ಕುಂಚನಪಲ್ಲಿಯಲ್ಲಿರುವ ಸಿಐಡಿ ವಿಶೇಷ ತನಿಖಾ ತಂಡದ (ಎಸ್ಐಟಿ) ಕಚೇರಿಯಲ್ಲಿ ಸುದೀರ್ಘ 10 ಗಂಟೆಗಳ ವಿಚಾರಣೆ ನಡೆಸಿದ ನಂತರ ಚಂದ್ರಬಾಬು ನಾಯ್ಡು ಅವರನ್ನು ನಸುಕಿನ ವೇಳೆ 3.40 ಗಂಟೆ ಸುಮಾರಿಗೆ ವೈದ್ಯಕೀಯ ಪರೀಕ್ಷೆಗಾಗಿ ವಿಜಯವಾಡದ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಕೌಶಲ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಈ ಹಗರಣದಿಂದ ರಾಜ್ಯದ (ಆಂಧ್ರಪ್ರದೇಶ) ಬೊಕ್ಕಸಕ್ಕೆ ₹300 ಕೋಟಿ ನಷ್ಟವಾಗಿದೆ ಎಂದು ಆರೋಪಿಸಲಾಗಿದೆ.
ನಾಯ್ಡು ಅವರ ಬಂಧನವನ್ನು ವಿರೋಧಿಸಿ ಇಂದು (ಭಾನುವಾರ) ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ದಿನದ ಉಪವಾಸದಲ್ಲಿ ಪಾಲ್ಗೊಳ್ಳುವಂತೆ ಟಿಡಿಪಿ ತನ್ನ ಬೆಂಬಲಿಗರಿಗೆ ಕರೆ ನೀಡಿದೆ.