‘ಪ್ಯಾಲೆಸ್ಟೀನಿಯನ್ನರ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆ ಬಾಂಗ್ಲಾದೇಶಿಗರು ಆತಂಕಿತರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕೆಲವರು ಪ್ಯಾಲೆಸ್ಟೀನ್ಗೆ ತೆರಳಲೂ ಬಯಸಿದ್ದಾರೆ ಎಂದು ಕೇಳ್ಪಟ್ಟೆ. ವೈಯಕ್ತಿಕವಾಗಿ ಜಗತ್ತಿನಲ್ಲಿ ನಡೆಯುವ ಎಲ್ಲಾ ರೀತಿಯ ದೌರ್ಜನ್ಯವನ್ನು ನಾನು ಖಂಡಿಸುತ್ತೇನೆ. ಆದರೆ ಪ್ಯಾಲೆಸ್ಟೀನಿಯನ್ನರ ಬಗ್ಗೆ ಮರುಕ ಪಡುತ್ತಿರುವವರು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಾಗುತ್ತಿರುವ ಆಕ್ರಮಣದ ಬಗ್ಗೆಯೂ ಚಿಂತಿಸಬೇಕು’ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.