ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮ್ಮ ದೇಶದ ಅಲ್ಪಸಂಖ್ಯಾತರ ಬಗ್ಗೆಯೂ ಮರುಕ ಪಡುಬೇಕಲ್ಲವೇ?: ತಸ್ಲೀಮಾ ನಸ್ರೀನ್

Published 15 ಅಕ್ಟೋಬರ್ 2023, 12:46 IST
Last Updated 15 ಅಕ್ಟೋಬರ್ 2023, 12:46 IST
ಅಕ್ಷರ ಗಾತ್ರ

ಕೋಲ್ಕತ್ತ: ಪ್ಯಾಲೆಸ್ಟೀನಿಯನ್ನರ ವಿರುದ್ಧದ ದೌರ್ಜನ್ಯದ ಬಗ್ಗೆ ಮರುಕ ಪಡುವವರು ತಮ್ಮದೇ ದೇಶದಲ್ಲಿ ಅಲ್ಪಸಂಖ್ಯಾತರ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆಯೂ ಮರುಕಪಡಬೇಕು ಎಂದು ಲೇಖಕಿ ತಸ್ಲೀಮಾ ನಸ್ರೀನ್ ಹೇಳಿದ್ದಾರೆ.

‘ಪ್ಯಾಲೆಸ್ಟೀನಿಯನ್ನರ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆ ಬಾಂಗ್ಲಾದೇಶಿಗರು ಆತಂಕಿತರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕೆಲವರು ಪ್ಯಾಲೆಸ್ಟೀನ್‌ಗೆ ತೆರಳಲೂ ಬಯಸಿದ್ದಾರೆ ಎಂದು ಕೇಳ್ಪಟ್ಟೆ. ವೈಯಕ್ತಿಕವಾಗಿ ಜಗತ್ತಿನಲ್ಲಿ ನಡೆಯುವ ಎಲ್ಲಾ ರೀತಿಯ ದೌರ್ಜನ್ಯವನ್ನು ನಾನು ಖಂಡಿಸುತ್ತೇನೆ. ಆದರೆ ಪ್ಯಾಲೆಸ್ಟೀನಿಯನ್ನರ ಬಗ್ಗೆ ಮರುಕ ಪಡುತ್ತಿರುವವರು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಾಗುತ್ತಿರುವ ಆಕ್ರಮಣದ ಬಗ್ಗೆಯೂ ಚಿಂತಿಸಬೇಕು’ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

‘ಬಾಂಗ್ಲಾದೇಶವು ಆರ್ಥಿಕ ಬೆಳವಣಿಗೆಯ ಹಾದಿಯಲ್ಲಿ ಸಾಗುತ್ತಿದ್ದರೂ ಮೂಲಭೂತವಾದ ಹೆಚ್ಚುತ್ತಿದೆ. ಲಿಂಗ ಅಸಮಾನತೆ ಪ್ರಮುಖ ಸಮಸ್ಯೆಯಾಗಿ ಮುಂದುವರಿದಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT