆಗೆ ಭಾರತೀಯರು ಚಂದ್ರನ ಮೇಲೆ ಕಾಲಿಡುವ ಮೊದಲೇ ಕನಿಷ್ಠ 5 ಮಾನವ ರಹಿತ ಚಂದ್ರಯಾನ ಯೋಜನೆ ಹಮ್ಮಿಕೊಳ್ಳುವ ಯೋಜನೆಯೂ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 2028ರ ಮಾರ್ಚ್ನಲ್ಲಿ ‘ಶುಕ್ರಯಾನ’ ಯೋಜನೆ ಹಮ್ಮಿಕೊಳ್ಳುವ ಗುರಿಯನ್ನು ಭಾರತ ಹೊಂದಿದೆ. </p><p>ದೇಶದ ‘ಗಗನಯಾನ ಕಾರ್ಯಕ್ರಮ’ಕ್ಕೆ ಆಯ್ಕೆಯಾಗಿರುವ ನಾಲ್ವರು ಗಗನಯಾನಿಗಳು ಭಾರತದ ಬಾಹ್ಯಾಕಾಶ ಯಾತ್ರೆಯ ಭವಿಷ್ಯವನ್ನು ಪ್ರತಿಬಿಂಬಿಸುತ್ತಾರೆ’ ಎಂದು ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಅಭಿಪ್ರಾಯಪಟ್ಟರು. </p><p>ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಆಧುನಿಕ ಬಾಹ್ಯಾಕಾಶ ವಿಜ್ಞಾನವು ಭಾರತ ಪ್ರಾಚೀನ ನಾಗರಿಕತೆಯ ಜ್ಞಾನವನ್ನು ಎದುರು ನೋಡುತ್ತಿತ್ತು. ನಾವು ಹಿಂದೆಯೇ ಖಗೋಳ ಕ್ಷೇತ್ರದಲ್ಲಿ ಮುಂದೆ ಇದ್ದೆವು. ಇಡೀ ಪ್ರಪಂಚವೇ ನಮ್ಮನ್ನು ಹಿಂಬಾಲಿಸುತ್ತಿತ್ತು. ಈಗ ಮತ್ತೆ ನಾವು ಈ ಕ್ಷೇತ್ರದಲ್ಲಿ ಮುಂದೆ ಬರುತ್ತಿದ್ದೇವೆ’ ಎಂದು ಅವರು ಹೇಳಿದರು. </p><p>‘ಬಾಹ್ಯಾಕಾಶ ಸಂಶೋಧನೆಗಳು ಭೂಮಿಯ ಮೇಲಿನ ಜೀವನದೊಂದಿಗೆ ಸಂಪರ್ಕ ಹೊಂದಿರಬೇಕು’ ಎಂದು ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್ ಹೇಳಿದರು. </p><p>‘ಕಕ್ಷೆಯಿಂದ ಭೂಮಿಯನ್ನು ನೋಡಿದಾಗ ಅದು ಹೊಸ ದೃಷ್ಟಿಕೋನವನ್ನು ನೀಡಿತು’ ಎಂದು ಗಗನಯಾನಿ ಶುಭಾಂಶು ಶುಕ್ಲಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂದಿನ 15 ವರ್ಷಗಳಲ್ಲಿ ಭಾರತವು 119 ಉಪಗ್ರಹಗಳನ್ನು ಉಡಾವಣೆ ಮಾಡುವ ಯೋಜನೆ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಶನಿವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>ಈ ಯೋಜನೆಯು ಭೂಮಿಗೆ ಸಂಬಂಧಿಸಿದ 80 ಉಪಗ್ರಹಗಳು, ಸಾಗರ ಮತ್ತು ಪರಿಸರಕ್ಕೆ ಸಂಬಂಧಿಸಿದ 23 ಉಪಗ್ರಹಗಳು, ತಂತ್ರಜ್ಞಾನಕ್ಕೆ ಸಂಬಂಧಿಸಿದ 16 ಉಪಗ್ರಹಗಳ ಉಡಾವಣೆ ಉದ್ದೇಶವನ್ನು ಒಳಗೊಂಡಿದೆ. ಭೂಮಿಯಲ್ಲಿನ ಹವಾಗುಣ ಅಧ್ಯಯನಕ್ಕೆ ಸಂಬಂಧಿಸಿದಂತೆ ಉಪಗ್ರಹಗಳಿಗೆ ಯೋಜನೆಯಡಿ ಆದ್ಯತೆ ನೀಡಲಾಗಿದೆ. </p><p>ಮುಂದಿನ ಎರಡು ದಶಕಗಳಲ್ಲಿ ಮಂಗಳ ಗ್ರಹದ ಮೇಲೆ ಇಳಿಯುವುದೂ ಸೇರಿ 2040ರ ವೇಳೆಗೆ ಭಾರತೀಯರು ಚಂದ್ರನ ಮೇಲೆ ಕಾಲಿಡುವ ಮೊದಲೇ ಕನಿಷ್ಠ 5 ಮಾನವ ರಹಿತ ಚಂದ್ರಯಾನ ಯೋಜನೆ ಹಮ್ಮಿಕೊಳ್ಳುವ ಯೋಜನೆಯೂ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 2028ರ ಮಾರ್ಚ್ನಲ್ಲಿ ‘ಶುಕ್ರಯಾನ’ ಯೋಜನೆ ಹಮ್ಮಿಕೊಳ್ಳುವ ಗುರಿಯನ್ನು ಭಾರತ ಹೊಂದಿದೆ. </p><p>ದೇಶದ ‘ಗಗನಯಾನ ಕಾರ್ಯಕ್ರಮ’ಕ್ಕೆ ಆಯ್ಕೆಯಾಗಿರುವ ನಾಲ್ವರು ಗಗನಯಾನಿಗಳು ಭಾರತದ ಬಾಹ್ಯಾಕಾಶ ಯಾತ್ರೆಯ ಭವಿಷ್ಯವನ್ನು ಪ್ರತಿಬಿಂಬಿಸುತ್ತಾರೆ’ ಎಂದು ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಅಭಿಪ್ರಾಯಪಟ್ಟರು. </p><p>ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಆಧುನಿಕ ಬಾಹ್ಯಾಕಾಶ ವಿಜ್ಞಾನವು ಭಾರತ ಪ್ರಾಚೀನ ನಾಗರಿಕತೆಯ ಜ್ಞಾನವನ್ನು ಎದುರು ನೋಡುತ್ತಿತ್ತು. ನಾವು ಹಿಂದೆಯೇ ಖಗೋಳ ಕ್ಷೇತ್ರದಲ್ಲಿ ಮುಂದೆ ಇದ್ದೆವು. ಇಡೀ ಪ್ರಪಂಚವೇ ನಮ್ಮನ್ನು ಹಿಂಬಾಲಿಸುತ್ತಿತ್ತು. ಈಗ ಮತ್ತೆ ನಾವು ಈ ಕ್ಷೇತ್ರದಲ್ಲಿ ಮುಂದೆ ಬರುತ್ತಿದ್ದೇವೆ’ ಎಂದು ಅವರು ಹೇಳಿದರು. </p><p>‘ಬಾಹ್ಯಾಕಾಶ ಸಂಶೋಧನೆಗಳು ಭೂಮಿಯ ಮೇಲಿನ ಜೀವನದೊಂದಿಗೆ ಸಂಪರ್ಕ ಹೊಂದಿರಬೇಕು’ ಎಂದು ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್ ಹೇಳಿದರು. </p><p>‘ಕಕ್ಷೆಯಿಂದ ಭೂಮಿಯನ್ನು ನೋಡಿದಾಗ ಅದು ಹೊಸ ದೃಷ್ಟಿಕೋನವನ್ನು ನೀಡಿತು’ ಎಂದು ಗಗನಯಾನಿ ಶುಭಾಂಶು ಶುಕ್ಲಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>