<p><strong>ನವದೆಹಲಿ</strong>: ತೆರಿಗೆ ಪಾವತಿದಾರರಿಗೆ ಹೆಚ್ಚು ತೊಂದರೆಯಾಗದಂತೆ ತೆರಿಗೆ ಸಂಗ್ರಹವು ಸುಗಮ ಪ್ರಕ್ರಿಯೆಯಾಗಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಹೇಳಿದ್ದಾರೆ.</p>.<p>ರಾಷ್ಟ್ರಪತಿ ಭವನದಲ್ಲಿ ಭಾರತೀಯ ಕಂದಾಯ ಸೇವೆಯ (ಸುಂಕ ಮತ್ತು ಪರೋಕ್ಷ ತೆರಿಗೆ) ತರಬೇತಿನಿರತ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾರದರ್ಶಕ, ಜವಾಬ್ದಾರಿಯುತ ಮತ್ತು ತಂತ್ರಜ್ಞಾನ ಚಾಲಿತವಾದ ವ್ಯವಸ್ಥೆಗಳನ್ನು ರೂಪಿಸುವಂತೆ ಹೇಳಿದರು.</p>.<p>‘ರಾಷ್ಟ್ರ ನಿರ್ಮಾಣಕ್ಕೆ ತೆರಿಗೆ ಸಂಗ್ರಹವು ನಿರ್ಣಾಯಕವಾಗಿದೆ. ಇದು ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಮಾಜ ಕಲ್ಯಾಣಕ್ಕಾಗಿ ಹಣಕಾಸು ಒದಗಿಸುವ ಮೂಲವಾಗಿದೆ. ಆದ್ದರಿಂದ, ನೀವು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಭಾಗವಹಿಸುವವರು’ ಎಂದು ಮುರ್ಮು ಅವರು ಅಧಿಕಾರಿಗಳಿಗೆ ತಿಳಿಸಿದರು.</p>.<p>ಈ ವರ್ಷ ಸೆಪ್ಟೆಂಬರ್ನಲ್ಲಿ ಪರಿಚಯಿಸಲಾದ ಸರಕು ಮತ್ತು ಸೇವಾ ತೆರಿಗೆಗಳ ಸುಧಾರಣೆಯು ಭಾರತದ ತೆರಿಗೆ ವ್ಯವಸ್ಥೆಯನ್ನು ಮರುರೂಪಿಸುವಲ್ಲಿ ಪ್ರಮುಖ ಹೆಗ್ಗುರುತಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತೆರಿಗೆ ಪಾವತಿದಾರರಿಗೆ ಹೆಚ್ಚು ತೊಂದರೆಯಾಗದಂತೆ ತೆರಿಗೆ ಸಂಗ್ರಹವು ಸುಗಮ ಪ್ರಕ್ರಿಯೆಯಾಗಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಹೇಳಿದ್ದಾರೆ.</p>.<p>ರಾಷ್ಟ್ರಪತಿ ಭವನದಲ್ಲಿ ಭಾರತೀಯ ಕಂದಾಯ ಸೇವೆಯ (ಸುಂಕ ಮತ್ತು ಪರೋಕ್ಷ ತೆರಿಗೆ) ತರಬೇತಿನಿರತ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾರದರ್ಶಕ, ಜವಾಬ್ದಾರಿಯುತ ಮತ್ತು ತಂತ್ರಜ್ಞಾನ ಚಾಲಿತವಾದ ವ್ಯವಸ್ಥೆಗಳನ್ನು ರೂಪಿಸುವಂತೆ ಹೇಳಿದರು.</p>.<p>‘ರಾಷ್ಟ್ರ ನಿರ್ಮಾಣಕ್ಕೆ ತೆರಿಗೆ ಸಂಗ್ರಹವು ನಿರ್ಣಾಯಕವಾಗಿದೆ. ಇದು ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಮಾಜ ಕಲ್ಯಾಣಕ್ಕಾಗಿ ಹಣಕಾಸು ಒದಗಿಸುವ ಮೂಲವಾಗಿದೆ. ಆದ್ದರಿಂದ, ನೀವು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಭಾಗವಹಿಸುವವರು’ ಎಂದು ಮುರ್ಮು ಅವರು ಅಧಿಕಾರಿಗಳಿಗೆ ತಿಳಿಸಿದರು.</p>.<p>ಈ ವರ್ಷ ಸೆಪ್ಟೆಂಬರ್ನಲ್ಲಿ ಪರಿಚಯಿಸಲಾದ ಸರಕು ಮತ್ತು ಸೇವಾ ತೆರಿಗೆಗಳ ಸುಧಾರಣೆಯು ಭಾರತದ ತೆರಿಗೆ ವ್ಯವಸ್ಥೆಯನ್ನು ಮರುರೂಪಿಸುವಲ್ಲಿ ಪ್ರಮುಖ ಹೆಗ್ಗುರುತಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>