<p><strong>ನವದೆಹಲಿ:</strong> ಕ್ಷಯರೋಗದಿಂದ ಯುವ ಸಮೂಹದ ಸಾವಿನ ಸಂಭವನೀಯತೆಯ ಮುನ್ಸೂಚನೆ ನೀಡುವ ವ್ಯವಸ್ಥೆಯನ್ನು ತಮಿಳುನಾಡು ಸರ್ಕಾರ ಜಾರಿಗೊಳಿಸಿದೆ. ಈ ಉಪಕ್ರಮ ಕೈಗೊಂಡ ದೇಶದ ಮೊದಲ ರಾಜ್ಯವಾಗಿದೆ. </p>.<p>ರಾಜ್ಯದಾದ್ಯಂತ ಜಾರಿಗೊಳಿಸಿರುವ ‘ಟಿಬಿ ಸೇವಾ’ ಅಪ್ಲಿಕೇಷನ್ನೊಂದಿಗೆ ಇದನ್ನು ಸಂಯೋಜಿಸಲಾಗಿದ್ದು, ರೋಗ ಪತ್ತೆಗೆ ಅನುಕೂಲಕರವಾಗಿದೆ.</p>.<p class="bodytext">ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ (ಐಸಿಎಂಆರ್) ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ಸಂಸ್ಥೆಯು (ಎನ್ಐಇ) ಅಭಿವೃದ್ಧಿಪಡಿಸಿದ ಈ ಮಾದರಿಗೆ ಕಳೆದ ವಾರ ಚಾಲನೆ ನೀಡಲಾಗಿತ್ತು. ತೀವ್ರ ಅಸ್ವಸ್ಥರಾಗಿರುವ ಕ್ಷಯರೋಗಿಗಳಿಗೆ ರೋಗ ಪತ್ತೆಯಿಂದ ಹಿಡಿದು ಆಸ್ಪತ್ರೆಗೆ ದಾಖಲಾಗುವವರೆಗಿನ ಸರಾಸರಿ ಸಮಯವನ್ನು ಕಡಿಮೆ ಮಾಡುವ ಮೂಲಕ ಸಾವಿನ ಪ್ರಮಾಣವನ್ನು ಕಡಿಮೆಗೊಳಿಸುವ ಗುರಿ ಹೊಂದಲಾಗಿದೆ ಎಂದು ತಮಿಳುನಾಡಿನ ಟಿಬಿ ಅಧಿಕಾರಿ ಡಾ.ಆಶಾ ಫ್ರೆಡೆರಿಕ್ ತಿಳಿಸಿದ್ದಾರೆ.</p>.<p>ವಯಸ್ಕರಲ್ಲಿ ಹೊಸದಾಗಿ ಅಪೌಷ್ಟಿಕತೆ, ಉಸಿರಾಟದ ತೊಂದರೆ, ತೀವ್ರ ಜ್ವರ, ತಲೆನೋವು, ಕೆಮ್ಮು, ಎದೆನೋವು, ದೇಹದ ತೂಕ ಇಳಿಕೆ ಮುಂತಾದ ಲಕ್ಷಣ ಕಂಡುಬಂದರೆ ಆ ಮಾಹಿತಿಯನ್ನು ಆರೋಗ್ಯ ಕಾರ್ಯಕರ್ತರು ‘ಟಿಬಿ ಸೇವಾ’ ಅಪ್ಲಿಕೇಷನ್ನಲ್ಲಿ ಸೇರಿಸುತ್ತಾರೆ. ಇದರಿಂದ ಆ ವ್ಯಕ್ತಿಯಲ್ಲಿ ರೋಗದ ತೀವ್ರತೆ ಎಷ್ಟಿದೆ ಎಂಬ ಮಾಹಿತಿ ತಿಳಿಯಲಿದೆ. ಇದರ ಆಧಾರದ ಮೇಲೆ ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕ್ಷಯರೋಗದಿಂದ ಯುವ ಸಮೂಹದ ಸಾವಿನ ಸಂಭವನೀಯತೆಯ ಮುನ್ಸೂಚನೆ ನೀಡುವ ವ್ಯವಸ್ಥೆಯನ್ನು ತಮಿಳುನಾಡು ಸರ್ಕಾರ ಜಾರಿಗೊಳಿಸಿದೆ. ಈ ಉಪಕ್ರಮ ಕೈಗೊಂಡ ದೇಶದ ಮೊದಲ ರಾಜ್ಯವಾಗಿದೆ. </p>.<p>ರಾಜ್ಯದಾದ್ಯಂತ ಜಾರಿಗೊಳಿಸಿರುವ ‘ಟಿಬಿ ಸೇವಾ’ ಅಪ್ಲಿಕೇಷನ್ನೊಂದಿಗೆ ಇದನ್ನು ಸಂಯೋಜಿಸಲಾಗಿದ್ದು, ರೋಗ ಪತ್ತೆಗೆ ಅನುಕೂಲಕರವಾಗಿದೆ.</p>.<p class="bodytext">ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ (ಐಸಿಎಂಆರ್) ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ಸಂಸ್ಥೆಯು (ಎನ್ಐಇ) ಅಭಿವೃದ್ಧಿಪಡಿಸಿದ ಈ ಮಾದರಿಗೆ ಕಳೆದ ವಾರ ಚಾಲನೆ ನೀಡಲಾಗಿತ್ತು. ತೀವ್ರ ಅಸ್ವಸ್ಥರಾಗಿರುವ ಕ್ಷಯರೋಗಿಗಳಿಗೆ ರೋಗ ಪತ್ತೆಯಿಂದ ಹಿಡಿದು ಆಸ್ಪತ್ರೆಗೆ ದಾಖಲಾಗುವವರೆಗಿನ ಸರಾಸರಿ ಸಮಯವನ್ನು ಕಡಿಮೆ ಮಾಡುವ ಮೂಲಕ ಸಾವಿನ ಪ್ರಮಾಣವನ್ನು ಕಡಿಮೆಗೊಳಿಸುವ ಗುರಿ ಹೊಂದಲಾಗಿದೆ ಎಂದು ತಮಿಳುನಾಡಿನ ಟಿಬಿ ಅಧಿಕಾರಿ ಡಾ.ಆಶಾ ಫ್ರೆಡೆರಿಕ್ ತಿಳಿಸಿದ್ದಾರೆ.</p>.<p>ವಯಸ್ಕರಲ್ಲಿ ಹೊಸದಾಗಿ ಅಪೌಷ್ಟಿಕತೆ, ಉಸಿರಾಟದ ತೊಂದರೆ, ತೀವ್ರ ಜ್ವರ, ತಲೆನೋವು, ಕೆಮ್ಮು, ಎದೆನೋವು, ದೇಹದ ತೂಕ ಇಳಿಕೆ ಮುಂತಾದ ಲಕ್ಷಣ ಕಂಡುಬಂದರೆ ಆ ಮಾಹಿತಿಯನ್ನು ಆರೋಗ್ಯ ಕಾರ್ಯಕರ್ತರು ‘ಟಿಬಿ ಸೇವಾ’ ಅಪ್ಲಿಕೇಷನ್ನಲ್ಲಿ ಸೇರಿಸುತ್ತಾರೆ. ಇದರಿಂದ ಆ ವ್ಯಕ್ತಿಯಲ್ಲಿ ರೋಗದ ತೀವ್ರತೆ ಎಷ್ಟಿದೆ ಎಂಬ ಮಾಹಿತಿ ತಿಳಿಯಲಿದೆ. ಇದರ ಆಧಾರದ ಮೇಲೆ ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>