ಕಿಂಜರಾಪು ಕುಟುಂಬದ ಹಿಡಿತದಲ್ಲಿರುವ, ಟಿಡಿಪಿ ಭದ್ರಕೋಟೆಯಾಗಿರುವ ನಿಮ್ಮಡಾ ಗ್ರಾಮ ಪಂಚಾಯಿತಿ ಚುನಾವಣೆಗೆ ವೈಎಸ್ಆರ್ಸಿ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿತ್ತು. ಈ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತ್ತು. ಎರಡು ದಿನಗಳ ಹಿಂದೆ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಟಿಡಿಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ.