ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಜಗನ್ ರೈತರ ಜಮೀನುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂಬ ಟಿಡಿಪಿ ನಾಯಕರ ಆರೋಪಗಳನ್ನು ತಳ್ಳಿ ಹಾಕುವ ಮೂಲಕ ತಿರುಗೇಟು ನೀಡಿದ್ದಾರೆ.
ಚುನಾವಣಾ ಸಮಯದಲ್ಲಿ ಟಿಡಿಪಿಯು ಪೂರ್ವ ನಿಯೋಜಿತ ಸುಳ್ಳು ಸುದ್ದಿಗಳನ್ನು ಸಮಾಜದಲ್ಲಿ ಪಸರಿಸುತ್ತಿದೆ. ಐವಿಆರ್ಎಸ್ ಕಾಲ್ಗಳನ್ನು ಜನರಿಗೆ ಕಳುಹಿಸುವ ಮೂಲಕ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿದೆ. ಈ ಮೂಲಕ ಕೊಳಕು ರಾಜಕಾರಣದಲ್ಲಿ ತೊಡಗಿದೆ ಎಂದು ಜಗನ್ ವಾಗ್ದಾಳಿ ನಡೆಸಿದ್ದಾರೆ.