<p><strong>ತಿರುವನಂತಪುರ:</strong> ಶಬರಿಮಲೆ ಹೆಸರಿನಲ್ಲಿ ಭಕ್ತರಿಂದ ಅಕ್ರಮವಾಗಿ ಹಣ ಸಂಗ್ರಹಿಸುತ್ತಿರುವುದನ್ನು ತಡೆಯುವುದಕ್ಕಾಗಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಬಿಡಿ) ಅಧಿಕೃತವಾಗಿ ಪ್ರಾಯೋಜಕತ್ವ ಸಮನ್ವಯಕಾರರನ್ನು ನೇಮಕಗೊಳಿಸಿದೆ.</p>.<p>ಈ ಕುರಿತು ಗುರುವಾರ ಪ್ರಕಟಣೆ ಹೊರಡಿಸಿರುವ ಟಿಬಿಡಿ, ‘ವಿವಿಧ ರಾಜ್ಯಗಳಲ್ಲಿ ಕೆಲವು ಮಂದಿ ದೇಗುಲದ ಆಡಳಿತ ಮಂಡಳಿಯ ಸದಸ್ಯರ ಸೋಗಿನಲ್ಲಿ ಹಣ ಸಂಗ್ರಹಿಸುತ್ತಿರುವುದು ಕಂಡುಬಂದಿತ್ತು. ಈ ಕಾರಣದಿಂದ ದೇಗುಲದ ಸಾರ್ವಜನಿಕ ವ್ಯವಹಾರ ಅಧಿಕಾರಿ ಜಿ.ಎಸ್ ಅರುಣ್ ಅವರನ್ನು ಪ್ರಾಯೋಜಕತ್ವ ಸಮನ್ವಯಕಾರರನ್ನಾಗಿ, ಛಾಯಾಗ್ರಾಹಕರಾದ ಪಿ.ವಿಜಯ್ ಕುಮಾರ್ ಅವರನ್ನು ಸಹಾಯಕ ಪ್ರಾಯೋಜಕತ್ವ ಸಮನ್ವಯಕಾರರನ್ನಾಗಿ ನೇಮಿಸಲಾಗಿದೆ’ ಎಂದು ಹೇಳಿದೆ.</p>.<p class="title">‘ದೇವಾಲಯಕ್ಕೆ ಹಣ ಸಹಾಯ ಮಾಡಬಯಸುವವರು ಈ ಅಧಿಕಾರಿಗಳ ಮುಖಾಂತರ ಅಥವಾ ಶಬರಿಮಲೆ ದೇಗುಲದಲ್ಲಿರುವ ಕಾರ್ಯನಿರ್ವಾಹಕರ ಕಚೇರಿಗೆ ಬಂದು ದೇಣಿಗೆ ನೀಡಬಹುದು. ತಿರುವಾಂಕೂರು ದೇವಸ್ವಂ ಮಂಡಳಿಯ ಅಧಿಕೃತ ವೆಬ್ಸೈಟ್ ಮೂಲಕವೂ ದೇಣಿಗೆ ನೀಡಬಹುದು. ಇದರ ಹೊರತಾಗಿ ಬೇರೆ ಯಾರೇ ಹಣ ಸಂಗ್ರಹಿಸಿದರೂ ಅದಕ್ಕೆ ಮಂಡಳಿ ಜವಾಬ್ದಾರಿಯಲ್ಲ’ ಎಂದೂ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಶಬರಿಮಲೆ ಹೆಸರಿನಲ್ಲಿ ಭಕ್ತರಿಂದ ಅಕ್ರಮವಾಗಿ ಹಣ ಸಂಗ್ರಹಿಸುತ್ತಿರುವುದನ್ನು ತಡೆಯುವುದಕ್ಕಾಗಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಬಿಡಿ) ಅಧಿಕೃತವಾಗಿ ಪ್ರಾಯೋಜಕತ್ವ ಸಮನ್ವಯಕಾರರನ್ನು ನೇಮಕಗೊಳಿಸಿದೆ.</p>.<p>ಈ ಕುರಿತು ಗುರುವಾರ ಪ್ರಕಟಣೆ ಹೊರಡಿಸಿರುವ ಟಿಬಿಡಿ, ‘ವಿವಿಧ ರಾಜ್ಯಗಳಲ್ಲಿ ಕೆಲವು ಮಂದಿ ದೇಗುಲದ ಆಡಳಿತ ಮಂಡಳಿಯ ಸದಸ್ಯರ ಸೋಗಿನಲ್ಲಿ ಹಣ ಸಂಗ್ರಹಿಸುತ್ತಿರುವುದು ಕಂಡುಬಂದಿತ್ತು. ಈ ಕಾರಣದಿಂದ ದೇಗುಲದ ಸಾರ್ವಜನಿಕ ವ್ಯವಹಾರ ಅಧಿಕಾರಿ ಜಿ.ಎಸ್ ಅರುಣ್ ಅವರನ್ನು ಪ್ರಾಯೋಜಕತ್ವ ಸಮನ್ವಯಕಾರರನ್ನಾಗಿ, ಛಾಯಾಗ್ರಾಹಕರಾದ ಪಿ.ವಿಜಯ್ ಕುಮಾರ್ ಅವರನ್ನು ಸಹಾಯಕ ಪ್ರಾಯೋಜಕತ್ವ ಸಮನ್ವಯಕಾರರನ್ನಾಗಿ ನೇಮಿಸಲಾಗಿದೆ’ ಎಂದು ಹೇಳಿದೆ.</p>.<p class="title">‘ದೇವಾಲಯಕ್ಕೆ ಹಣ ಸಹಾಯ ಮಾಡಬಯಸುವವರು ಈ ಅಧಿಕಾರಿಗಳ ಮುಖಾಂತರ ಅಥವಾ ಶಬರಿಮಲೆ ದೇಗುಲದಲ್ಲಿರುವ ಕಾರ್ಯನಿರ್ವಾಹಕರ ಕಚೇರಿಗೆ ಬಂದು ದೇಣಿಗೆ ನೀಡಬಹುದು. ತಿರುವಾಂಕೂರು ದೇವಸ್ವಂ ಮಂಡಳಿಯ ಅಧಿಕೃತ ವೆಬ್ಸೈಟ್ ಮೂಲಕವೂ ದೇಣಿಗೆ ನೀಡಬಹುದು. ಇದರ ಹೊರತಾಗಿ ಬೇರೆ ಯಾರೇ ಹಣ ಸಂಗ್ರಹಿಸಿದರೂ ಅದಕ್ಕೆ ಮಂಡಳಿ ಜವಾಬ್ದಾರಿಯಲ್ಲ’ ಎಂದೂ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>