<p><strong>ನವದೆಹಲಿ:</strong> ಶಿಕ್ಷಣಕ್ಕೆ ಆದ್ಯತೆ ನೀಡಲು ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರವು, ತೆರಿಗೆದಾರರ ಹಣವನ್ನು ಬಳಸಿಕೊಳ್ಳುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ. </p><p>ಪಶ್ಚಿಮ ವಿಹಾರದ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. </p><p>ನಮ್ಮ (ಎಎಪಿ) ಸರ್ಕಾರ ಅಧಿಕಾರಕ್ಕೆ ಬಂದಾಗ ಶಿಕ್ಷಣಕ್ಕಾಗಿ ಬಜೆಟ್ ಅನ್ನು ದ್ವಿಗುಣಗೊಳಿಸಿದ್ದೇವೆ. ಆದರೆ ದೆಹಲಿಯ ನಿವಾಸಿಗಳ ಬೆಂಬಲವಿಲ್ಲದೆ ಈ ಎಲ್ಲ ಶಾಲೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿರಲಿಲ್ಲ. ತೆರಿಗೆದಾರರ ಹಣ ನಮಗೆ ಉಚಿತ ಶಿಕ್ಷಣ ನೀಡಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ. </p><p>ನೀವು (ಮಕ್ಕಳು) ಬೆಳೆದು ದೊಡ್ಡವರಾಗಿ ಜೀವನದಲ್ಲಿ ಏನನ್ನಾದರೂ ಸಾಧಿಸಿದಾಗ, ನೆನಪಿಡಿ, ನಿಮ್ಮ ಶಿಕ್ಷಣಕ್ಕಾಗಿ ದೇಶವು ಪಾವತಿ ಮಾಡಿದೆ. ಮಕ್ಕಳು ಇಡೀ ದೇಶವೇ ಹೆಮ್ಮೆಪಟ್ಟುಕೊಳ್ಳುವಂತೆ ಮಾಡಬೇಕು ಎಂದು ಅವರು ಸಲಹೆ ನೀಡಿದರು. </p><p>ಬಡ ಕುಟುಂಬದ ಮಕ್ಕಳ ಶಿಕ್ಷಣಕ್ಕಾಗಿ ದುಡಿದ ಸಂತೃಪ್ತಿ ನನಗಿದೆ ಎಂದು ಅವರು ಉಲ್ಲೇಖಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಶಿಕ್ಷಣಕ್ಕೆ ಆದ್ಯತೆ ನೀಡಲು ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರವು, ತೆರಿಗೆದಾರರ ಹಣವನ್ನು ಬಳಸಿಕೊಳ್ಳುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ. </p><p>ಪಶ್ಚಿಮ ವಿಹಾರದ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. </p><p>ನಮ್ಮ (ಎಎಪಿ) ಸರ್ಕಾರ ಅಧಿಕಾರಕ್ಕೆ ಬಂದಾಗ ಶಿಕ್ಷಣಕ್ಕಾಗಿ ಬಜೆಟ್ ಅನ್ನು ದ್ವಿಗುಣಗೊಳಿಸಿದ್ದೇವೆ. ಆದರೆ ದೆಹಲಿಯ ನಿವಾಸಿಗಳ ಬೆಂಬಲವಿಲ್ಲದೆ ಈ ಎಲ್ಲ ಶಾಲೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿರಲಿಲ್ಲ. ತೆರಿಗೆದಾರರ ಹಣ ನಮಗೆ ಉಚಿತ ಶಿಕ್ಷಣ ನೀಡಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ. </p><p>ನೀವು (ಮಕ್ಕಳು) ಬೆಳೆದು ದೊಡ್ಡವರಾಗಿ ಜೀವನದಲ್ಲಿ ಏನನ್ನಾದರೂ ಸಾಧಿಸಿದಾಗ, ನೆನಪಿಡಿ, ನಿಮ್ಮ ಶಿಕ್ಷಣಕ್ಕಾಗಿ ದೇಶವು ಪಾವತಿ ಮಾಡಿದೆ. ಮಕ್ಕಳು ಇಡೀ ದೇಶವೇ ಹೆಮ್ಮೆಪಟ್ಟುಕೊಳ್ಳುವಂತೆ ಮಾಡಬೇಕು ಎಂದು ಅವರು ಸಲಹೆ ನೀಡಿದರು. </p><p>ಬಡ ಕುಟುಂಬದ ಮಕ್ಕಳ ಶಿಕ್ಷಣಕ್ಕಾಗಿ ದುಡಿದ ಸಂತೃಪ್ತಿ ನನಗಿದೆ ಎಂದು ಅವರು ಉಲ್ಲೇಖಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>