<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಭಾರಿ ಮಳೆಯಾದ ಪರಿಣಾಮ ತವಿ ನದಿಯ ನೀರಿನ ಮಟ್ಟದಲ್ಲಿ ಏಕಾಏಕಿ ಏರಿಕೆಯಾಗಿದ್ದು, ನದಿಯ ಬಳಿ ಸಿಲುಕಿದ್ದ 9 ಜನರನ್ನು ಪೊಲೀಸರು ಮತ್ತು ಎಸ್ಡಿಆರ್ಎಫ್ ತಂಡ ಜಂಟಿ ಕಾರ್ಯಾಚರಣೆ ಕೈಗೊಂಡು ರಕ್ಷಿಸಿದ್ದಾರೆ.</p><p>ಮಳೆಯ ಪರಿಣಾಮ ಜಮ್ಮು, ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಮೂರು ಗಂಟೆಗಳಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.</p><p>ಮದನ್ ಲಾಲ್ (52) ಎನ್ನುವವರು ಬುಧವಾರ ಬಳಿಗ್ಗೆ 8.45ರ ಹೊತ್ತಿಗೆ ತವಿ ನದಿಯ ಬಳಿ ಮರಳು ತೆಗೆಯಲು ಹೋಗಿದ್ದರು, ಈ ಸಮಯದಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಳವಾಗಿ ಸುಮಾರು 2 ಗಂಟೆಗಳ ಕಾಲ ಅಲ್ಲಿಯೇ ಸಿಲುಕಿದ್ದರು. ಇವರನ್ನು ಎಸ್ಡಿಆರ್ಎಫ್ ಸಿಬ್ಬಂದಿ ಸೇತುವೆ ಮೇಲಿನಿಂದ ನದಿಗೆ ಏಣಿಯನ್ನು ಇಳಿಸಿ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪಿಂಡದಾನಕ್ಕೆ ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಸಿಲಕಿದ್ದರು, ಇವರನ್ನೂ ಸೇರಿ ಇನ್ನೂ ಏಳು ಜನರನ್ನು ರಕ್ಷಿಸಲಾಗಿದೆ. ಅಪಾಯಕ್ಕೆ ಸಿಲುಕಿದ್ದ ಹಲವು ಕುದರೆಗಳನ್ನೂ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p><p>ನದಿ ನೀರಿನ ಮಟ್ಟ ಹೆಚ್ಚಳವಾದ ಕಾರಣ ರಜೌರಿ ಸೇರಿ ಹಲವೆಡೆ ಪ್ರವಾಹ ಸ್ಥಿತಿ ಎದುರಾಗಿದೆ. ಜೂನ್ 27ರವರೆಗೆ ಜಮ್ಮುವಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಭಾರಿ ಮಳೆಯಾದ ಪರಿಣಾಮ ತವಿ ನದಿಯ ನೀರಿನ ಮಟ್ಟದಲ್ಲಿ ಏಕಾಏಕಿ ಏರಿಕೆಯಾಗಿದ್ದು, ನದಿಯ ಬಳಿ ಸಿಲುಕಿದ್ದ 9 ಜನರನ್ನು ಪೊಲೀಸರು ಮತ್ತು ಎಸ್ಡಿಆರ್ಎಫ್ ತಂಡ ಜಂಟಿ ಕಾರ್ಯಾಚರಣೆ ಕೈಗೊಂಡು ರಕ್ಷಿಸಿದ್ದಾರೆ.</p><p>ಮಳೆಯ ಪರಿಣಾಮ ಜಮ್ಮು, ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಮೂರು ಗಂಟೆಗಳಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.</p><p>ಮದನ್ ಲಾಲ್ (52) ಎನ್ನುವವರು ಬುಧವಾರ ಬಳಿಗ್ಗೆ 8.45ರ ಹೊತ್ತಿಗೆ ತವಿ ನದಿಯ ಬಳಿ ಮರಳು ತೆಗೆಯಲು ಹೋಗಿದ್ದರು, ಈ ಸಮಯದಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಳವಾಗಿ ಸುಮಾರು 2 ಗಂಟೆಗಳ ಕಾಲ ಅಲ್ಲಿಯೇ ಸಿಲುಕಿದ್ದರು. ಇವರನ್ನು ಎಸ್ಡಿಆರ್ಎಫ್ ಸಿಬ್ಬಂದಿ ಸೇತುವೆ ಮೇಲಿನಿಂದ ನದಿಗೆ ಏಣಿಯನ್ನು ಇಳಿಸಿ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪಿಂಡದಾನಕ್ಕೆ ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಸಿಲಕಿದ್ದರು, ಇವರನ್ನೂ ಸೇರಿ ಇನ್ನೂ ಏಳು ಜನರನ್ನು ರಕ್ಷಿಸಲಾಗಿದೆ. ಅಪಾಯಕ್ಕೆ ಸಿಲುಕಿದ್ದ ಹಲವು ಕುದರೆಗಳನ್ನೂ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p><p>ನದಿ ನೀರಿನ ಮಟ್ಟ ಹೆಚ್ಚಳವಾದ ಕಾರಣ ರಜೌರಿ ಸೇರಿ ಹಲವೆಡೆ ಪ್ರವಾಹ ಸ್ಥಿತಿ ಎದುರಾಗಿದೆ. ಜೂನ್ 27ರವರೆಗೆ ಜಮ್ಮುವಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>