<p><strong>ಅಮರಾವತಿ</strong>: ಆಂಧ್ರ ಪ್ರದೇಶದ ತೆಲುಗು ದೇಶಂ ಪಕ್ಷವು(ಟಿಡಿಪಿ) ಎನ್ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗಲಿದೆ ಎಂಬ ಊಹಾಪೋಹಗಳ ನಡುವೆ ಪಕ್ಷದ ವರಿಷ್ಠ ಚಂದ್ರಬಾಬು ನಾಯ್ಡು ಗುರುವಾರ ಹೈದರಾಬಾದ್ನಿಂದ ದೆಹಲಿಗೆ ತೆರಳಿದ್ದಾರೆ.</p><p>ನಾಯ್ಡು, ಬಿಜೆಪಿ ವರಿಷ್ಠರನ್ನು ಭೇಟಿ ಮಾಡುವ ಮೂಲಕ ಚುನಾವಣಾ ಪೂರ್ವ ಮೈತ್ರಿ ಮತ್ತು ಸೀಟು ಹಂಚಿಕೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p><p>ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ವರಿಷ್ಠರ ಭೇಟಿಗೆ ನಾಯ್ಡು ಅವರು ದೆಹಲಿಗೆ ತೆರಳುತ್ತಿರುವುದು ಎರಡನೇ ಬಾರಿಯಾಗಿದೆ.</p><p>ಆಂಧ್ರ ಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷರಾದ ಡಿ. ಪುರಂದೇಶ್ವರಿ ಈಗಾಗಲೇ ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ.</p><p> ‘ಚುನಾವಣೆ ಅಧಿಸೂಚನೆಗೆ ಬಹಳ ಸಮಯ ಉಳಿದಿಲ್ಲ. ಹೀಗಾಗಿ, ಈ ಭೇಟಿಯಲ್ಲೇ ಮೈತ್ರಿ ಕುರಿತ ನಿರ್ಧಾರ ಅಂತಿಮಗೊಳ್ಳುವ ಸಾಧ್ಯತೆ ಇದೆ. ಮೈತ್ರಿ ಕುರಿತ ಸ್ಪಷ್ಟನೆಗಾಗಿ ಕಾಯುತ್ತಿದ್ದೇವೆ’ ಎಂದು ಟಿಡಿಪಿ ಮೂಲಗಳು ತಿಳಿಸಿವೆ.</p><p>ನಾಯ್ಡು ಅವರು ಇಂದೇ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.</p><p>ಇಂದು ರಾತ್ರಿ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಸಹ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ಅವರು ನಾಯ್ಡು ಅವರನ್ನು ಸೇರಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.</p><p>ಇತ್ತೀಚೆಗೆ, ಜನಸೇನಾ ಮತ್ತು ಟಿಡಿಪಿ ಪಕ್ಷಗಳು 119 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದವು.</p><p>ಆಂಧ್ರ ಪ್ರದೇಶದಲ್ಲಿ 175 ವಿಧಾನಸಭಾ ಕ್ಷೇತ್ರಗಳು ಮತ್ತು 25 ಲೋಕಸಭಾ ಕ್ಷೇತ್ರಗಳಿವೆ. ನಾಯ್ಡು ಕುಪ್ಪಂನಿಂದ ಸ್ಪರ್ಧಿಸಲಿದ್ದು, ಪವನ್ ಕಲ್ಯಾಣ್ ಸ್ಪರ್ಧಿಸುವ ಕ್ಷೇತ್ರ ಅಂತಿಮಗೊಂಡಿಲ್ಲ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಆಂಧ್ರ ಪ್ರದೇಶದ ತೆಲುಗು ದೇಶಂ ಪಕ್ಷವು(ಟಿಡಿಪಿ) ಎನ್ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗಲಿದೆ ಎಂಬ ಊಹಾಪೋಹಗಳ ನಡುವೆ ಪಕ್ಷದ ವರಿಷ್ಠ ಚಂದ್ರಬಾಬು ನಾಯ್ಡು ಗುರುವಾರ ಹೈದರಾಬಾದ್ನಿಂದ ದೆಹಲಿಗೆ ತೆರಳಿದ್ದಾರೆ.</p><p>ನಾಯ್ಡು, ಬಿಜೆಪಿ ವರಿಷ್ಠರನ್ನು ಭೇಟಿ ಮಾಡುವ ಮೂಲಕ ಚುನಾವಣಾ ಪೂರ್ವ ಮೈತ್ರಿ ಮತ್ತು ಸೀಟು ಹಂಚಿಕೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p><p>ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ವರಿಷ್ಠರ ಭೇಟಿಗೆ ನಾಯ್ಡು ಅವರು ದೆಹಲಿಗೆ ತೆರಳುತ್ತಿರುವುದು ಎರಡನೇ ಬಾರಿಯಾಗಿದೆ.</p><p>ಆಂಧ್ರ ಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷರಾದ ಡಿ. ಪುರಂದೇಶ್ವರಿ ಈಗಾಗಲೇ ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ.</p><p> ‘ಚುನಾವಣೆ ಅಧಿಸೂಚನೆಗೆ ಬಹಳ ಸಮಯ ಉಳಿದಿಲ್ಲ. ಹೀಗಾಗಿ, ಈ ಭೇಟಿಯಲ್ಲೇ ಮೈತ್ರಿ ಕುರಿತ ನಿರ್ಧಾರ ಅಂತಿಮಗೊಳ್ಳುವ ಸಾಧ್ಯತೆ ಇದೆ. ಮೈತ್ರಿ ಕುರಿತ ಸ್ಪಷ್ಟನೆಗಾಗಿ ಕಾಯುತ್ತಿದ್ದೇವೆ’ ಎಂದು ಟಿಡಿಪಿ ಮೂಲಗಳು ತಿಳಿಸಿವೆ.</p><p>ನಾಯ್ಡು ಅವರು ಇಂದೇ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.</p><p>ಇಂದು ರಾತ್ರಿ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಸಹ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ಅವರು ನಾಯ್ಡು ಅವರನ್ನು ಸೇರಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.</p><p>ಇತ್ತೀಚೆಗೆ, ಜನಸೇನಾ ಮತ್ತು ಟಿಡಿಪಿ ಪಕ್ಷಗಳು 119 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದವು.</p><p>ಆಂಧ್ರ ಪ್ರದೇಶದಲ್ಲಿ 175 ವಿಧಾನಸಭಾ ಕ್ಷೇತ್ರಗಳು ಮತ್ತು 25 ಲೋಕಸಭಾ ಕ್ಷೇತ್ರಗಳಿವೆ. ನಾಯ್ಡು ಕುಪ್ಪಂನಿಂದ ಸ್ಪರ್ಧಿಸಲಿದ್ದು, ಪವನ್ ಕಲ್ಯಾಣ್ ಸ್ಪರ್ಧಿಸುವ ಕ್ಷೇತ್ರ ಅಂತಿಮಗೊಂಡಿಲ್ಲ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>